<p><strong>ನವದೆಹಲಿ</strong>: ಈ ಬಾರಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಅಧಿಕಾರಕ್ಕೆ ಏರುತ್ತಿರುವುದು ಎನ್ಡಿಎ ಸರ್ಕಾರವೇ ಹೊರತು ಮೋದಿ ಸರ್ಕಾರವಲ್ಲ ಎಂದು ಆರ್ಜೆಡಿ ನಾಯಕ ಮನೋಜ್ ಝಾ ಭಾನುವಾರ ಹೇಳಿದ್ದಾರೆ.</p><p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ಪಾಲ್ಗೊಳ್ಳುವುದಿಲ್ಲ’ ಎಂದು ತಿಳಿಸಿದ್ದಾರೆ.</p>.ನಮಗೆ ಸಂಪುಟ ದರ್ಜೆ ಸಚಿವ ಸ್ಥಾನವೇ ಬೇಕು: ಅಜಿತ್ ಪವಾರ್.BJP ನಾಯಕಿ ಪಂಕಜಾ ಸೋತರೆ ನಾನು ಸಾಯುತ್ತೇನೆ ಎಂದಿದ್ದ ವ್ಯಕ್ತಿ ಅಪಘಾತದಲ್ಲಿ ಸಾವು. <p>ಎನ್ಡಿಎ ಸರ್ಕಾರ ಅಧಿಕಾರಕ್ಕೆ ಏರುತ್ತಿರುವುದರಿಂದ ದುರ್ಬಲ ವರ್ಗಗಳ ಪರವಾಗಿ ಧ್ವನಿ ಎತ್ತಬೇಕಿದೆ. ಯುವಜನತೆಯ ದೊಡ್ಡ ಸಮಸ್ಯೆಯಾಗಿ ಉಲ್ಬಣಗೊಳ್ಳುತ್ತಿರುವ ನಿರುದ್ಯೋಗವನ್ನು ಶಮನ ಮಾಡಬೇಕಿದೆ. ಸಮಾಜದ ಅಭಿವೃದ್ಧಿಗೆ ಎನ್ಡಿಎ ಸರ್ಕಾರ ಶ್ರಮಿಸಬೇಕಿದೆ ಎಂದು ಝಾ ಹೇಳಿದ್ದಾರೆ.</p><p>ಈ ಬಾರಿ ಜನತಾ ದಳ (ಯುನೈಟೆಡ್ ) ಕಿಂಗ್ ಮೇಕರ್ ಆಗಿರುವುದರಿಂದ ಬಿಹಾರದ ದೀರ್ಘಕಾಲದ ಬೇಡಿಕೆಗಳು ಈಡೇರಲಿದೆ. ವಿಶೇಷ ಸ್ಥಾನಮಾನ ಲಭಿಸಲಿದೆ ಎಂದು ಝಾ ತಿಳಿಸಿದ್ದಾರೆ.</p><p>ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಬಿಜೆಪಿ ಅನೇಕ ವಿವಾದಾತ್ಮಕ ಹೇಳಿಕೆಗಳನ್ನು ಇಂಡಿಯಾ ಮೈತ್ರಿಕೂಟದ ವಿರುದ್ಧ ನೀಡಿದ್ದರು ಎಂದು ವಾಗ್ದಾಳಿ ನಡೆಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಈ ಬಾರಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಅಧಿಕಾರಕ್ಕೆ ಏರುತ್ತಿರುವುದು ಎನ್ಡಿಎ ಸರ್ಕಾರವೇ ಹೊರತು ಮೋದಿ ಸರ್ಕಾರವಲ್ಲ ಎಂದು ಆರ್ಜೆಡಿ ನಾಯಕ ಮನೋಜ್ ಝಾ ಭಾನುವಾರ ಹೇಳಿದ್ದಾರೆ.</p><p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ಪಾಲ್ಗೊಳ್ಳುವುದಿಲ್ಲ’ ಎಂದು ತಿಳಿಸಿದ್ದಾರೆ.</p>.ನಮಗೆ ಸಂಪುಟ ದರ್ಜೆ ಸಚಿವ ಸ್ಥಾನವೇ ಬೇಕು: ಅಜಿತ್ ಪವಾರ್.BJP ನಾಯಕಿ ಪಂಕಜಾ ಸೋತರೆ ನಾನು ಸಾಯುತ್ತೇನೆ ಎಂದಿದ್ದ ವ್ಯಕ್ತಿ ಅಪಘಾತದಲ್ಲಿ ಸಾವು. <p>ಎನ್ಡಿಎ ಸರ್ಕಾರ ಅಧಿಕಾರಕ್ಕೆ ಏರುತ್ತಿರುವುದರಿಂದ ದುರ್ಬಲ ವರ್ಗಗಳ ಪರವಾಗಿ ಧ್ವನಿ ಎತ್ತಬೇಕಿದೆ. ಯುವಜನತೆಯ ದೊಡ್ಡ ಸಮಸ್ಯೆಯಾಗಿ ಉಲ್ಬಣಗೊಳ್ಳುತ್ತಿರುವ ನಿರುದ್ಯೋಗವನ್ನು ಶಮನ ಮಾಡಬೇಕಿದೆ. ಸಮಾಜದ ಅಭಿವೃದ್ಧಿಗೆ ಎನ್ಡಿಎ ಸರ್ಕಾರ ಶ್ರಮಿಸಬೇಕಿದೆ ಎಂದು ಝಾ ಹೇಳಿದ್ದಾರೆ.</p><p>ಈ ಬಾರಿ ಜನತಾ ದಳ (ಯುನೈಟೆಡ್ ) ಕಿಂಗ್ ಮೇಕರ್ ಆಗಿರುವುದರಿಂದ ಬಿಹಾರದ ದೀರ್ಘಕಾಲದ ಬೇಡಿಕೆಗಳು ಈಡೇರಲಿದೆ. ವಿಶೇಷ ಸ್ಥಾನಮಾನ ಲಭಿಸಲಿದೆ ಎಂದು ಝಾ ತಿಳಿಸಿದ್ದಾರೆ.</p><p>ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಬಿಜೆಪಿ ಅನೇಕ ವಿವಾದಾತ್ಮಕ ಹೇಳಿಕೆಗಳನ್ನು ಇಂಡಿಯಾ ಮೈತ್ರಿಕೂಟದ ವಿರುದ್ಧ ನೀಡಿದ್ದರು ಎಂದು ವಾಗ್ದಾಳಿ ನಡೆಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>