<p><strong>ನವದೆಹಲಿ: ‘</strong>ಅಮೆರಿಕ ಕೋರ್ಟ್ನಲ್ಲಿರುವ ಅದಾನಿ ಪ್ರಕರಣದ ಆರೋಪಪಟ್ಟಿಯಲ್ಲಿ ಯಾರು ಲಂಚ ನೀಡಿದರು ಎಂಬ ಆರೋಪದ ವಿವರವೇ ಇಲ್ಲ’ ಎಂದು ಮಾಜಿ ಅಟಾರ್ನಿ ಜನರಲ್ ಮುಕುಲ್ ರೋಹಟಗಿ ತಿಳಿಸಿದ್ದಾರೆ.</p>.<p>ಅದಾನಿ ಸಮೂಹದ ಸ್ಥಾಪಕ ಅಧ್ಯಕ್ಷ ಗೌತಮ್ ಅದಾನಿ, ಅವರ ಅಣ್ಣನ ಮಗ ಸಾಗರ್ ಅದಾನಿ ವಿರುದ್ಧದ ಲಂಚದ ಪ್ರಕರಣದಲ್ಲಿ ಅಮೆರಿಕದ ವಿದೇಶಿ ಭ್ರಷ್ಟಾಚಾರ ಚಟುವಟಿಕೆ ತಡೆ ಕಾಯ್ದೆ (ಎಫ್ಸಿಪಿಎ) ಉಲ್ಲಂಘಿಸಿದ ಆರೋಪವೇ ಇಲ್ಲ ಎಂದಿದ್ದಾರೆ.</p>.<p>ಸೋಲಾರ್ ಇಂಧನ ಒಪ್ಪಂದದಲ್ಲಿ ಅದಾನಿ ಭಾರತದ ಅಧಿಕಾರಿಗಳಿಗೆ ಲಂಚ ನೀಡಿದ್ದಾರೆ ಎಂಬ ಆರೋಪವಿದೆ. ಆದರೆ, ಯಾವ ಸ್ವರೂಪದಲ್ಲಿ ಲಂಚ ನೀಡಿದರು ಎಂಬ ಉಲ್ಲೇಖವಿಲ್ಲ ಎಂದಿದ್ದಾರೆ.</p>.<p>‘ಯಾರಿಗೆ, ಯಾವ ಸ್ವರೂಪದಲ್ಲಿ ನೀಡಲಾಯಿತು, ಅವರು ಯಾವ ಇಲಾಖೆಗೆ ಸೇರಿದವರು ಎಂಬ ಸ್ಪಷ್ಟ ವಿವರವೇ ಆರೋಪಪಟ್ಟಿಯಲ್ಲಿ ಇಲ್ಲ’ ಎಂದಿದ್ದಾರೆ. ಈ ದೋಷರೋಪಕ್ಕೆ ಆಧಾರವೇನು ಎಂದೂ ಪ್ರಶ್ನಿಸಿದ್ದಾರೆ.</p>.<p><strong>ಕಾಂಗ್ರೆಸ್ ಟೀಕೆ:</strong> ಅದಾನಿ ವಿರುದ್ಧದ ಲಂಚ ಆರೋಪದ ಕುರಿತು ವಕೀಲರಾದ ಮಹೇಶ್ ಜೇಠ್ಮಲಾನಿ ಮತ್ತು ಮುಕುಲ್ ರೋಹಟಗಿ ಅವರ ಹೇಳಿಕೆಗಳು ಆರೋಪಗಳ ಗಂಭೀರತೆ ದುರ್ಬಲಗೊಳಿಸುವ ಪ್ರಯತ್ನ ಎಂದು ಕಾಂಗ್ರೆಸ್ ಟೀಕಿಸಿದೆ.</p>.<p>ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂವಹನಗಳ ಉಸ್ತುವಾರಿ) ಜೈರಾಮ್ ರಮೇಶ್ ಅವರು, ‘ಈ ಕ್ಷಣವನ್ನು ಇತಿಹಾಸವು ಕ್ಷಮಿಸುವುದಿಲ್ಲ ಅಥವಾ ಮರೆಯುವುದಿಲ್ಲ’ ಎಂದು ಪ್ರತಿಪಾದಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: ‘</strong>ಅಮೆರಿಕ ಕೋರ್ಟ್ನಲ್ಲಿರುವ ಅದಾನಿ ಪ್ರಕರಣದ ಆರೋಪಪಟ್ಟಿಯಲ್ಲಿ ಯಾರು ಲಂಚ ನೀಡಿದರು ಎಂಬ ಆರೋಪದ ವಿವರವೇ ಇಲ್ಲ’ ಎಂದು ಮಾಜಿ ಅಟಾರ್ನಿ ಜನರಲ್ ಮುಕುಲ್ ರೋಹಟಗಿ ತಿಳಿಸಿದ್ದಾರೆ.</p>.<p>ಅದಾನಿ ಸಮೂಹದ ಸ್ಥಾಪಕ ಅಧ್ಯಕ್ಷ ಗೌತಮ್ ಅದಾನಿ, ಅವರ ಅಣ್ಣನ ಮಗ ಸಾಗರ್ ಅದಾನಿ ವಿರುದ್ಧದ ಲಂಚದ ಪ್ರಕರಣದಲ್ಲಿ ಅಮೆರಿಕದ ವಿದೇಶಿ ಭ್ರಷ್ಟಾಚಾರ ಚಟುವಟಿಕೆ ತಡೆ ಕಾಯ್ದೆ (ಎಫ್ಸಿಪಿಎ) ಉಲ್ಲಂಘಿಸಿದ ಆರೋಪವೇ ಇಲ್ಲ ಎಂದಿದ್ದಾರೆ.</p>.<p>ಸೋಲಾರ್ ಇಂಧನ ಒಪ್ಪಂದದಲ್ಲಿ ಅದಾನಿ ಭಾರತದ ಅಧಿಕಾರಿಗಳಿಗೆ ಲಂಚ ನೀಡಿದ್ದಾರೆ ಎಂಬ ಆರೋಪವಿದೆ. ಆದರೆ, ಯಾವ ಸ್ವರೂಪದಲ್ಲಿ ಲಂಚ ನೀಡಿದರು ಎಂಬ ಉಲ್ಲೇಖವಿಲ್ಲ ಎಂದಿದ್ದಾರೆ.</p>.<p>‘ಯಾರಿಗೆ, ಯಾವ ಸ್ವರೂಪದಲ್ಲಿ ನೀಡಲಾಯಿತು, ಅವರು ಯಾವ ಇಲಾಖೆಗೆ ಸೇರಿದವರು ಎಂಬ ಸ್ಪಷ್ಟ ವಿವರವೇ ಆರೋಪಪಟ್ಟಿಯಲ್ಲಿ ಇಲ್ಲ’ ಎಂದಿದ್ದಾರೆ. ಈ ದೋಷರೋಪಕ್ಕೆ ಆಧಾರವೇನು ಎಂದೂ ಪ್ರಶ್ನಿಸಿದ್ದಾರೆ.</p>.<p><strong>ಕಾಂಗ್ರೆಸ್ ಟೀಕೆ:</strong> ಅದಾನಿ ವಿರುದ್ಧದ ಲಂಚ ಆರೋಪದ ಕುರಿತು ವಕೀಲರಾದ ಮಹೇಶ್ ಜೇಠ್ಮಲಾನಿ ಮತ್ತು ಮುಕುಲ್ ರೋಹಟಗಿ ಅವರ ಹೇಳಿಕೆಗಳು ಆರೋಪಗಳ ಗಂಭೀರತೆ ದುರ್ಬಲಗೊಳಿಸುವ ಪ್ರಯತ್ನ ಎಂದು ಕಾಂಗ್ರೆಸ್ ಟೀಕಿಸಿದೆ.</p>.<p>ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂವಹನಗಳ ಉಸ್ತುವಾರಿ) ಜೈರಾಮ್ ರಮೇಶ್ ಅವರು, ‘ಈ ಕ್ಷಣವನ್ನು ಇತಿಹಾಸವು ಕ್ಷಮಿಸುವುದಿಲ್ಲ ಅಥವಾ ಮರೆಯುವುದಿಲ್ಲ’ ಎಂದು ಪ್ರತಿಪಾದಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>