<p><strong>ನವದೆಹಲಿ</strong>: ‘ಸನಾತನ ಧರ್ಮ ನಿರ್ಮೂಲನೆ’ ಹೇಳಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಉಪ ಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ವಿರುದ್ಧ ಯಾವುದೇ ಹೊಸ ಎಫ್ಐಆರ್ಗಳನ್ನು ದಾಖಲಿಸಬಾರದು ಎಂದು ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದೆ.</p><p>ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರನ್ನೊಳಗೊಂಡ ಪೀಠವು, ಉದಯನಿಧಿ ಅವರ ಹೇಳಿಕೆಗಳಿಗೆ ಸಂಬಂಧಿಸಿದಂತೆ ಅವರ ವಿರುದ್ಧ ದಾಖಲಾಗಿರುವ ಪ್ರಕರಣಗಳಲ್ಲಿ ಬಲವಂತದ ಕ್ರಮಗಳ ವಿರುದ್ಧ ರಕ್ಷಣೆ ನೀಡುವ ಮಧ್ಯಂತರ ಆದೇಶವನ್ನು ವಿಸ್ತರಿಸಿದೆ.</p><p>2023ರ ಸೆಪ್ಟೆಂಬರ್ನಲ್ಲಿ ಸಮಾವೇಶವೊಂದರಲ್ಲಿ ಮಾತನಾಡಿದ್ದ ಉದಯನಿಧಿ, ‘ಸನಾತನ ಧರ್ಮವು ಸಾಮಾಜಿಕ ನ್ಯಾಯ ಮತ್ತು ಸಮಾನತೆ ವಿರುದ್ಧವಾಗಿದ್ದು, ಅದನ್ನು ನಿರ್ಮೂಲನೆ ಮಾಡಬೇಕು’ ಎಂದು ಹೇಳಿದ್ದರು.</p><p>ಅಲ್ಲದೇ ಸನಾತನ ಧರ್ಮವನ್ನು ಕೊರೊನಾ, ಮಲೇರಿಯಾ ಮತ್ತು ಡೆಂಗಿಗೂ ಹೋಲಿಸಿದ್ದರು.</p><p>ಈ ಹೇಳಿಕೆ ವಿರುದ್ಧ ಮಹಾರಾಷ್ಟ್ರ, ಬಿಹಾರ, ಜಮ್ಮು ಮತ್ತು ಕರ್ನಾಟಕದಲ್ಲಿ ಹಲವು ಎಫ್ಐಆರ್ಗಳು ದಾಖಲಾಗಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ಸನಾತನ ಧರ್ಮ ನಿರ್ಮೂಲನೆ’ ಹೇಳಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಉಪ ಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ವಿರುದ್ಧ ಯಾವುದೇ ಹೊಸ ಎಫ್ಐಆರ್ಗಳನ್ನು ದಾಖಲಿಸಬಾರದು ಎಂದು ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದೆ.</p><p>ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರನ್ನೊಳಗೊಂಡ ಪೀಠವು, ಉದಯನಿಧಿ ಅವರ ಹೇಳಿಕೆಗಳಿಗೆ ಸಂಬಂಧಿಸಿದಂತೆ ಅವರ ವಿರುದ್ಧ ದಾಖಲಾಗಿರುವ ಪ್ರಕರಣಗಳಲ್ಲಿ ಬಲವಂತದ ಕ್ರಮಗಳ ವಿರುದ್ಧ ರಕ್ಷಣೆ ನೀಡುವ ಮಧ್ಯಂತರ ಆದೇಶವನ್ನು ವಿಸ್ತರಿಸಿದೆ.</p><p>2023ರ ಸೆಪ್ಟೆಂಬರ್ನಲ್ಲಿ ಸಮಾವೇಶವೊಂದರಲ್ಲಿ ಮಾತನಾಡಿದ್ದ ಉದಯನಿಧಿ, ‘ಸನಾತನ ಧರ್ಮವು ಸಾಮಾಜಿಕ ನ್ಯಾಯ ಮತ್ತು ಸಮಾನತೆ ವಿರುದ್ಧವಾಗಿದ್ದು, ಅದನ್ನು ನಿರ್ಮೂಲನೆ ಮಾಡಬೇಕು’ ಎಂದು ಹೇಳಿದ್ದರು.</p><p>ಅಲ್ಲದೇ ಸನಾತನ ಧರ್ಮವನ್ನು ಕೊರೊನಾ, ಮಲೇರಿಯಾ ಮತ್ತು ಡೆಂಗಿಗೂ ಹೋಲಿಸಿದ್ದರು.</p><p>ಈ ಹೇಳಿಕೆ ವಿರುದ್ಧ ಮಹಾರಾಷ್ಟ್ರ, ಬಿಹಾರ, ಜಮ್ಮು ಮತ್ತು ಕರ್ನಾಟಕದಲ್ಲಿ ಹಲವು ಎಫ್ಐಆರ್ಗಳು ದಾಖಲಾಗಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>