ಸಭೆಯ ನಂತರ ಎಸ್ಕೆಎಂ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ‘ಸರ್ಕಾರ ಪ್ರತಿಭಟನಾಕಾರರ ವಿರುದ್ಧ ಪೊಲೀಸರು, ಅಧಿಕಾರಿಗಳ ಮೂಲಕ ದಬ್ಬಾಳಿಕೆ ನಡೆಸಲು ಪ್ರಯತ್ನಿಸಿದೆ. ರೈತರು ಪ್ರತಿಭಟನೆಗೆ ಬಾರದಂತೆ ತಡೆಯಲು ಬ್ಯಾರಿಕೇಡ್, ಮುಳ್ಳು ತಂತಿಯ ಬೇಲಿಗಳನ್ನು ಹಾಕಿಸುತ್ತಿದೆ. ಒಳ ಭಾಗದ ರಸ್ತೆಗಳನ್ನು ಬಂದ್ ಮಾಡಿಸಿ, ಅಂತರ್ಜಾಲ ಸೇವೆಗಳನ್ನೂ ಸ್ಥಗಿತಗೊಳಿಸಿದೆ. ಬಿಜೆಪಿ–ಆರ್ಎಸ್ಎಸ್ ಕಾರ್ಯಕರ್ತರ ಮೂಲಕ ಪ್ರತಿಭಟನೆ ಹತ್ತಿಕ್ಕುವ ಪ್ರಯತ್ನವನ್ನೂ ಮಾಡಿದೆ’ ಎಂದು ಉಲ್ಲೇಖಿಸಿದೆ.