ಗುರುವಾರ ಪಕ್ಷದ ಸಭೆಯಲ್ಲಿ ಮಾತನಾಡಿದ ಶರ್ಮಿಳಾ, ‘ಪಕ್ಷವನ್ನು ವಿಲೀನಗೊಳಿಸುವ ಅಥವಾ ಹಳೆಯ ಪಕ್ಷದೊಂದಿಗೆ ಕೆಲಸ ಮಾಡುವ ಪ್ರಸ್ತಾಪದ ಬಗ್ಗೆ ಕಾಂಗ್ರೆಸ್ ನಾಯಕರ ಪ್ರತಿಕ್ರಿಯೆಗಾಗಿ ನಾಲ್ಕು ತಿಂಗಳಿಂದ ಕಾಯುತ್ತಿದ್ದೆ. ಕಾಂಗ್ರೆಸ್ನಿಂದ ಯಾವುದೇ ಪ್ರತಿಕ್ರಿಯೆ ಬರದ ಕಾರಣ, ಎಲ್ಲಾ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.