<p><strong>ನವದೆಹಲಿ:</strong> ಈಚೆಗೆ ನಡೆದ ಮಹಾಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತ ದುರ್ಘಟನೆಯ ತನಿಖೆಯನ್ನು ಉತ್ತರ ಪ್ರದೇಶದ ಸರ್ಕಾರ ನಡೆಸಿದ್ದು, ಸಾವು-ನೋವು ಹಾಗೂ ಗಾಯಗೊಂಡವರ ಬಗ್ಗೆ ಕೇಂದ್ರ ಸರ್ಕಾರದ ಬಳಿ ಅಂಕಿಅಂಶ ಇಲ್ಲ ಎಂದು ಕೇಂದ್ರ ಸರ್ಕಾರವು ಲೋಕಸಭೆಗೆ ಇಂದು (ಮಂಗಳವಾರ) ತಿಳಿಸಿದೆ. </p><p>ಕಾಂಗ್ರೆಸ್ ಸಂಸದ ಕೆ.ಸಿ. ವೇಣುಗೋಪಾಲ್, ಕಾಲ್ತುಳಿತದಲ್ಲಿ ಮೃತಪಟ್ಟವರ ಹಾಗೂ ಗಾಯಾಳುಗಳ ಸಂಖ್ಯೆ ಮತ್ತು ಕಾರಣ ಪತ್ತೆ ಹಚ್ಚಲು ಅಧಿಕಾರಿಗಳು ತೆಗೆದುಕೊಂಡ ಕ್ರಮಗಳ ಕುರಿತು ಪ್ರಶ್ನಿಸಿದರು. </p><p>ಈ ಸಂಬಂಧ ಉತ್ತರಿಸಿದ ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ನಿತ್ಯಾನಂದ ರಾಯ್, 'ಸಂವಿಧಾನದ ಏಳನೇ ವಿಧಿಯ ಪ್ರಕಾರ ಇದು ರಾಜ್ಯಕ್ಕೆ ಸಂಬಂಧಪಟ್ಟ ವಿಷಯವಾಗಿದೆ' ಎಂದು ತಿಳಿಸಿದರು. </p><p>'ಧಾರ್ಮಿಕ ಸಭೆ, ಜನಸಂದಣಿ ನಿರ್ವಹಣೆ, ಭಕ್ತರಿಗೆ ಸೌಲಭ್ಯ ಒದಗಿಸುವುದು, ಇಂತಹ ಸಭೆಗಳ ವೇಳೆ ವಿಪತ್ತು ನಿರ್ವಹಣೆ ಇತ್ಯಾದಿಗಳು 'ಸಾರ್ವಜನಿಕ ವ್ಯವಸ್ಧೆ' ಹಾಗೂ 'ಪೊಲೀಸ್'ಗೆ ಸಂಬಂಧಪಟ್ಟದ್ದಾಗಿದೆ. ಇವುಗಳು ರಾಜ್ಯದ ಅಧೀನತೆಗೆ ಒಳಪಟ್ಟಿರುತ್ತವೆ' ಎಂದು ತಿಳಿಸಿದ್ದಾರೆ. </p><p>'ರಾಜ್ಯಗಳಲ್ಲಿ ಸಂಭವಿಸಿದ ವಿಪತ್ತುಗಳ ಪರಿಶೀಲನೆ ನಡೆಸುವುದು, ಕಾಲ್ತುಳಿತ ಸೇರಿದಂತೆ ಸಂತ್ರಸ್ತರ ಕುಟುಂಬಗಳಿಗೆ ಹಣಕಾಸಿನ ನೆರವು ನೀಡುವುದು ಸಹ ಆಯಾ ರಾಜ್ಯಗಳ ವ್ಯಾಪ್ತಿಗೆ ಬರುತ್ತವೆ. ಅಂತಹ ಸನ್ನಿವೇಶಗಳನ್ನು ನಿಭಾಯಿಸಲು ರಾಜ್ಯ ಸರ್ಕಾರಗಳು ಸಮರ್ಥವಾಗಿವೆ. ಈ ಸಂಬಂಧ ಕೇಂದ್ರವು ಅಂಕಿಅಂಶವನ್ನು ನಿರ್ವಹಿಸುವುದಿಲ್ಲ' ಎಂದು ತಿಳಿಸಿದ್ದಾರೆ. </p><p>'ಹೆಚ್ಚು ಜನರು ಸೇರುವ ಸ್ಥಳಗಳಲ್ಲಿ ಜನಸಂದಣಿ ನಿರ್ವಹಣೆ ಕುರಿತಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ವಿವರವಾದ ಮಾರ್ಗಸೂಚಿಗಳನ್ನು ನಿರ್ದೇಶಿಸಿದೆ' ಎಂದು ಅವರು ತಿಳಿಸಿದ್ದಾರೆ. </p><p>ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆದ ಮಹಾಕುಂಭಮೇಳವು ಜನವರಿ 13ರಿಂದ ಆರಂಭವಾಗಿ ಫೆಬ್ರುವರಿ 26ರಂದು ಮುಕ್ತಾಯಗೊಂಡಿತ್ತು. ಆದರೆ ಜನವರಿ 29, ಮೌನಿ ಅಮಾವಾಸ್ಯೆಯಂದು ಸಂಭವಿಸಿದ್ದ ಕಾಲ್ತುಳಿತದಲ್ಲಿ 30 ಮಂದಿ ಮೃತಪಟ್ಟು, 60 ಮಂದಿ ಗಾಯಗೊಂಡಿದ್ದರು. </p>.ಲೋಕಸಭೆ ವಿರೋಧ ಪಕ್ಷದ ನಾಯಕನಿಗೆ ಮಾತನಾಡಲು ಅವಕಾಶವಿಲ್ಲ: ರಾಹುಲ್ ಅಸಮಾಧಾನ.Kumbh Stampede | ಜೆಸಿಬಿ ಮೂಲಕ ಮೃತದೇಹಗಳ ಸಾಗಾಟ: ವಿಪಕ್ಷಗಳ ಆರೋಪ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಈಚೆಗೆ ನಡೆದ ಮಹಾಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತ ದುರ್ಘಟನೆಯ ತನಿಖೆಯನ್ನು ಉತ್ತರ ಪ್ರದೇಶದ ಸರ್ಕಾರ ನಡೆಸಿದ್ದು, ಸಾವು-ನೋವು ಹಾಗೂ ಗಾಯಗೊಂಡವರ ಬಗ್ಗೆ ಕೇಂದ್ರ ಸರ್ಕಾರದ ಬಳಿ ಅಂಕಿಅಂಶ ಇಲ್ಲ ಎಂದು ಕೇಂದ್ರ ಸರ್ಕಾರವು ಲೋಕಸಭೆಗೆ ಇಂದು (ಮಂಗಳವಾರ) ತಿಳಿಸಿದೆ. </p><p>ಕಾಂಗ್ರೆಸ್ ಸಂಸದ ಕೆ.ಸಿ. ವೇಣುಗೋಪಾಲ್, ಕಾಲ್ತುಳಿತದಲ್ಲಿ ಮೃತಪಟ್ಟವರ ಹಾಗೂ ಗಾಯಾಳುಗಳ ಸಂಖ್ಯೆ ಮತ್ತು ಕಾರಣ ಪತ್ತೆ ಹಚ್ಚಲು ಅಧಿಕಾರಿಗಳು ತೆಗೆದುಕೊಂಡ ಕ್ರಮಗಳ ಕುರಿತು ಪ್ರಶ್ನಿಸಿದರು. </p><p>ಈ ಸಂಬಂಧ ಉತ್ತರಿಸಿದ ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ನಿತ್ಯಾನಂದ ರಾಯ್, 'ಸಂವಿಧಾನದ ಏಳನೇ ವಿಧಿಯ ಪ್ರಕಾರ ಇದು ರಾಜ್ಯಕ್ಕೆ ಸಂಬಂಧಪಟ್ಟ ವಿಷಯವಾಗಿದೆ' ಎಂದು ತಿಳಿಸಿದರು. </p><p>'ಧಾರ್ಮಿಕ ಸಭೆ, ಜನಸಂದಣಿ ನಿರ್ವಹಣೆ, ಭಕ್ತರಿಗೆ ಸೌಲಭ್ಯ ಒದಗಿಸುವುದು, ಇಂತಹ ಸಭೆಗಳ ವೇಳೆ ವಿಪತ್ತು ನಿರ್ವಹಣೆ ಇತ್ಯಾದಿಗಳು 'ಸಾರ್ವಜನಿಕ ವ್ಯವಸ್ಧೆ' ಹಾಗೂ 'ಪೊಲೀಸ್'ಗೆ ಸಂಬಂಧಪಟ್ಟದ್ದಾಗಿದೆ. ಇವುಗಳು ರಾಜ್ಯದ ಅಧೀನತೆಗೆ ಒಳಪಟ್ಟಿರುತ್ತವೆ' ಎಂದು ತಿಳಿಸಿದ್ದಾರೆ. </p><p>'ರಾಜ್ಯಗಳಲ್ಲಿ ಸಂಭವಿಸಿದ ವಿಪತ್ತುಗಳ ಪರಿಶೀಲನೆ ನಡೆಸುವುದು, ಕಾಲ್ತುಳಿತ ಸೇರಿದಂತೆ ಸಂತ್ರಸ್ತರ ಕುಟುಂಬಗಳಿಗೆ ಹಣಕಾಸಿನ ನೆರವು ನೀಡುವುದು ಸಹ ಆಯಾ ರಾಜ್ಯಗಳ ವ್ಯಾಪ್ತಿಗೆ ಬರುತ್ತವೆ. ಅಂತಹ ಸನ್ನಿವೇಶಗಳನ್ನು ನಿಭಾಯಿಸಲು ರಾಜ್ಯ ಸರ್ಕಾರಗಳು ಸಮರ್ಥವಾಗಿವೆ. ಈ ಸಂಬಂಧ ಕೇಂದ್ರವು ಅಂಕಿಅಂಶವನ್ನು ನಿರ್ವಹಿಸುವುದಿಲ್ಲ' ಎಂದು ತಿಳಿಸಿದ್ದಾರೆ. </p><p>'ಹೆಚ್ಚು ಜನರು ಸೇರುವ ಸ್ಥಳಗಳಲ್ಲಿ ಜನಸಂದಣಿ ನಿರ್ವಹಣೆ ಕುರಿತಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ವಿವರವಾದ ಮಾರ್ಗಸೂಚಿಗಳನ್ನು ನಿರ್ದೇಶಿಸಿದೆ' ಎಂದು ಅವರು ತಿಳಿಸಿದ್ದಾರೆ. </p><p>ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆದ ಮಹಾಕುಂಭಮೇಳವು ಜನವರಿ 13ರಿಂದ ಆರಂಭವಾಗಿ ಫೆಬ್ರುವರಿ 26ರಂದು ಮುಕ್ತಾಯಗೊಂಡಿತ್ತು. ಆದರೆ ಜನವರಿ 29, ಮೌನಿ ಅಮಾವಾಸ್ಯೆಯಂದು ಸಂಭವಿಸಿದ್ದ ಕಾಲ್ತುಳಿತದಲ್ಲಿ 30 ಮಂದಿ ಮೃತಪಟ್ಟು, 60 ಮಂದಿ ಗಾಯಗೊಂಡಿದ್ದರು. </p>.ಲೋಕಸಭೆ ವಿರೋಧ ಪಕ್ಷದ ನಾಯಕನಿಗೆ ಮಾತನಾಡಲು ಅವಕಾಶವಿಲ್ಲ: ರಾಹುಲ್ ಅಸಮಾಧಾನ.Kumbh Stampede | ಜೆಸಿಬಿ ಮೂಲಕ ಮೃತದೇಹಗಳ ಸಾಗಾಟ: ವಿಪಕ್ಷಗಳ ಆರೋಪ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>