‘ನಿತೀಶ್ ಅವರು ಬಿಜೆಪಿ ಜತೆ ಮರುಮೈತ್ರಿ ಮಾಡಿಕೊಂಡಿದ್ದರ ಬಗ್ಗೆ ಎರಡು ರೀತಿಯ ಅಭಿಪ್ರಾಯಗಳಿವೆ. ನರೇಂದ್ರ ಮೋದಿ ಅವರಿಗೆ ನಿತೀಶ್ ಪ್ರತಿಸ್ಪರ್ಧಿ ಎಂದು ಪರಿಗಣಿಸುತ್ತಿದ್ದವರಿಗೆ ಈ ನಡೆ ತಪ್ಪಾಗಿ ಕಾಣಿಸುತ್ತಿದೆ. ಮಹಾಮೈತ್ರಿಕೂಟದ ಸರ್ಕಾರದಲ್ಲಿ ನಿತೀಶ್ ರಾಜಿ ಮಾಡಿಕೊಳ್ಳುತ್ತಿದ್ದಾರೆ ಎಂದು ಭಾವಿಸುತ್ತಿದ್ದವರು ಈ ನಡೆಯನ್ನು ಸ್ವಾಗತಿಸಿದ್ದಾರೆ’ ಎಂದು ಕಿಶೋರ್ ವಿವರಿಸಿದ್ದಾರೆ.