‘ರಾಜ್ಯ ಚುನಾವಣಾ ಆಯೋಗವು ರಾಜಕೀಯ ಪಕ್ಷಗಳಿಗೆ ಮುನಿಸಿಪಲ್ ಚುನಾವಣೆಯಲ್ಲಿ ಸ್ಪರ್ಧಿಸಲು ನೀಡಿರುವ ಮಾನ್ಯತೆಯು, ಆಯೋಗದ ಅಧಿಕಾರ ವ್ಯಾಪ್ತಿಯನ್ನು ಮೀರಿದ್ದೇನೂ ಅಲ್ಲ. ರಾಜಕೀಯ ಪಕ್ಷಗಳು ಮುನಿಸಿಪಲ್ ಚುನಾವಣೆಯಲ್ಲಿ ಸ್ಪರ್ಧಿಸಬಾರದು ಎಂಬ ನಿರ್ಬಂಧವೇನೂ ಇಲ್ಲ’ ಎಂದು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ್ ಮತ್ತು ನ್ಯಾಯಮೂರ್ತಿ ಮನಮೀತ್ ಪಿ.ಎಸ್. ಅರೋರ ಅವರು ಇದ್ದ ವಿಭಾಗೀಯ ಪೀಠವು ಸ್ಪಷ್ಟಪಡಿಸಿದೆ.