<p><strong>ಕೊಚ್ಚಿ:</strong> ಕೇರಳ ಪ್ರದೇಶ ಕಾಂಗ್ರೆಸ್ ಘಟಕದ ನಾಯಕತ್ವದಲ್ಲಿ ಬದಲಾವಣೆ ಕುರಿತು ಯಾವುದೇ ಚರ್ಚೆಗಳು ನಡೆದಿಲ್ಲ ಎಂದು ಕೇರಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ವಿ.ಡಿ. ಸತೀಶನ್ ಗುರುವಾರ ಹೇಳಿದ್ದಾರೆ.</p><p>ವರದಿಗಾರರೊಂದಿಗೆ ಮಾತನಾಡಿದ ಅವರು, ‘ಪಕ್ಷದ ನಾಯಕರ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಕೆಪಿಸಿಸಿ ಅಧ್ಯಕ್ಷ ಕೆ. ಸುಧಾಕರನ್ ಅವರನ್ನು ಬದಲಿಸುವ ಕುರಿತೂ ಯಾವುದೇ ಚರ್ಚೆಗಳು ನಡೆದಿಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.</p>.ಶಶಿ ತರೂರ್ ಪರ ಕೇರಳ ಕಾಂಗ್ರೆಸ್ ನಾಯಕರ ಮೃದು ಧೋರಣೆ.ಬಿಜೆಪಿಯ ಪಿಯೂಷ್ ಗೋಯಲ್ ಜೊತೆ ಶಶಿ ತರೂರ್ ನಗು ನಗುತ್ತಾ ಸೆಲ್ಫಿ! ಏನಿದರ ಮರ್ಮ?.<p>‘2026ರಲ್ಲಿ ಚುನಾವಣೆ ನಡೆಯಲಿರುವ ಕೇರಳ, ಬಿಹಾರ, ಪಶ್ಚಿಮ ಬಂಗಾಳ ಹಾಗೂ ಅಸ್ಸಾಂನ ಪಕ್ಷದ ಘಟಕಗಳ ಮುಖಂಡರನ್ನು ದೆಹಲಿಗೆ ಬರುವಂತೆ ಸೂಚಿಸಲಾಗಿತ್ತು. ಆದರೆ ಮಾಧ್ಯಮಗಳಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ಚರ್ಚೆ ನಡೆದಿದೆ ಎಂದು ತಪ್ಪಾಗಿ ಹೇಳಲಾಗಿದೆ. ನಮ್ಮಲ್ಲಿ ಯಾವುದೇ ಸಮಸ್ಯೆ ಇಲ್ಲ’ ಎಂದಿದ್ದಾರೆ.</p><p>‘ಸರಿಯಾದ ಸಮಯಕ್ಕೆ ಸರಿಯಾದ ನಿರ್ಧಾರವನ್ನು ಎಐಸಿಸಿ ತೆಗೆದುಕೊಳ್ಳಲಿದೆ. ದೆಹಲಿಯಲ್ಲಿ ಯಾವುದೇ ಚರ್ಚೆಗಳು ನಡೆದಿಲ್ಲ’ ಎಂದು ಸತೀಶನ್ ಸ್ಪಷ್ಟಪಡಿಸಿದ್ದಾರೆ.</p><p>ಪಕ್ಷದ ಪುನರ್ ರಚನೆ ಕುರಿತು ಹೈಕಮಾಂಡ್ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂಬ ಸುಧಾಕರನ್ ಹೇಳಿಕೆಯನ್ನು ಪಕ್ಷದ ಕಾರ್ಯಕಾರಿ ಮಂಡಳಿ ಸದಸ್ಯರೂ ಆಗಿರುವ ಸಂಸದ ಶಶಿ ತರೂರ್ ಅವರು ಬೆಂಬಲಿಸಿದ್ದರು. ಇದಕ್ಕೆ ಪ್ರತಿಕ್ರಿಯೆಯಾಗಿ ಸತೀಶನ್ ಈ ಹೇಳಿಕೆ ನೀಡಿದ್ದಾರೆ.</p>.ಕೇರಳದ ಸ್ಟಾರ್ಟ್ಅಪ್ ಪ್ರಗತಿಯನ್ನಷ್ಟೇ ಶ್ಲಾಘಿಸಿದ್ದೇನೆ: ತರೂರ್ ಸ್ಪಷ್ಟನೆ.ಭಾರತದಲ್ಲೇ ಅತಿ ಹೆಚ್ಚು ನಿರುದ್ಯೋಗಿಗಳು: ಶಶಿ ತರೂರ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಚ್ಚಿ:</strong> ಕೇರಳ ಪ್ರದೇಶ ಕಾಂಗ್ರೆಸ್ ಘಟಕದ ನಾಯಕತ್ವದಲ್ಲಿ ಬದಲಾವಣೆ ಕುರಿತು ಯಾವುದೇ ಚರ್ಚೆಗಳು ನಡೆದಿಲ್ಲ ಎಂದು ಕೇರಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ವಿ.ಡಿ. ಸತೀಶನ್ ಗುರುವಾರ ಹೇಳಿದ್ದಾರೆ.</p><p>ವರದಿಗಾರರೊಂದಿಗೆ ಮಾತನಾಡಿದ ಅವರು, ‘ಪಕ್ಷದ ನಾಯಕರ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಕೆಪಿಸಿಸಿ ಅಧ್ಯಕ್ಷ ಕೆ. ಸುಧಾಕರನ್ ಅವರನ್ನು ಬದಲಿಸುವ ಕುರಿತೂ ಯಾವುದೇ ಚರ್ಚೆಗಳು ನಡೆದಿಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.</p>.ಶಶಿ ತರೂರ್ ಪರ ಕೇರಳ ಕಾಂಗ್ರೆಸ್ ನಾಯಕರ ಮೃದು ಧೋರಣೆ.ಬಿಜೆಪಿಯ ಪಿಯೂಷ್ ಗೋಯಲ್ ಜೊತೆ ಶಶಿ ತರೂರ್ ನಗು ನಗುತ್ತಾ ಸೆಲ್ಫಿ! ಏನಿದರ ಮರ್ಮ?.<p>‘2026ರಲ್ಲಿ ಚುನಾವಣೆ ನಡೆಯಲಿರುವ ಕೇರಳ, ಬಿಹಾರ, ಪಶ್ಚಿಮ ಬಂಗಾಳ ಹಾಗೂ ಅಸ್ಸಾಂನ ಪಕ್ಷದ ಘಟಕಗಳ ಮುಖಂಡರನ್ನು ದೆಹಲಿಗೆ ಬರುವಂತೆ ಸೂಚಿಸಲಾಗಿತ್ತು. ಆದರೆ ಮಾಧ್ಯಮಗಳಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ಚರ್ಚೆ ನಡೆದಿದೆ ಎಂದು ತಪ್ಪಾಗಿ ಹೇಳಲಾಗಿದೆ. ನಮ್ಮಲ್ಲಿ ಯಾವುದೇ ಸಮಸ್ಯೆ ಇಲ್ಲ’ ಎಂದಿದ್ದಾರೆ.</p><p>‘ಸರಿಯಾದ ಸಮಯಕ್ಕೆ ಸರಿಯಾದ ನಿರ್ಧಾರವನ್ನು ಎಐಸಿಸಿ ತೆಗೆದುಕೊಳ್ಳಲಿದೆ. ದೆಹಲಿಯಲ್ಲಿ ಯಾವುದೇ ಚರ್ಚೆಗಳು ನಡೆದಿಲ್ಲ’ ಎಂದು ಸತೀಶನ್ ಸ್ಪಷ್ಟಪಡಿಸಿದ್ದಾರೆ.</p><p>ಪಕ್ಷದ ಪುನರ್ ರಚನೆ ಕುರಿತು ಹೈಕಮಾಂಡ್ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂಬ ಸುಧಾಕರನ್ ಹೇಳಿಕೆಯನ್ನು ಪಕ್ಷದ ಕಾರ್ಯಕಾರಿ ಮಂಡಳಿ ಸದಸ್ಯರೂ ಆಗಿರುವ ಸಂಸದ ಶಶಿ ತರೂರ್ ಅವರು ಬೆಂಬಲಿಸಿದ್ದರು. ಇದಕ್ಕೆ ಪ್ರತಿಕ್ರಿಯೆಯಾಗಿ ಸತೀಶನ್ ಈ ಹೇಳಿಕೆ ನೀಡಿದ್ದಾರೆ.</p>.ಕೇರಳದ ಸ್ಟಾರ್ಟ್ಅಪ್ ಪ್ರಗತಿಯನ್ನಷ್ಟೇ ಶ್ಲಾಘಿಸಿದ್ದೇನೆ: ತರೂರ್ ಸ್ಪಷ್ಟನೆ.ಭಾರತದಲ್ಲೇ ಅತಿ ಹೆಚ್ಚು ನಿರುದ್ಯೋಗಿಗಳು: ಶಶಿ ತರೂರ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>