ಆಂಗ್ಲೊ ಇಂಡಿಯನ್ ಸಮುದಾಯದ ಮೀಸಲಾತಿಯನ್ನು ಕೊನೆಗೊಳಿಸಿರುವುದನ್ನು ವಿರೋಧಿಸಿದ ಕಾಂಗ್ರೆಸ್ ಸಂಸದ ಹಿಬಿ ಏಡನ್ ಅವರು ಈ ಬಗ್ಗೆ ರಾಷ್ಟ್ರಪತಿಗೆ ಪತ್ರಬರೆದಿದ್ದರು. ‘ದೇಶದಲ್ಲಿ ಈ ಸಮುದಾಯದವರ ಸಂಖ್ಯೆ ಅತ್ಯಂತ ಕಡಿಮೆಯಾಗಿರುವುದರಿಂದ ಲೋಕಸಭೆ ಅಥವಾ ವಿಧಾನಸಭೆಗಳಿಗೆ ಆಯ್ಕೆ
ಯಾಗುವ ಸಾಧ್ಯತೆಯೂ ಇಲ್ಲ. ಮೀಸಲಾತಿಯಿಂದ ಅವರ ಆರ್ಥಿಕ ಸ್ಥಿತಿಗತಿಯ ಮೇಲೆ ಪರಿಣಾಮವಾಗದಿದ್ದರೂ, ನಾವು ಈ ದೇಶಕ್ಕೆ ಸೇರಿದವರೆಂಬ ಭಾವನೆ ಅವರಲ್ಲಿ ಮೂಡಿಸಲು ಸಹಾಯಕವಾಗಿತ್ತು’ ಎಂದು ಪತ್ರದಲ್ಲಿ ಹೇಳಿದ್ದಾರೆ.