<p><strong>ಚೆನ್ನೈ:</strong> ‘ನಿವಾರ್’ ಚಂಡಮಾರುತ ಗುರುವಾರ ಬೆಳಗ್ಗೆ 2.30ರ ಸುಮಾರಿಗೆ ಪುದುಚೇರಿ ಕರಾವಳಿಯನ್ನು ಅಪ್ಪಳಿಸಿದ್ದು ಚಂಡಮಾರುತದ ತೀವ್ರತೆ ದುರ್ಬಲವಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.</p>.<p>ಮುಂದಿನ ಕೆಲವು ಗಂಟೆಗಳಲ್ಲಿ ನಿವಾರ್ ಚಂಡಮಾರುತದತೀವ್ರತೆದುರ್ಬಲಗೊಳ್ಳಲಿದೆ. ಇಲ್ಲಿಯವರೆಗೂ ಪುದುಚೇರಿಯಲ್ಲಿ 233 ಮಿ.ಮೀಟರ್ಹಾಗೂ ಕಡಲೂರಿನಲ್ಲಿ 237 ಮಿ.ಮೀಟರ್ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಆದಾಗ್ಯೂ ಚೆನ್ನೈ, ಪುದುಚೇರಿ, ನಾಗಪಟ್ಟಣಂ, ಕಾಂಚೀಪುರಂ, ಚಿದಂಬರಂ, ತಿರುವಲ್ಲೂರು, ಚೆಂಗಲ್ಪಟ್ಟು ಸೇರಿದಂತೆ ತಮಿಳುನಾಡಿನ 16 ಜಿಲ್ಲೆಗಳಲ್ಲಿ ಚಂಡಮಾರುತದ ಪರಿಣಾಮ ವ್ಯಾಪಕ ಮಳೆ ಸುರಿಯುತ್ತಿದ್ದು ಗುರುವಾರವೂ ಸರ್ಕಾರಿ ರಜೆ ಘೋಷಿಸಲಾಗಿದೆ.</p>.<p>ಬುಧವಾರ ಬೆಳಿಗ್ಗೆ 5.30ರ ಹೊತ್ತಿಗೆ ಗಂಟೆಗೆ 7 ಕಿ.ಮೀ. ವೇಗದಲ್ಲಿ ಸಾಗುತ್ತಿದ್ದ ‘ನಿವಾರ್’ ಸಂಜೆ 5 ಗಂಟೆಯ ಹೊತ್ತಿಗೆ ವೇಗವನ್ನು 16 ಕಿ.ಮೀ.ಗೆ ಹೆಚ್ಚಿಸಿಕೊಂಡಿತ್ತು. ಚಂಡಮಾರುತವು ಭೂ ಪ್ರದೇಶವನ್ನು ಅಪ್ಪಳಿಸುವ ಸಂದರ್ಭದಲ್ಲಿ ಗಾಳಿಯ ವೇಗ ಗಂಟೆಗೆ 60–70 ಕಿ.ಮೀ. ವೇಗದಲ್ಲಿತ್ತು ಎಂದು ಹವಾಮಾನ ಇಲಾಖೆ ತಿಳಿಸಿದೆ.</p>.<p>ಭಾರತೀಯ ನೌಕಾಪಡೆ ಮತ್ತು ಭಾರತೀಯ ಕರಾವಳಿ ಗಸ್ತು ಪಡೆ ಕೂಡ ವ್ಯಾಪಕ ಸಿದ್ಧತೆಗಳನ್ನು ಮಾಡಿಕೊಂಡಿದೆ. ರಾಜ್ಯ ವಿಪತ್ತು ನಿರ್ವಹಣಾ ತಂಡಗಳ ಜತೆಗೆ ಕೇಂದ್ರ ವಿಪತ್ತು ನಿರ್ವಹಣಾ ಪಡೆಯ ತಂಡಗಳನ್ನು ಕರಾವಳಿ ಪ್ರದೇಶಗಳಲ್ಲಿ ನಿಯೋಜಿಸಲಾಗಿದೆ.</p>.<p>ತಮಿಳುನಾಡಿನವಿವಿಧ ಭಾಗಗಳಲ್ಲಿ 465 ಆಂಬುಲೆನ್ಸ್ಗಳು ಸಿದ್ಧವಾಗಿ ನಿಂತಿವೆ. ‘ನಿವಾರ್’ನಿಂದ ಹೆಚ್ಚು ತೊಂದರೆಗೆ ಒಳಗಾಗುವ ಪ್ರದೇಶ ಪುದುಚೇರಿ ಮತ್ತು ತಮಿಳುನಾಡಿನ ಕಡಲೂರು ಜಿಲ್ಲೆ ಎಂದು ಗುರುತಿಸಲಾಗಿರುವುದರಿಂದ ಈ ಪ್ರದೇಶಗಳ ಮೇಲೆ ಗಮನ ಕೇಂದ್ರೀಕರಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ:</strong> ‘ನಿವಾರ್’ ಚಂಡಮಾರುತ ಗುರುವಾರ ಬೆಳಗ್ಗೆ 2.30ರ ಸುಮಾರಿಗೆ ಪುದುಚೇರಿ ಕರಾವಳಿಯನ್ನು ಅಪ್ಪಳಿಸಿದ್ದು ಚಂಡಮಾರುತದ ತೀವ್ರತೆ ದುರ್ಬಲವಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.</p>.<p>ಮುಂದಿನ ಕೆಲವು ಗಂಟೆಗಳಲ್ಲಿ ನಿವಾರ್ ಚಂಡಮಾರುತದತೀವ್ರತೆದುರ್ಬಲಗೊಳ್ಳಲಿದೆ. ಇಲ್ಲಿಯವರೆಗೂ ಪುದುಚೇರಿಯಲ್ಲಿ 233 ಮಿ.ಮೀಟರ್ಹಾಗೂ ಕಡಲೂರಿನಲ್ಲಿ 237 ಮಿ.ಮೀಟರ್ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಆದಾಗ್ಯೂ ಚೆನ್ನೈ, ಪುದುಚೇರಿ, ನಾಗಪಟ್ಟಣಂ, ಕಾಂಚೀಪುರಂ, ಚಿದಂಬರಂ, ತಿರುವಲ್ಲೂರು, ಚೆಂಗಲ್ಪಟ್ಟು ಸೇರಿದಂತೆ ತಮಿಳುನಾಡಿನ 16 ಜಿಲ್ಲೆಗಳಲ್ಲಿ ಚಂಡಮಾರುತದ ಪರಿಣಾಮ ವ್ಯಾಪಕ ಮಳೆ ಸುರಿಯುತ್ತಿದ್ದು ಗುರುವಾರವೂ ಸರ್ಕಾರಿ ರಜೆ ಘೋಷಿಸಲಾಗಿದೆ.</p>.<p>ಬುಧವಾರ ಬೆಳಿಗ್ಗೆ 5.30ರ ಹೊತ್ತಿಗೆ ಗಂಟೆಗೆ 7 ಕಿ.ಮೀ. ವೇಗದಲ್ಲಿ ಸಾಗುತ್ತಿದ್ದ ‘ನಿವಾರ್’ ಸಂಜೆ 5 ಗಂಟೆಯ ಹೊತ್ತಿಗೆ ವೇಗವನ್ನು 16 ಕಿ.ಮೀ.ಗೆ ಹೆಚ್ಚಿಸಿಕೊಂಡಿತ್ತು. ಚಂಡಮಾರುತವು ಭೂ ಪ್ರದೇಶವನ್ನು ಅಪ್ಪಳಿಸುವ ಸಂದರ್ಭದಲ್ಲಿ ಗಾಳಿಯ ವೇಗ ಗಂಟೆಗೆ 60–70 ಕಿ.ಮೀ. ವೇಗದಲ್ಲಿತ್ತು ಎಂದು ಹವಾಮಾನ ಇಲಾಖೆ ತಿಳಿಸಿದೆ.</p>.<p>ಭಾರತೀಯ ನೌಕಾಪಡೆ ಮತ್ತು ಭಾರತೀಯ ಕರಾವಳಿ ಗಸ್ತು ಪಡೆ ಕೂಡ ವ್ಯಾಪಕ ಸಿದ್ಧತೆಗಳನ್ನು ಮಾಡಿಕೊಂಡಿದೆ. ರಾಜ್ಯ ವಿಪತ್ತು ನಿರ್ವಹಣಾ ತಂಡಗಳ ಜತೆಗೆ ಕೇಂದ್ರ ವಿಪತ್ತು ನಿರ್ವಹಣಾ ಪಡೆಯ ತಂಡಗಳನ್ನು ಕರಾವಳಿ ಪ್ರದೇಶಗಳಲ್ಲಿ ನಿಯೋಜಿಸಲಾಗಿದೆ.</p>.<p>ತಮಿಳುನಾಡಿನವಿವಿಧ ಭಾಗಗಳಲ್ಲಿ 465 ಆಂಬುಲೆನ್ಸ್ಗಳು ಸಿದ್ಧವಾಗಿ ನಿಂತಿವೆ. ‘ನಿವಾರ್’ನಿಂದ ಹೆಚ್ಚು ತೊಂದರೆಗೆ ಒಳಗಾಗುವ ಪ್ರದೇಶ ಪುದುಚೇರಿ ಮತ್ತು ತಮಿಳುನಾಡಿನ ಕಡಲೂರು ಜಿಲ್ಲೆ ಎಂದು ಗುರುತಿಸಲಾಗಿರುವುದರಿಂದ ಈ ಪ್ರದೇಶಗಳ ಮೇಲೆ ಗಮನ ಕೇಂದ್ರೀಕರಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>