ಒಡಿಶಾದ ಬಾಲಸೋರ್ನಲ್ಲಿ ತ್ರಿವಳಿ ರೈಲುಗಳ ನಡುವೆ ಅಪಘಾತ ಸಂಭವಿಸಿದ್ದು, ದುರಂತದಲ್ಲಿ 275 ಮಂದಿ ಸಾವಿಗೀಡಾಗಿದ್ದಾರೆ ಎಂದು ಒಡಿಶಾ ಸರ್ಕಾರ ಭಾನುವಾರ ಅಧಿಕೃತ ಮಾಹಿತಿ ನೀಡಿತ್ತು. ಇದಕ್ಕೂ ಮೊದಲು ಸಾವಿನ ಸಂಖ್ಯೆ 288 ಎಂದು ರೈಲ್ವೇ ಇಲಾಖೆ ತಿಳಿಸಿತ್ತು. ಅಲ್ಲದೇ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ‘ತಮ್ಮ ರಾಜ್ಯದಿಂದ 182 ಮಂದಿ ಕಾಣೆಯಾಗಿದ್ದಾರೆ‘ ಎಂದು ಹೇಳಿದ್ದರು. ಸಾವಿಗೀಡಾದವರ ಸಂಖ್ಯೆಯನ್ನು ಸರ್ಕಾರ ಮುಚ್ಚಿಡುತ್ತಿದೆ ಎಂದು ಪ್ರತಿಪಕ್ಷದ ಕೆಲವು ನಾಯಕರು ಆರೋಪಿಸಿದ್ದರು.