<p><strong>ಮುಂಬೈ</strong>: ‘ಅಜಿತ್ ಪವಾರ್ ಅವರ ನಿಧನದ ದಿನ ಇಲಾಖೆಯ ಮೂಲಕ ಯಾವುದೇ ಹೊಸ ಕಡತಗಳನ್ನು ವಿಲೇವಾರಿ ಮಾಡಿಲ್ಲ ಮತ್ತು ಯಾವುದೇ ಪ್ರಮಾಣಪತ್ರವನ್ನು ವಿತರಿಸಿಲ್ಲ’ ಎಂದು ಮಹಾರಾಷ್ಟ್ರ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸೃಷ್ಟೀಕರಣ ನೀಡಿದೆ.</p><p>ಅಜಿತ್ ಪವಾರ್ ನಿಧನದ ನಂತರ ಅಲ್ಪಸಂಖ್ಯಾತ ಶಾಲೆಗಳಿಗೆ ಸಂಬಂಧಿಸಿದ 75 ಕಡತಗಳನ್ನು ತರಾತುರಿಯಲ್ಲಿ ವಿಲೇವಾರಿ ಮಾಡಿರುವುದು ವಿವಾದಕ್ಕೆ ಕಾರಣವಾಗಿತ್ತು. </p><p>ವಿವಾದದ ಬಗ್ಗೆ ಎಕ್ಸ್ನಲ್ಲಿ ಪ್ರತಿಕ್ರಿಯಿಸಿರುವ ಇಲಾಖೆ, ‘ಜನವರಿ 28 ರಂದು ಡಿಜಿಟಲ್ ಸಹಿ ಮೂಲಕ ಯಾವುದೇ ಹೊಸ ಕಡತಗಳನ್ನು ವಿಲೇವಾರಿ ಮಾಡಿಲ್ಲ ಮತ್ತು ಯಾವುದೇ ಶಾಲೆಗಳಿಗೆ ಅಲ್ಪಸಂಖ್ಯಾತ ಸ್ಥಾನಮಾನ ಪ್ರಮಾಣಪತ್ರವನ್ನು ವಿತರಿಸಲಾಗಿಲ್ಲ’ ಎಂದಿದೆ.</p><p>‘ಅಲ್ಪಸಂಖ್ಯಾತ ಸ್ಥಾನಮಾನ ನೀಡುವ ಸಂಪೂರ್ಣ ಪ್ರಕ್ರಿಯೆಯನ್ನು ಆನ್ಲೈನ್ ಮೂಲಕ ಪಾರದರ್ಶಕವಾಗಿ ನಡೆಸಲಾಗುತ್ತದೆ. ಮೇ 27, 2013ರ ಸರ್ಕಾರದ ನಿರ್ಣಯದಲ್ಲಿ ನಿಗದಿಪಡಿಸಿದ ನಿಬಂಧನೆಗಳಿಗೆ ಅನುಸಾರವಾಗಿ ಅರ್ಜಿಗಳನ್ನು ಪರಿಶೀಲಿಸಿದ ನಂತರವೇ ಪ್ರಮಾಣಪತ್ರಗಳನ್ನು ನೀಡಲಾಗುತ್ತದೆ’ ಎಂದಿದೆ.</p><p>ಜನವರಿ 28ರಂದು ವಿಎಸ್ಆರ್ ವೆಂಚರ್ಸ್ ಒಡೆತನದ ವಿಮಾನ ಪತನಗೊಂಡು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಹಾಗೂ ಇತರ ನಾಲ್ವರು ಮೃತಪಟ್ಟಿದ್ದರು.</p><p>ಆಗ ಅಲ್ಪಸಂಖ್ಯಾತ ಅಭಿವೃದ್ದಿ ಇಲಾಖೆಯ ಜವಾಬ್ದಾರಿಯನ್ನು ಅಜಿತ್ ಪವಾರ್ ನಿರ್ವಹಿಸುತ್ತಿದ್ದರು.</p><p><strong>ವಿವಾದವೇನು?</strong></p><p>ಅಜಿತ್ ಪವಾರ್ ಅವರು ನಿಧನ ಹೊಂದಿದ ದಿನ ಜನವರಿ 28ರಂದು ಮಧ್ಯಾಹ್ನ 3.09 ಕ್ಕೆ ಮೊದಲ ಅಲ್ಪಸಂಖ್ಯಾತ ಸ್ಥಾನಮಾನ ಪ್ರಮಾಣಪತ್ರವನ್ನು ನೀಡಲಾಗಿತ್ತು. ಅದೇ ದಿನ ಒಟ್ಟು 9 ಸಂಸ್ಥೆಗಳು ಅಲ್ಪಸಂಖ್ಯಾತ ಸ್ಥಾನಮಾನ ಪ್ರಮಾಣಪತ್ರವನ್ನು ಪಡದುಕೊಂಡಿದ್ದವು. ಜ. 29 ಮತ್ತು 30ರಂದು ದೊಡ್ಡ ಪ್ರಮಾಣದಲ್ಲಿ ಅನುಮೋದನೆ ನೀಡಲಾಗಿತ್ತು.</p><p>2025ರ ಆಗಸ್ಟ್ನಿಂದ 2026 ಜನವರಿ 27 ರವರೆಗೆ, ಪವಾರ್ ಅವರ ಅಧಿಕಾರಾವಧಿಯಲ್ಲಿ ಒಂದೇ ಒಂದು ಅಲ್ಪಸಂಖ್ಯಾತ ಸ್ಥಾನಮಾನ ಪ್ರಮಾಣಪತ್ರವನ್ನು ನೀಡಲಾಗಿಲ್ಲ. ಇದಕ್ಕೆ ವ್ಯತಿರಿಕ್ತವಾಗಿ, ಅವರ ಮರಣದ ಕೇವಲ ನಾಲ್ಕು ದಿನಗಳಲ್ಲಿ 75 ಸಂಸ್ಥೆಗಳಿಗೆ ಪ್ರಮಾಣಪತ್ರ ಹಸ್ತಾಂತರಿಸಿರುವುದು ಹಲವು ಅನುಮಾನಗಳನ್ನು ಹುಟ್ಟುಹಾಕಿತ್ತು.</p><p>ಏತನ್ಮಧ್ಯೆ, ಇಲಾಖೆಯ ಉಪ ಕಾರ್ಯದರ್ಶಿ ಮಿಲಿಂದ್ ಶೆಣೈ ಅವರನ್ನು ವರ್ಗಾವಣೆ ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ‘ಅಜಿತ್ ಪವಾರ್ ಅವರ ನಿಧನದ ದಿನ ಇಲಾಖೆಯ ಮೂಲಕ ಯಾವುದೇ ಹೊಸ ಕಡತಗಳನ್ನು ವಿಲೇವಾರಿ ಮಾಡಿಲ್ಲ ಮತ್ತು ಯಾವುದೇ ಪ್ರಮಾಣಪತ್ರವನ್ನು ವಿತರಿಸಿಲ್ಲ’ ಎಂದು ಮಹಾರಾಷ್ಟ್ರ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸೃಷ್ಟೀಕರಣ ನೀಡಿದೆ.</p><p>ಅಜಿತ್ ಪವಾರ್ ನಿಧನದ ನಂತರ ಅಲ್ಪಸಂಖ್ಯಾತ ಶಾಲೆಗಳಿಗೆ ಸಂಬಂಧಿಸಿದ 75 ಕಡತಗಳನ್ನು ತರಾತುರಿಯಲ್ಲಿ ವಿಲೇವಾರಿ ಮಾಡಿರುವುದು ವಿವಾದಕ್ಕೆ ಕಾರಣವಾಗಿತ್ತು. </p><p>ವಿವಾದದ ಬಗ್ಗೆ ಎಕ್ಸ್ನಲ್ಲಿ ಪ್ರತಿಕ್ರಿಯಿಸಿರುವ ಇಲಾಖೆ, ‘ಜನವರಿ 28 ರಂದು ಡಿಜಿಟಲ್ ಸಹಿ ಮೂಲಕ ಯಾವುದೇ ಹೊಸ ಕಡತಗಳನ್ನು ವಿಲೇವಾರಿ ಮಾಡಿಲ್ಲ ಮತ್ತು ಯಾವುದೇ ಶಾಲೆಗಳಿಗೆ ಅಲ್ಪಸಂಖ್ಯಾತ ಸ್ಥಾನಮಾನ ಪ್ರಮಾಣಪತ್ರವನ್ನು ವಿತರಿಸಲಾಗಿಲ್ಲ’ ಎಂದಿದೆ.</p><p>‘ಅಲ್ಪಸಂಖ್ಯಾತ ಸ್ಥಾನಮಾನ ನೀಡುವ ಸಂಪೂರ್ಣ ಪ್ರಕ್ರಿಯೆಯನ್ನು ಆನ್ಲೈನ್ ಮೂಲಕ ಪಾರದರ್ಶಕವಾಗಿ ನಡೆಸಲಾಗುತ್ತದೆ. ಮೇ 27, 2013ರ ಸರ್ಕಾರದ ನಿರ್ಣಯದಲ್ಲಿ ನಿಗದಿಪಡಿಸಿದ ನಿಬಂಧನೆಗಳಿಗೆ ಅನುಸಾರವಾಗಿ ಅರ್ಜಿಗಳನ್ನು ಪರಿಶೀಲಿಸಿದ ನಂತರವೇ ಪ್ರಮಾಣಪತ್ರಗಳನ್ನು ನೀಡಲಾಗುತ್ತದೆ’ ಎಂದಿದೆ.</p><p>ಜನವರಿ 28ರಂದು ವಿಎಸ್ಆರ್ ವೆಂಚರ್ಸ್ ಒಡೆತನದ ವಿಮಾನ ಪತನಗೊಂಡು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಹಾಗೂ ಇತರ ನಾಲ್ವರು ಮೃತಪಟ್ಟಿದ್ದರು.</p><p>ಆಗ ಅಲ್ಪಸಂಖ್ಯಾತ ಅಭಿವೃದ್ದಿ ಇಲಾಖೆಯ ಜವಾಬ್ದಾರಿಯನ್ನು ಅಜಿತ್ ಪವಾರ್ ನಿರ್ವಹಿಸುತ್ತಿದ್ದರು.</p><p><strong>ವಿವಾದವೇನು?</strong></p><p>ಅಜಿತ್ ಪವಾರ್ ಅವರು ನಿಧನ ಹೊಂದಿದ ದಿನ ಜನವರಿ 28ರಂದು ಮಧ್ಯಾಹ್ನ 3.09 ಕ್ಕೆ ಮೊದಲ ಅಲ್ಪಸಂಖ್ಯಾತ ಸ್ಥಾನಮಾನ ಪ್ರಮಾಣಪತ್ರವನ್ನು ನೀಡಲಾಗಿತ್ತು. ಅದೇ ದಿನ ಒಟ್ಟು 9 ಸಂಸ್ಥೆಗಳು ಅಲ್ಪಸಂಖ್ಯಾತ ಸ್ಥಾನಮಾನ ಪ್ರಮಾಣಪತ್ರವನ್ನು ಪಡದುಕೊಂಡಿದ್ದವು. ಜ. 29 ಮತ್ತು 30ರಂದು ದೊಡ್ಡ ಪ್ರಮಾಣದಲ್ಲಿ ಅನುಮೋದನೆ ನೀಡಲಾಗಿತ್ತು.</p><p>2025ರ ಆಗಸ್ಟ್ನಿಂದ 2026 ಜನವರಿ 27 ರವರೆಗೆ, ಪವಾರ್ ಅವರ ಅಧಿಕಾರಾವಧಿಯಲ್ಲಿ ಒಂದೇ ಒಂದು ಅಲ್ಪಸಂಖ್ಯಾತ ಸ್ಥಾನಮಾನ ಪ್ರಮಾಣಪತ್ರವನ್ನು ನೀಡಲಾಗಿಲ್ಲ. ಇದಕ್ಕೆ ವ್ಯತಿರಿಕ್ತವಾಗಿ, ಅವರ ಮರಣದ ಕೇವಲ ನಾಲ್ಕು ದಿನಗಳಲ್ಲಿ 75 ಸಂಸ್ಥೆಗಳಿಗೆ ಪ್ರಮಾಣಪತ್ರ ಹಸ್ತಾಂತರಿಸಿರುವುದು ಹಲವು ಅನುಮಾನಗಳನ್ನು ಹುಟ್ಟುಹಾಕಿತ್ತು.</p><p>ಏತನ್ಮಧ್ಯೆ, ಇಲಾಖೆಯ ಉಪ ಕಾರ್ಯದರ್ಶಿ ಮಿಲಿಂದ್ ಶೆಣೈ ಅವರನ್ನು ವರ್ಗಾವಣೆ ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>