ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈಲು ಪ್ರಯಾಣ ದರ ಏರಿಕೆ ಇಲ್ಲ: ಅಶ್ವಿನಿ ವೈಷ್ಣವ್‌

Published 6 ಆಗಸ್ಟ್ 2023, 14:45 IST
Last Updated 6 ಆಗಸ್ಟ್ 2023, 14:45 IST
ಅಕ್ಷರ ಗಾತ್ರ

ನವದೆಹಲಿ: ನಿಲ್ದಾಣಗಳ ಪುನರಾಭಿವೃದ್ಧಿ ಯೋಜನೆ ಹೆಸರಿನಲ್ಲಿ ರೈಲುಗಳ ಪ್ರಯಾಣ ದರವನ್ನು ಏರಿಕೆ ಮಾಡುವುದಿಲ್ಲ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಭಾನುವಾರ ಹೇಳಿದ್ದಾರೆ.

ರೈಲು ನಿಲ್ದಾಣಗಳ ಪುನರಾಭಿವೃದ್ಧಿ ಯೋಜನೆಗೆ ಅಗತ್ಯವಿರುವ ₹25 ಸಾವಿರ ಕೋಟಿಯನ್ನು ಪ್ರಸ್ತುತ ಬಜೆಟ್‌ ಮೂಲಕ ಹಂಚಿಕೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಸಮಾಜದ ಎಲ್ಲ ಸ್ತರಗಳ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸುವ ಗುರಿಯನ್ನು ಈ ಯೋಜನೆ ಹೊಂದಿದೆ ಎಂದೂ ವಿವರಿಸಿದ್ದಾರೆ.

‘ಸಾಮಾನ್ಯ ಜನರ ಬದುಕನ್ನು ಉನ್ನತ ಮಟ್ಟಕ್ಕೇರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಕಾರ್ಯಪ್ರವೃತ್ತರಾಗಿದ್ದಾರೆ. ರೈಲು ನಿಲ್ದಾಣಗಳನ್ನು ನವೀಕರಿಸುವ ಯೋಜನೆಯು ಇದರ ಭಾಗವಾಗಿದೆ’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT