ಸೂಕ್ತ ರಸ್ತೆ ಸಂಪರ್ಕ ಇಲ್ಲದಿರುವುದು ಮೂರು ಹಳ್ಳಿಗಳ ಆರ್ಥಿಕ, ಸಾಮಾಜಿಕ ಸ್ಥಿತಿಗತಿ ಮೇಲೆಯೂ ಪರಿಣಾಮ ಬೀರಿದೆ. ಗ್ರಾಮಸ್ಥರು ಈ ಬಗ್ಗೆ ಒಟ್ಟಾಗಿ ಚರ್ಚಿಸಿದ್ದು, ಪಿಡಿ ರಿಮೆ ಗ್ರಾಮದಿಂದ ಹಿಜುಮ್ ನದಿಯವರೆಗೂ ಸರ್ವ ಋತು ರಸ್ತೆ ನಿರ್ಮಿಸಬೇಕು ಹಾಗೂ ನದಿಗೆ ಶಾಶ್ವತ ಸೇತುವೆಯನ್ನು ನಿರ್ಮಿಸಲು ಸರ್ಕಾರ ತುರ್ತಾಗಿ ಕ್ರಮ ಕೈಗೊಳ್ಳಬೇಕು. ಪ್ರಧಾನಮಂತ್ರಿ ಗ್ರಾಮೀಣ ಸಡಕ್ ಯೋಜನೆಯಡಿ ಈ ಹಳ್ಳಿಗಳ ರಸ್ತೆ ಅಭಿವೃದ್ಧಿಪಡಿಸಬೇಕು ಎಂದು ಆಗ್ರಹಿಸಿದ್ದಾರೆ.