ಎನ್ಡಿಎ ಸರ್ಕಾರ ಅಧಿಕಾರಕ್ಕೆ ಏರುತ್ತಿರುವುದರಿಂದ ದುರ್ಬಲ ವರ್ಗಗಳ ಪರವಾಗಿ ಧ್ವನಿ ಎತ್ತಬೇಕಿದೆ. ಯುವಜನತೆಯ ದೊಡ್ಡ ಸಮಸ್ಯೆಯಾಗಿ ಉಲ್ಬಣಗೊಳ್ಳುತ್ತಿರುವ ನಿರುದ್ಯೋಗವನ್ನು ಶಮನ ಮಾಡಬೇಕಿದೆ. ಸಮಾಜದ ಅಭಿವೃದ್ಧಿಗೆ ಎನ್ಡಿಎ ಸರ್ಕಾರ ಶ್ರಮಿಸಬೇಕಿದೆ ಎಂದು ಝಾ ಹೇಳಿದ್ದಾರೆ.
ಈ ಬಾರಿ ಜನತಾ ದಳ (ಯುನೈಟೆಡ್ ) ಕಿಂಗ್ ಮೇಕರ್ ಆಗಿರುವುದರಿಂದ ಬಿಹಾರದ ದೀರ್ಘಕಾಲದ ಬೇಡಿಕೆಗಳು ಈಡೇರಲಿದೆ. ವಿಶೇಷ ಸ್ಥಾನಮಾನ ಲಭಿಸಲಿದೆ ಎಂದು ಝಾ ತಿಳಿಸಿದ್ದಾರೆ.
ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಬಿಜೆಪಿ ಅನೇಕ ವಿವಾದಾತ್ಮಕ ಹೇಳಿಕೆಗಳನ್ನು ಇಂಡಿಯಾ ಮೈತ್ರಿಕೂಟದ ವಿರುದ್ಧ ನೀಡಿದ್ದರು ಎಂದು ವಾಗ್ದಾಳಿ ನಡೆಸಿದ್ದಾರೆ.