ನವದೆಹಲಿ: ನಿಲ್ದಾಣಗಳ ಪುನರಾಭಿವೃದ್ಧಿ ಯೋಜನೆ ಹೆಸರಿನಲ್ಲಿ ರೈಲುಗಳ ಪ್ರಯಾಣ ದರವನ್ನು ಏರಿಕೆ ಮಾಡುವುದಿಲ್ಲ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಭಾನುವಾರ ಹೇಳಿದ್ದಾರೆ.
ರೈಲು ನಿಲ್ದಾಣಗಳ ಪುನರಾಭಿವೃದ್ಧಿ ಯೋಜನೆಗೆ ಅಗತ್ಯವಿರುವ ₹25 ಸಾವಿರ ಕೋಟಿಯನ್ನು ಪ್ರಸ್ತುತ ಬಜೆಟ್ ಮೂಲಕ ಹಂಚಿಕೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಸಮಾಜದ ಎಲ್ಲ ಸ್ತರಗಳ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸುವ ಗುರಿಯನ್ನು ಈ ಯೋಜನೆ ಹೊಂದಿದೆ ಎಂದೂ ವಿವರಿಸಿದ್ದಾರೆ.
‘ಸಾಮಾನ್ಯ ಜನರ ಬದುಕನ್ನು ಉನ್ನತ ಮಟ್ಟಕ್ಕೇರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಕಾರ್ಯಪ್ರವೃತ್ತರಾಗಿದ್ದಾರೆ. ರೈಲು ನಿಲ್ದಾಣಗಳನ್ನು ನವೀಕರಿಸುವ ಯೋಜನೆಯು ಇದರ ಭಾಗವಾಗಿದೆ’ ಎಂದಿದ್ದಾರೆ.