<p><strong>ಲಖನೌ:</strong> ಇಂದಿನಿಂದ ಆರಂಭವಾಗಿರುವ ಭಾರತೀಯ ಜನತಾ ಪಕ್ಷದ (ಬಿಜೆಪಿ) ಸದಸ್ಯತ್ವ ಅಭಿಯಾನದಿಂದ ಯಾವುದೇ ವ್ಯಕ್ತಿ ಅಥವಾ ಮನೆ ಹೊರಗುಳಿದಿಲ್ಲ ಎಂಬುದನ್ನು ಕಾರ್ಯಕರ್ತರು ಖಾತ್ರಿಪಡಿಸಬೇಕು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಸೋಮವಾರ ಕರೆ ನೀಡಿದ್ದಾರೆ.</p><p>ಈ ಕುರಿತು ಎಕ್ಸ್/ಟ್ವಿಟರ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಯೋಗಿ ಆದಿತ್ಯನಾಥ, 'ಇಂದಿನಿಂದ ಆರಂಭವಾಗಿರುವ ಬಿಜೆಪಿ ಸದಸ್ಯತ್ವ ಅಭಿಯಾನವು ಅಭಿವೃದ್ಧಿ ಹೊಂದಿದ ಭಾರತಕ್ಕಾಗಿನ ದೂರದೃಷ್ಟಿ, ಅಂತ್ಯೋದಯದ ಪ್ರತಿಜ್ಞೆ, ಜನರ ಸೇವೆಗಾಗಿ ಶಪಥ ಮತ್ತು ದೇಶ ಮೊದಲು ಎಂಬ ಉತ್ಸಾಹದೊಂದಿಗೆ ಪ್ರತಿಯೊಬ್ಬರನ್ನೂ ತಲುಪುವ ಚಳವಳಿಯಾಗಿದೆ' ಎಂದಿದ್ದಾರೆ.</p><p>'ಬನ್ನಿ, ಬಿಜೆಪಿ ಕಾರ್ಯಕರ್ತರಾದ ನಾವೆಲ್ಲ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿರುವ 'ಎಲ್ಲರ ಜೊತೆ, ಎಲ್ಲರ ಅಭಿವೃದ್ಧಿ, ಎಲ್ಲರ ವಿಶ್ವಾಸ ಮತ್ತು ಪ್ರತಿಯೊಬ್ಬರ ಪ್ರಯತ್ನ' ಎಂಬ ಮಂತ್ರವನ್ನು ಮೈಗೂಡಿಸಿಕೊಂಡು ಈ ರಾಷ್ಟ್ರೀಯ ಕಾರ್ಯಭಾರದ ಯಶಸ್ಸಿಗಾಗಿ ಪೂರ್ಣ ಉತ್ಸಾಹ ಮತ್ತು ಬದ್ಧತೆಯಿಂದ ಪಾಲ್ಗೊಳ್ಳೋಣ' ಎಂದು ಕರೆ ನೀಡಿದ್ದಾರೆ.</p><p>'ನೆನಪಿರಲಿ, ಯಾವುದೇ ಮನೆ, ವ್ಯಕ್ತಿ ಅಥವಾ ಯಾವುದೇ ವರ್ಗವೂ ಈ ಅಭಿಯಾನದಿಂದ ಹೊರಗುಳಿಯಬಾರದು' ಎಂದು ಒತ್ತಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ:</strong> ಇಂದಿನಿಂದ ಆರಂಭವಾಗಿರುವ ಭಾರತೀಯ ಜನತಾ ಪಕ್ಷದ (ಬಿಜೆಪಿ) ಸದಸ್ಯತ್ವ ಅಭಿಯಾನದಿಂದ ಯಾವುದೇ ವ್ಯಕ್ತಿ ಅಥವಾ ಮನೆ ಹೊರಗುಳಿದಿಲ್ಲ ಎಂಬುದನ್ನು ಕಾರ್ಯಕರ್ತರು ಖಾತ್ರಿಪಡಿಸಬೇಕು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಸೋಮವಾರ ಕರೆ ನೀಡಿದ್ದಾರೆ.</p><p>ಈ ಕುರಿತು ಎಕ್ಸ್/ಟ್ವಿಟರ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಯೋಗಿ ಆದಿತ್ಯನಾಥ, 'ಇಂದಿನಿಂದ ಆರಂಭವಾಗಿರುವ ಬಿಜೆಪಿ ಸದಸ್ಯತ್ವ ಅಭಿಯಾನವು ಅಭಿವೃದ್ಧಿ ಹೊಂದಿದ ಭಾರತಕ್ಕಾಗಿನ ದೂರದೃಷ್ಟಿ, ಅಂತ್ಯೋದಯದ ಪ್ರತಿಜ್ಞೆ, ಜನರ ಸೇವೆಗಾಗಿ ಶಪಥ ಮತ್ತು ದೇಶ ಮೊದಲು ಎಂಬ ಉತ್ಸಾಹದೊಂದಿಗೆ ಪ್ರತಿಯೊಬ್ಬರನ್ನೂ ತಲುಪುವ ಚಳವಳಿಯಾಗಿದೆ' ಎಂದಿದ್ದಾರೆ.</p><p>'ಬನ್ನಿ, ಬಿಜೆಪಿ ಕಾರ್ಯಕರ್ತರಾದ ನಾವೆಲ್ಲ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿರುವ 'ಎಲ್ಲರ ಜೊತೆ, ಎಲ್ಲರ ಅಭಿವೃದ್ಧಿ, ಎಲ್ಲರ ವಿಶ್ವಾಸ ಮತ್ತು ಪ್ರತಿಯೊಬ್ಬರ ಪ್ರಯತ್ನ' ಎಂಬ ಮಂತ್ರವನ್ನು ಮೈಗೂಡಿಸಿಕೊಂಡು ಈ ರಾಷ್ಟ್ರೀಯ ಕಾರ್ಯಭಾರದ ಯಶಸ್ಸಿಗಾಗಿ ಪೂರ್ಣ ಉತ್ಸಾಹ ಮತ್ತು ಬದ್ಧತೆಯಿಂದ ಪಾಲ್ಗೊಳ್ಳೋಣ' ಎಂದು ಕರೆ ನೀಡಿದ್ದಾರೆ.</p><p>'ನೆನಪಿರಲಿ, ಯಾವುದೇ ಮನೆ, ವ್ಯಕ್ತಿ ಅಥವಾ ಯಾವುದೇ ವರ್ಗವೂ ಈ ಅಭಿಯಾನದಿಂದ ಹೊರಗುಳಿಯಬಾರದು' ಎಂದು ಒತ್ತಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>