<p><strong>ನವದೆಹಲಿ</strong>: ‘ಆಪರೇಷನ್ ಸಿಂಧೂರ’ ಕುರಿತು ಅವಹೇಳನಕಾರಿ ಪೋಸ್ಟ್ ಮಾಡಿದ ಆರೋಪ ಎದುರಿಸುತ್ತಿರುವ ಅಶೋಕ ವಿಶ್ವವಿದ್ಯಾಲಯ ಪ್ರಾಧ್ಯಾಪಕ ಅಲಿ ಖಾನ್ ಮಹಮೂದಾಬಾದ್ ಅವರ ಮಧ್ಯಂತರ ಜಾಮೀನನ್ನು ವಿಸ್ತರಿಸಿ ಸುಪ್ರೀಂ ಕೋರ್ಟ್ ಬುಧವಾರ ಆದೇಶಿಸಿದೆ.</p>.<p>ಈ ಕುರಿತು ಆದೇಶ ಹೊರಡಿಸಿದ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಹಾಗೂ ದೀಪಾಂಕರ ದತ್ತಾ ಅವರು ಇದ್ದ ನ್ಯಾಯಪೀಠ, ಮುಂದಿನ ವಿಚಾರಣೆ ವೇಳೆಗೆ ಪ್ರೊ. ಅಲಿ ಖಾನ್ ವಿರುದ್ಧದ ತನಿಖೆಗೆ ಸಂಬಂಧಿಸಿದ ವರದಿ ಸಲ್ಲಿಸುವಂತೆ ಎಸ್ಐಟಿಗೆ ನಿರ್ದೇಶನ ನೀಡಿತು.</p>.<p>ವಿಚಾರಣೆ ವೇಳೆ, ‘ಪ್ರೊ.ಅಲಿ ಖಾನ್ ಅವರ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಯಾವುದೇ ಅಡಚಣೆ ಇಲ್ಲ. ಆದರೆ, ಅವರ ವಿರುದ್ಧ ದಾಖಲಾಗಿರುವ ಪ್ರಕರಣಗಳಿಗೆ ಸಂಬಂಧಿಸಿ ಅವರು ಆನ್ಲೈನ್ಲಲ್ಲಿ ಯಾವುದೇ ಪೋಸ್ಟ್ ಹಾಕುವಂತಿಲ್ಲ’ ಎಂದು ನ್ಯಾಯಪೀಠ ಹೇಳಿತು.</p>.<p>‘ದೇಶದಲ್ಲಿ ನಡೆಯುವ ಭಯೋತ್ಪಾದಕ ದಾಳಿ ಅಥವಾ ಉಗ್ರರ ದಾಳಿಗೆ ಪ್ರತ್ಯುತ್ತರವಾಗಿ ಭಾರತೀಯ ಪಡೆಗಳು ನಡೆಸುವ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಕೂಡ ಪ್ರೊ.ಅಲಿ ಖಾನ್ ಯಾವುದೇ ಅಭಿಪ್ರಾಯ ವ್ಯಕ್ತಪಡಿಸಬಾರದು’ ಎಂದೂ ನ್ಯಾಯಪೀಠ ನಿರ್ಬಂಧ ಹೇರಿದೆ. </p>.<p>‘ತನಿಖೆಯನ್ನು ದೀರ್ಘಕಾಲದವರೆಗೆ ನಡೆಸದೇ, ತ್ವರಿತವಾಗಿ ಪೂರ್ಣಗೊಳಿಸಬೇಕು’ ಎಂದು ಹರಿಯಾಣ ಪೊಲೀಸರಿಗೆ ಪೀಠವು ನಿರ್ದೇಶನ ನೀಡಿತು.</p>.<p>‘ಆಪರೇಷನ್ ಸಿಂಧೂರ’ ಕುರಿತ ಅವಹೇಳನಕಾರಿ ಪೋಸ್ಟ್ ಮಾಡಿದ ಅರೋಪದಡಿ ಪ್ರೊ.ಅಲಿ ಖಾನ್ ಅವರನ್ನು ಮೇ 18ರಂದು ಬಂಧಿಸಿದ್ದ ಹರಿಯಾಣ ಪೊಲೀಸರು, ಅವರ ವಿರುದ್ಧ ಎರಡು ಎಫ್ಐಆರ್ ದಾಖಲಿಸಿದ್ದರು. </p>.<p>ಪ್ರೊ.ಅಲಿ ಖಾನ್ ಅವರಿಗೆ ಸುಪ್ರೀಂ ಕೋರ್ಟ್, ಮೇ 21ರಂದು ಮಧ್ಯಂತರ ಜಾಮೀನು ನೀಡಿತ್ತು. ಅಲ್ಲದೆ, ಅವರ ವಿರುದ್ಧದ ಎಫ್ಐಆರ್ಗಳ ಕುರಿತು ಪರಿಶೀಲನೆಗೆ ಮೂವರು ಸದಸ್ಯರ ಎಸ್ಐಟಿ ರಚಿಸಬೇಕು ಎಂದೂ ನಿರ್ದೇಶನ ನೀಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ಆಪರೇಷನ್ ಸಿಂಧೂರ’ ಕುರಿತು ಅವಹೇಳನಕಾರಿ ಪೋಸ್ಟ್ ಮಾಡಿದ ಆರೋಪ ಎದುರಿಸುತ್ತಿರುವ ಅಶೋಕ ವಿಶ್ವವಿದ್ಯಾಲಯ ಪ್ರಾಧ್ಯಾಪಕ ಅಲಿ ಖಾನ್ ಮಹಮೂದಾಬಾದ್ ಅವರ ಮಧ್ಯಂತರ ಜಾಮೀನನ್ನು ವಿಸ್ತರಿಸಿ ಸುಪ್ರೀಂ ಕೋರ್ಟ್ ಬುಧವಾರ ಆದೇಶಿಸಿದೆ.</p>.<p>ಈ ಕುರಿತು ಆದೇಶ ಹೊರಡಿಸಿದ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಹಾಗೂ ದೀಪಾಂಕರ ದತ್ತಾ ಅವರು ಇದ್ದ ನ್ಯಾಯಪೀಠ, ಮುಂದಿನ ವಿಚಾರಣೆ ವೇಳೆಗೆ ಪ್ರೊ. ಅಲಿ ಖಾನ್ ವಿರುದ್ಧದ ತನಿಖೆಗೆ ಸಂಬಂಧಿಸಿದ ವರದಿ ಸಲ್ಲಿಸುವಂತೆ ಎಸ್ಐಟಿಗೆ ನಿರ್ದೇಶನ ನೀಡಿತು.</p>.<p>ವಿಚಾರಣೆ ವೇಳೆ, ‘ಪ್ರೊ.ಅಲಿ ಖಾನ್ ಅವರ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಯಾವುದೇ ಅಡಚಣೆ ಇಲ್ಲ. ಆದರೆ, ಅವರ ವಿರುದ್ಧ ದಾಖಲಾಗಿರುವ ಪ್ರಕರಣಗಳಿಗೆ ಸಂಬಂಧಿಸಿ ಅವರು ಆನ್ಲೈನ್ಲಲ್ಲಿ ಯಾವುದೇ ಪೋಸ್ಟ್ ಹಾಕುವಂತಿಲ್ಲ’ ಎಂದು ನ್ಯಾಯಪೀಠ ಹೇಳಿತು.</p>.<p>‘ದೇಶದಲ್ಲಿ ನಡೆಯುವ ಭಯೋತ್ಪಾದಕ ದಾಳಿ ಅಥವಾ ಉಗ್ರರ ದಾಳಿಗೆ ಪ್ರತ್ಯುತ್ತರವಾಗಿ ಭಾರತೀಯ ಪಡೆಗಳು ನಡೆಸುವ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಕೂಡ ಪ್ರೊ.ಅಲಿ ಖಾನ್ ಯಾವುದೇ ಅಭಿಪ್ರಾಯ ವ್ಯಕ್ತಪಡಿಸಬಾರದು’ ಎಂದೂ ನ್ಯಾಯಪೀಠ ನಿರ್ಬಂಧ ಹೇರಿದೆ. </p>.<p>‘ತನಿಖೆಯನ್ನು ದೀರ್ಘಕಾಲದವರೆಗೆ ನಡೆಸದೇ, ತ್ವರಿತವಾಗಿ ಪೂರ್ಣಗೊಳಿಸಬೇಕು’ ಎಂದು ಹರಿಯಾಣ ಪೊಲೀಸರಿಗೆ ಪೀಠವು ನಿರ್ದೇಶನ ನೀಡಿತು.</p>.<p>‘ಆಪರೇಷನ್ ಸಿಂಧೂರ’ ಕುರಿತ ಅವಹೇಳನಕಾರಿ ಪೋಸ್ಟ್ ಮಾಡಿದ ಅರೋಪದಡಿ ಪ್ರೊ.ಅಲಿ ಖಾನ್ ಅವರನ್ನು ಮೇ 18ರಂದು ಬಂಧಿಸಿದ್ದ ಹರಿಯಾಣ ಪೊಲೀಸರು, ಅವರ ವಿರುದ್ಧ ಎರಡು ಎಫ್ಐಆರ್ ದಾಖಲಿಸಿದ್ದರು. </p>.<p>ಪ್ರೊ.ಅಲಿ ಖಾನ್ ಅವರಿಗೆ ಸುಪ್ರೀಂ ಕೋರ್ಟ್, ಮೇ 21ರಂದು ಮಧ್ಯಂತರ ಜಾಮೀನು ನೀಡಿತ್ತು. ಅಲ್ಲದೆ, ಅವರ ವಿರುದ್ಧದ ಎಫ್ಐಆರ್ಗಳ ಕುರಿತು ಪರಿಶೀಲನೆಗೆ ಮೂವರು ಸದಸ್ಯರ ಎಸ್ಐಟಿ ರಚಿಸಬೇಕು ಎಂದೂ ನಿರ್ದೇಶನ ನೀಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>