<p><strong>ಪಟ್ನಾ:</strong> ಬಿಹಾರ ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇರುವಂತೆ, ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ರಾಜ್ಯದಲ್ಲಿ ಹಲವಾರು ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ. </p>.<p>ಇಲ್ಲಿನ ಗಾಂಧಿ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ, ಸ್ವಾತಂತ್ರ್ಯ ದಿನವನ್ನು ಆಚರಿಸಿದ ಬಳಿಕ ನಿತೀಶ್ ಅವರು ನೆರೆದಿದ್ದವರನ್ನು ಉದ್ದೇಶಿಸಿ ಮಾತನಾಡಿದರು. </p>.<p>‘ಬಿಹಾರವು ಅಭಿವೃದ್ಧಿಯತ್ತ ಸಾಗುತ್ತಿದೆ. ಬರುವ ವರ್ಷಗಳಲ್ಲಿ ಸಮಗ್ರ ಅಭಿವೃದ್ಧಿಯೊಂದಿಗೆ ಸಾಗಲಿದೆ. 10 ಲಕ್ಷ ಯುವಕರಿಗೆ ಉದ್ಯೋಗ ನೀಡುವುದಾಗಿ ಈ ಹಿಂದೆ ಭರವಸೆ ನೀಡಿದ್ದೆವು. ಆದರೆ, ಇದೀಗ ರಾಜ್ಯದ ಒಂದು ಕೋಟಿ ಯುವಕರಿಗೆ ಉದ್ಯೋಗ ನೀಡಬೇಕೆನ್ನುವ ಹೊಸ ಗುರಿಯನ್ನು ನಿಗದಿಪಡಿಸಿದ್ದೇವೆ’ ಎಂದು ಹೇಳಿದರು. </p>.<p>‘ಉದ್ಯೋಗಾವಕಾಶ ನೀಡುವುದು ಆರಂಭದಿಂದಲೂ ನಮ್ಮ ಸರ್ಕಾರದ ಆದ್ಯತೆಯಾಗಿದೆ. ಎನ್ಡಿಎ ಸರ್ಕಾರದ ಅಡಿಯಲ್ಲಿ ಬಿಹಾರವು ಅಭಿವೃದ್ಧಿಗೆ ಸಾಕ್ಷಿಯಾಗಿದೆ’ ಎಂದರು. </p>.<p><strong>ರಾಜ್ಯಕ್ಕೆ ನಿತೀಶ್ ಘೋಷಣೆಗಳು:</strong></p><p>*ಬರುವ ವರ್ಷಗಳಲ್ಲಿ ರಾಜ್ಯದಲ್ಲಿ ಒಂದು ಕೋಟಿ ಯುವಕರಿಗೆ ಸರ್ಕಾರಿ ಉದ್ಯೋಗ ಮತ್ತು ಇತರ ಉದ್ಯೋಗಾವಕಾಶ </p><p>*ರಾಜ್ಯದ ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಿಲಿಮಿನರಿ ಪರೀಕ್ಷೆ ಬರೆಯುವ ಎಲ್ಲ ಅಭ್ಯರ್ಥಿಗಳಿಗೂ ₹100 ಶುಲ್ಕ ನಿಗದಿ. ಮುಖ್ಯ ಪರೀಕ್ಷೆಗೆ ಹಾಜರಾಗಲು ಯಾವುದೇ ಶುಲ್ಕ ಇಲ್ಲ </p><p>*ಬಿಹಾರದಲ್ಲಿ ಬಂಡವಾಳ ಹೂಡಲು ಇಚ್ಛಿಸುವವರಿಗೆ ವಿಶೇಷ ರಿಯಾಯಿತಿ ನೀಡಲು ಸರ್ಕಾರ ನಿರ್ಧಾರ </p><p>*ಕಿಶನ್ಗಂಜ್ ಕಟಿಹಾರ ರೊಹತಾಸ್ ಶಿವಹರ್ ಲಖೀಸರಾಯ್ ಅಲವರ್ ಹಾಗೂ ಶೇಖ್ಪುರದಲ್ಲಿ ವೈದ್ಯಕೀಯ ಕಾಲೇಜುಗಳ ನಿರ್ಮಾಣ </p><p>*ಹಬ್ಬಗಳ ಸಂದರ್ಭದಲ್ಲಿ ಬಿಹಾರಕ್ಕೆ ಹೆಚ್ಚುವರಿ ವಿಶೇಷ ರೈಲು ಓಡಿಸಲು ರೈಲ್ವೆ ಸಚಿವಾಲಯಕ್ಕೆ ಮನವಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ:</strong> ಬಿಹಾರ ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇರುವಂತೆ, ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ರಾಜ್ಯದಲ್ಲಿ ಹಲವಾರು ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ. </p>.<p>ಇಲ್ಲಿನ ಗಾಂಧಿ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ, ಸ್ವಾತಂತ್ರ್ಯ ದಿನವನ್ನು ಆಚರಿಸಿದ ಬಳಿಕ ನಿತೀಶ್ ಅವರು ನೆರೆದಿದ್ದವರನ್ನು ಉದ್ದೇಶಿಸಿ ಮಾತನಾಡಿದರು. </p>.<p>‘ಬಿಹಾರವು ಅಭಿವೃದ್ಧಿಯತ್ತ ಸಾಗುತ್ತಿದೆ. ಬರುವ ವರ್ಷಗಳಲ್ಲಿ ಸಮಗ್ರ ಅಭಿವೃದ್ಧಿಯೊಂದಿಗೆ ಸಾಗಲಿದೆ. 10 ಲಕ್ಷ ಯುವಕರಿಗೆ ಉದ್ಯೋಗ ನೀಡುವುದಾಗಿ ಈ ಹಿಂದೆ ಭರವಸೆ ನೀಡಿದ್ದೆವು. ಆದರೆ, ಇದೀಗ ರಾಜ್ಯದ ಒಂದು ಕೋಟಿ ಯುವಕರಿಗೆ ಉದ್ಯೋಗ ನೀಡಬೇಕೆನ್ನುವ ಹೊಸ ಗುರಿಯನ್ನು ನಿಗದಿಪಡಿಸಿದ್ದೇವೆ’ ಎಂದು ಹೇಳಿದರು. </p>.<p>‘ಉದ್ಯೋಗಾವಕಾಶ ನೀಡುವುದು ಆರಂಭದಿಂದಲೂ ನಮ್ಮ ಸರ್ಕಾರದ ಆದ್ಯತೆಯಾಗಿದೆ. ಎನ್ಡಿಎ ಸರ್ಕಾರದ ಅಡಿಯಲ್ಲಿ ಬಿಹಾರವು ಅಭಿವೃದ್ಧಿಗೆ ಸಾಕ್ಷಿಯಾಗಿದೆ’ ಎಂದರು. </p>.<p><strong>ರಾಜ್ಯಕ್ಕೆ ನಿತೀಶ್ ಘೋಷಣೆಗಳು:</strong></p><p>*ಬರುವ ವರ್ಷಗಳಲ್ಲಿ ರಾಜ್ಯದಲ್ಲಿ ಒಂದು ಕೋಟಿ ಯುವಕರಿಗೆ ಸರ್ಕಾರಿ ಉದ್ಯೋಗ ಮತ್ತು ಇತರ ಉದ್ಯೋಗಾವಕಾಶ </p><p>*ರಾಜ್ಯದ ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಿಲಿಮಿನರಿ ಪರೀಕ್ಷೆ ಬರೆಯುವ ಎಲ್ಲ ಅಭ್ಯರ್ಥಿಗಳಿಗೂ ₹100 ಶುಲ್ಕ ನಿಗದಿ. ಮುಖ್ಯ ಪರೀಕ್ಷೆಗೆ ಹಾಜರಾಗಲು ಯಾವುದೇ ಶುಲ್ಕ ಇಲ್ಲ </p><p>*ಬಿಹಾರದಲ್ಲಿ ಬಂಡವಾಳ ಹೂಡಲು ಇಚ್ಛಿಸುವವರಿಗೆ ವಿಶೇಷ ರಿಯಾಯಿತಿ ನೀಡಲು ಸರ್ಕಾರ ನಿರ್ಧಾರ </p><p>*ಕಿಶನ್ಗಂಜ್ ಕಟಿಹಾರ ರೊಹತಾಸ್ ಶಿವಹರ್ ಲಖೀಸರಾಯ್ ಅಲವರ್ ಹಾಗೂ ಶೇಖ್ಪುರದಲ್ಲಿ ವೈದ್ಯಕೀಯ ಕಾಲೇಜುಗಳ ನಿರ್ಮಾಣ </p><p>*ಹಬ್ಬಗಳ ಸಂದರ್ಭದಲ್ಲಿ ಬಿಹಾರಕ್ಕೆ ಹೆಚ್ಚುವರಿ ವಿಶೇಷ ರೈಲು ಓಡಿಸಲು ರೈಲ್ವೆ ಸಚಿವಾಲಯಕ್ಕೆ ಮನವಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>