ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಪ್ರತಿಪಕ್ಷಗಳನ್ನು ಒಗ್ಗೂಡಿಸುವಲ್ಲಿ ಅವರು ಮುಂಚೂಣಿ ನಾಯಕರಾಗಿದ್ದಾರೆ. ‘ಇಂಡಿಯಾ’ ಮೈತ್ರಿಕೂಟದ ಬಗ್ಗೆ ಅಸಮಾಧಾನ ಹೊಂದಿರುವ ನಿತೀಶ್ ಮರಳಿ ಎನ್ಡಿಎ ತೆಕ್ಕೆಗೆ ಸೇರುತ್ತಾರೆ ಎಂಬ ವದಂತಿ ನಡುವೆಯೇ ಅವರು ಸೋಮವಾರ ನಡೆದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ಜನ್ಮದಿನಾಚರಣೆ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.