<p><strong>ಜೈಪುರ: </strong>ಸರ್ಕಾರಿ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿ ರಾಜಸ್ಥಾನದಲ್ಲಿ ಇಂದು (ಭಾನುವಾರ) ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು ನಡೆಸಲಾಗುತ್ತಿದೆ.</p>.<p>ಪರೀಕ್ಷೆಯಲ್ಲಿ ನಕಲು ತಡೆಯುವ ನಿಟ್ಟಿನಲ್ಲಿ ಐದು ಜಿಲ್ಲೆಗಳಲ್ಲಿ ಸತತ 12 ಗಂಟೆಗಳ ಕಾಲ ಮೊಬೈಲ್ ಇಂಟರ್ನೆಟ್ ಮತ್ತು ಎಸ್ಎಂಎಸ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.</p>.<p>ಪರೀಕ್ಷೆಯಲ್ಲಿ ವಂಚನೆ ತಡೆಯುವ ಉದ್ದೇಶದಿಂದ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>16 ಲಕ್ಷ ಅಭ್ಯರ್ಥಿಗಳು ರಾಜಸ್ಥಾನ -ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು (REET) ಎದುರಿಸಲಿದ್ದಾರೆ. ಒಟ್ಟು 31 ಸಾವಿರ ಹುದ್ದೆಗಳಿಗೆ ಶಿಕ್ಷಕರನ್ನು ನೇಮಕ ಮಾಡಲು ಪರೀಕ್ಷೆ ನಡೆಸಲಾಗುತ್ತಿದೆ.</p>.<p>ಅಜ್ಮೀರ್, ದೌಸಾ, ಅಲ್ವಾರ್, ಜೈಪುರ ಹಾಗೂ ಜುಂಜುನು ಜಿಲ್ಲೆಗಳಲ್ಲಿ ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ. ಜತೆಗೆ ಪರಿಸ್ಥಿತಿಗೆ ಅನುಗುಣವಾಗಿ ಕ್ರಮ ತೆಗೆದುಕೊಳ್ಳಲು ಜಿಲ್ಲಾಧಿಕಾರಿಗೆ ಸೂಚನೆ ನೀಡಲಾಗಿದೆ.</p>.<p>ಪರೀಕ್ಷಾ ದೃಷ್ಟಿಯಿಂದ ಕೋವಿಡ್ ಮಾರ್ಗಸೂಚಿ ಅನುಗುಣವಾಗಿ ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಅಭ್ಯರ್ಥಿಗಳಿಗೆ ಉಚಿತ ಬಸ್ ಹಾಗೂ ವಿಶೇಷ ರೈಲು ಸೇವೆಯನ್ನು ಸರ್ಕಾರ ಘೋಷಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೈಪುರ: </strong>ಸರ್ಕಾರಿ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿ ರಾಜಸ್ಥಾನದಲ್ಲಿ ಇಂದು (ಭಾನುವಾರ) ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು ನಡೆಸಲಾಗುತ್ತಿದೆ.</p>.<p>ಪರೀಕ್ಷೆಯಲ್ಲಿ ನಕಲು ತಡೆಯುವ ನಿಟ್ಟಿನಲ್ಲಿ ಐದು ಜಿಲ್ಲೆಗಳಲ್ಲಿ ಸತತ 12 ಗಂಟೆಗಳ ಕಾಲ ಮೊಬೈಲ್ ಇಂಟರ್ನೆಟ್ ಮತ್ತು ಎಸ್ಎಂಎಸ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.</p>.<p>ಪರೀಕ್ಷೆಯಲ್ಲಿ ವಂಚನೆ ತಡೆಯುವ ಉದ್ದೇಶದಿಂದ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>16 ಲಕ್ಷ ಅಭ್ಯರ್ಥಿಗಳು ರಾಜಸ್ಥಾನ -ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು (REET) ಎದುರಿಸಲಿದ್ದಾರೆ. ಒಟ್ಟು 31 ಸಾವಿರ ಹುದ್ದೆಗಳಿಗೆ ಶಿಕ್ಷಕರನ್ನು ನೇಮಕ ಮಾಡಲು ಪರೀಕ್ಷೆ ನಡೆಸಲಾಗುತ್ತಿದೆ.</p>.<p>ಅಜ್ಮೀರ್, ದೌಸಾ, ಅಲ್ವಾರ್, ಜೈಪುರ ಹಾಗೂ ಜುಂಜುನು ಜಿಲ್ಲೆಗಳಲ್ಲಿ ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ. ಜತೆಗೆ ಪರಿಸ್ಥಿತಿಗೆ ಅನುಗುಣವಾಗಿ ಕ್ರಮ ತೆಗೆದುಕೊಳ್ಳಲು ಜಿಲ್ಲಾಧಿಕಾರಿಗೆ ಸೂಚನೆ ನೀಡಲಾಗಿದೆ.</p>.<p>ಪರೀಕ್ಷಾ ದೃಷ್ಟಿಯಿಂದ ಕೋವಿಡ್ ಮಾರ್ಗಸೂಚಿ ಅನುಗುಣವಾಗಿ ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಅಭ್ಯರ್ಥಿಗಳಿಗೆ ಉಚಿತ ಬಸ್ ಹಾಗೂ ವಿಶೇಷ ರೈಲು ಸೇವೆಯನ್ನು ಸರ್ಕಾರ ಘೋಷಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>