<p><strong>ನವದೆಹಲಿ:</strong> ಪ್ರಧಾನಿ ವಿರುದ್ಧ ಅಸಂಸದೀಯ ಭಾಷೆ ಬಳಸಿದ್ದಕ್ಕಾಗಿ, ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಸರ್ಕಾರ ಯಾವುದೇ ಗೊತ್ತುವಳಿ ಮಂಡಿಸುವುದಿಲ್ಲ ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ಶುಕ್ರವಾರ ಹೇಳಿದ್ದಾರೆ.</p>.<p>ಬಿಜೆಪಿ ಸಂಸದರೊಬ್ಬರು ಈಗಾಗಲೇ ‘ಸ್ವತಂತ್ರ ನಿರ್ಣಯ’ದ ನೋಟಿಸ್ ಸಲ್ಲಿಸಿದ್ದಾರೆ. ಇದೇ ವಿಚಾರವಾಗಿ ಮತ್ತೊಂದು ಗೊತ್ತುವಳಿ ಮಂಡಿಸುವ ಯೋಜನೆಯನ್ನು ಸರ್ಕಾರ ಕೈಬಿಟ್ಟಿದೆ ಎಂದು ಹೇಳಿದ್ದಾರೆ.</p>.<p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು,‘ಬಿಜೆಪಿ ಸಂಸದ ನಿಶಿಕಾಂತ್ ದುಬೆ ಸಲ್ಲಿಸಿರುವ ನೋಟಿಸ್ ಅನ್ನು ಹಕ್ಕುಬಾಧ್ಯತಾ ಸಮಿತಿ ಅಥವಾ ನೈತಿಕ ಸಮಿತಿಗೆ ಕಳುಹಿಸಬೇಕೇ ಇಲ್ಲವೇ ನೇರವಾಗಿ ಲೋಕಸಭೆಯಲ್ಲಿ ಮಂಡಿಸಬೇಕೇ ಎಂಬ ಬಗ್ಗೆ ಸ್ಪೀಕರ್ ಜೊತೆ ಸಮಾಲೋಚನೆ ನಡೆಸಲಾಗುವುದು’ ಎಂದರು.</p>.<p>ರಾಹುಲ್ ಗಾಂಧಿ ಅವರ ಲೋಕಸಭಾ ಸದಸ್ಯತ್ವ ರದ್ದುಗೊಳಿಸಬೇಕು ಹಾಗೂ ಅವರು ಚುನಾವಣೆಯಲ್ಲಿ ಯಾವತ್ತೂ ಸ್ಪರ್ಧಿಸದಂತೆ ನಿಷೇಧ ಹೇರಬೇಕು ಎಂಬ ಬೇಡಿಕೆ ಇರುವ ‘ಸ್ವತಂತ್ರ ನಿರ್ಣಯ’ದ ನೋಟಿಸ್ ಅನ್ನು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಸಲ್ಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಪ್ರಧಾನಿ ವಿರುದ್ಧ ಅಸಂಸದೀಯ ಭಾಷೆ ಬಳಸಿದ್ದಕ್ಕಾಗಿ, ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಸರ್ಕಾರ ಯಾವುದೇ ಗೊತ್ತುವಳಿ ಮಂಡಿಸುವುದಿಲ್ಲ ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ಶುಕ್ರವಾರ ಹೇಳಿದ್ದಾರೆ.</p>.<p>ಬಿಜೆಪಿ ಸಂಸದರೊಬ್ಬರು ಈಗಾಗಲೇ ‘ಸ್ವತಂತ್ರ ನಿರ್ಣಯ’ದ ನೋಟಿಸ್ ಸಲ್ಲಿಸಿದ್ದಾರೆ. ಇದೇ ವಿಚಾರವಾಗಿ ಮತ್ತೊಂದು ಗೊತ್ತುವಳಿ ಮಂಡಿಸುವ ಯೋಜನೆಯನ್ನು ಸರ್ಕಾರ ಕೈಬಿಟ್ಟಿದೆ ಎಂದು ಹೇಳಿದ್ದಾರೆ.</p>.<p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು,‘ಬಿಜೆಪಿ ಸಂಸದ ನಿಶಿಕಾಂತ್ ದುಬೆ ಸಲ್ಲಿಸಿರುವ ನೋಟಿಸ್ ಅನ್ನು ಹಕ್ಕುಬಾಧ್ಯತಾ ಸಮಿತಿ ಅಥವಾ ನೈತಿಕ ಸಮಿತಿಗೆ ಕಳುಹಿಸಬೇಕೇ ಇಲ್ಲವೇ ನೇರವಾಗಿ ಲೋಕಸಭೆಯಲ್ಲಿ ಮಂಡಿಸಬೇಕೇ ಎಂಬ ಬಗ್ಗೆ ಸ್ಪೀಕರ್ ಜೊತೆ ಸಮಾಲೋಚನೆ ನಡೆಸಲಾಗುವುದು’ ಎಂದರು.</p>.<p>ರಾಹುಲ್ ಗಾಂಧಿ ಅವರ ಲೋಕಸಭಾ ಸದಸ್ಯತ್ವ ರದ್ದುಗೊಳಿಸಬೇಕು ಹಾಗೂ ಅವರು ಚುನಾವಣೆಯಲ್ಲಿ ಯಾವತ್ತೂ ಸ್ಪರ್ಧಿಸದಂತೆ ನಿಷೇಧ ಹೇರಬೇಕು ಎಂಬ ಬೇಡಿಕೆ ಇರುವ ‘ಸ್ವತಂತ್ರ ನಿರ್ಣಯ’ದ ನೋಟಿಸ್ ಅನ್ನು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಸಲ್ಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>