<p><strong>ನವದೆಹಲಿ:</strong> ಸಂಸತ್ತಿನಲ್ಲಿ ಭಾಷಣ ಮಾಡಲು ಅಥವಾ ಮತದಾನ ಮಾಡಲು ಲಂಚ ಪಡೆದ ಜನಪ್ರತಿನಿಧಿಗಳಿಗೆ ಕಾನೂನು ಕ್ರಮದಿಂದ ಯಾವುದೇ ವಿನಾಯಿತಿ ಇಲ್ಲ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ.</p><p>ಮುಖ್ಯನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ಏಳು ಮಂದಿ ಇದ್ದ ಸಾಂವಿಧಾನಿಕ ಪೀಠವು, 1998ರಲ್ಲಿ ಜೆಎಂಎಂ ಲಂಚ ಪ್ರಕರಣದಲ್ಲಿ ಪಂಚ ಸದಸ್ಯ ಪೀಠ ನೀಡಿದ್ದ ತೀರ್ಪನ್ನು ಸರ್ವಾನುಮತದಿಂದ ರದ್ದು ಮಾಡಿತು.</p>.ಲಂಚ ಪಡೆದ ಆರೋಪ: ಸಿಬಿಐ ಪ್ರಶ್ನೆಗಳಿಗೆ ಪ್ರತಿಕ್ರಿಯೆ ಸಲ್ಲಿಸಿದ ಮಹುವಾ .<p>ಸಂಸತ್ತಿನಲ್ಲಿ ಭಾಷಣ ಮಾಡಲು ಅಥವಾ ಮತದಾನ ಮಾಡಲು ಲಂಚ ಪಡೆದ ಶಾಸಕರಿಗೆ ಆ ತೀರ್ಪಿನಲ್ಲಿ ಕಾನೂನು ಕ್ರಮದಿಂದ ವಿನಾಯಿತಿ ನೀಡಲಾಗಿತ್ತು.</p><p>ಲಂಚಕ್ಕೆ ಸಂಸದೀಯ ಸವಲತ್ತುಗಳಿಂದ ರಕ್ಷಣೆ ನೀಡಲಾಗುವುದಿಲ್ಲ. 1998ರ ತೀರ್ಪಿನ ವ್ಯಾಖ್ಯಾನವು ಸಂವಿಧಾನದ 105 ಮತ್ತು 194 ನೇ ವಿಧಿಗಳಿಗೆ ವಿರುದ್ಧವಾಗಿದೆ ಎಂದು ತೀರ್ಪು ಪ್ರಕಟಿಸುವ ವೇಳೆ ಸಿಜೆಐ ನುಡಿದರು.</p><p>ಲಂಚವು ಸಾರ್ವಜನಿಕ ಜೀವನದಲ್ಲಿ ನಿಷ್ಠೆಯನ್ನು ನಾಶಪಡಿಸುವುದರಿಂದ, ಈ ವಿಧಿಗಳಡಿ ವಿನಾಯಿತಿ ಹೊಂದಿಲ್ಲ ಎಂದು ಸಿಜೆಐ ಹೇಳಿದ್ದಾರೆ.</p> .₹60 ಕೋಟಿ ಲಂಚ ಪ್ರಕರಣ: ರೈಲ್ವೆ ಅಧಿಕಾರಿಗಳ ವಿರುದ್ಧ ಸಿಬಿಐ ಪ್ರಕರಣ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಸಂಸತ್ತಿನಲ್ಲಿ ಭಾಷಣ ಮಾಡಲು ಅಥವಾ ಮತದಾನ ಮಾಡಲು ಲಂಚ ಪಡೆದ ಜನಪ್ರತಿನಿಧಿಗಳಿಗೆ ಕಾನೂನು ಕ್ರಮದಿಂದ ಯಾವುದೇ ವಿನಾಯಿತಿ ಇಲ್ಲ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ.</p><p>ಮುಖ್ಯನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ಏಳು ಮಂದಿ ಇದ್ದ ಸಾಂವಿಧಾನಿಕ ಪೀಠವು, 1998ರಲ್ಲಿ ಜೆಎಂಎಂ ಲಂಚ ಪ್ರಕರಣದಲ್ಲಿ ಪಂಚ ಸದಸ್ಯ ಪೀಠ ನೀಡಿದ್ದ ತೀರ್ಪನ್ನು ಸರ್ವಾನುಮತದಿಂದ ರದ್ದು ಮಾಡಿತು.</p>.ಲಂಚ ಪಡೆದ ಆರೋಪ: ಸಿಬಿಐ ಪ್ರಶ್ನೆಗಳಿಗೆ ಪ್ರತಿಕ್ರಿಯೆ ಸಲ್ಲಿಸಿದ ಮಹುವಾ .<p>ಸಂಸತ್ತಿನಲ್ಲಿ ಭಾಷಣ ಮಾಡಲು ಅಥವಾ ಮತದಾನ ಮಾಡಲು ಲಂಚ ಪಡೆದ ಶಾಸಕರಿಗೆ ಆ ತೀರ್ಪಿನಲ್ಲಿ ಕಾನೂನು ಕ್ರಮದಿಂದ ವಿನಾಯಿತಿ ನೀಡಲಾಗಿತ್ತು.</p><p>ಲಂಚಕ್ಕೆ ಸಂಸದೀಯ ಸವಲತ್ತುಗಳಿಂದ ರಕ್ಷಣೆ ನೀಡಲಾಗುವುದಿಲ್ಲ. 1998ರ ತೀರ್ಪಿನ ವ್ಯಾಖ್ಯಾನವು ಸಂವಿಧಾನದ 105 ಮತ್ತು 194 ನೇ ವಿಧಿಗಳಿಗೆ ವಿರುದ್ಧವಾಗಿದೆ ಎಂದು ತೀರ್ಪು ಪ್ರಕಟಿಸುವ ವೇಳೆ ಸಿಜೆಐ ನುಡಿದರು.</p><p>ಲಂಚವು ಸಾರ್ವಜನಿಕ ಜೀವನದಲ್ಲಿ ನಿಷ್ಠೆಯನ್ನು ನಾಶಪಡಿಸುವುದರಿಂದ, ಈ ವಿಧಿಗಳಡಿ ವಿನಾಯಿತಿ ಹೊಂದಿಲ್ಲ ಎಂದು ಸಿಜೆಐ ಹೇಳಿದ್ದಾರೆ.</p> .₹60 ಕೋಟಿ ಲಂಚ ಪ್ರಕರಣ: ರೈಲ್ವೆ ಅಧಿಕಾರಿಗಳ ವಿರುದ್ಧ ಸಿಬಿಐ ಪ್ರಕರಣ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>