<p><strong>ನವದೆಹಲಿ</strong>: ಕಸಾಯಿಖಾನೆ ಮತ್ತು ಮಾಂಸ ಸಂಸ್ಕರಣಾ ಘಟಕಗಳನ್ನು 2006ರ ಪರಿಸರ ಪ್ರಭಾವ ಮೌಲ್ಯಮಾಪನ (ಇಐಎ) ಅಧಿಸೂಚನೆ ವ್ಯಾಪ್ತಿಯಲ್ಲಿ ತರುವ ಅಗತ್ಯವಿಲ್ಲ ಎಂದು ಕೇಂದ್ರ ಸರ್ಕಾರವು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಗೆ (ಎನ್ಜಿಟಿ) ತಿಳಿಸಿದೆ.</p>.<p>ಕಸಾಯಿಖಾನೆಗಳಿಂದ ಪರಿಸರಕ್ಕೆ ಆಗುವ ಹಾನಿಯನ್ನು ತಡೆಗಟ್ಟಲು ಬೇಕಾದ ಮಾರ್ಗಸೂಚಿಗಳು ಈಗಾಗಲೇ ಜಾರಿಯಲ್ಲಿವೆ ಎಂದು ಸರ್ಕಾರ ಹೇಳಿದೆ.</p>.<p>ಕಸಾಯಿಖಾನೆಗಳು ಹಾಗೂ ಮಾಂಸ ಸಂಸ್ಕರಣಾ ಘಟಕಗಳನ್ನು ಇಐಎ ವ್ಯಾಪ್ತಿಗೆ ತರಬೇಕೆಂದು ಒತ್ತಾಯಿಸಿ ಪ್ರಾಣಿ ಹಕ್ಕುಗಳ ಹೋರಾಟಗಾರ್ತಿ ಗೌರಿ ಮೌಲೇಖಿ ಎಂಬವರು ಕಳೆದ ವರ್ಷ ಹಸಿರು ನ್ಯಾಯಮಂಡಳಿ ಮೊರೆ ಹೋಗಿದ್ದರು.</p>.<p>ಕಸಾಯಿಖಾನೆಗಳಲ್ಲಿ ನೀರಿನ ಮಿತಿ ಮೀರಿದ ಬಳಕೆ, ಘನತ್ಯಾಜ್ಯಗಳ ಅಸಮರ್ಪಕ ವಿಲೇವಾರಿಯಿಂದ ಜಲಮೂಲಗಳು ಕಲುಷಿತಗೊಳ್ಳುವುದು ಮತ್ತು ಪ್ರಾಣಿಗಳಿಂದ ಮಾನವನಿಗೆ ಕಾಯಿಲೆಗಳು ಹರಡುವ ಸಾಧ್ಯತೆಯ ಬಗ್ಗೆ ಅವರು ಕಳವಳ ವ್ಯಕ್ತಪಡಿಸಿದ್ದರು. </p>.<p>ಕಳೆದ ವರ್ಷ ಆಗಸ್ಟ್ನಲ್ಲಿ ರಚಿಸಿದ್ದ ಎಂಟು ಸದಸ್ಯರ ಸಮಿತಿಯು ಸಿದ್ಧಪಡಿಸಿರುವ ವರದಿಯನ್ನು ಆಧರಿಸಿ, ಕೇಂದ್ರ ಪರಿಸರ ಸಚಿವಾಲಯವು ಈಚೆಗೆ ಎನ್ಜಿಟಿಗೆ ಪ್ರಮಾಣಪತ್ರ ಸಲ್ಲಿಸಿದೆ. </p>.<p>‘ಪರಿಸರ ಸಂರಕ್ಷಣೆಯ ದೃಷ್ಟಿಯಿಂದ ಕಸಾಯಿಖಾನೆ/ ಮಾಂಸ ಸಂಸ್ಕರಣಾ ಘಟಕಗಳನ್ನು ನಿಯಂತ್ರಿಸಲು ಬೇಕಾದ ಮಾರ್ಗಸೂಚಿಗಳು ಮತ್ತು ಸುರಕ್ಷತಾ ಕ್ರಮಗಳು ಈಗಾಗಲೇ ಜಾರಿಯಲ್ಲಿವೆ. ಆದ್ದರಿಂದ ಇವುಗಳನ್ನು ಇಐಎ ಅಡಿ ತರಬೇಕಾದ ಅವಶ್ಯಕತೆಯಿಲ್ಲ’ ಎಂದು ಸಚಿವಾಲಯ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಕಸಾಯಿಖಾನೆ ಮತ್ತು ಮಾಂಸ ಸಂಸ್ಕರಣಾ ಘಟಕಗಳನ್ನು 2006ರ ಪರಿಸರ ಪ್ರಭಾವ ಮೌಲ್ಯಮಾಪನ (ಇಐಎ) ಅಧಿಸೂಚನೆ ವ್ಯಾಪ್ತಿಯಲ್ಲಿ ತರುವ ಅಗತ್ಯವಿಲ್ಲ ಎಂದು ಕೇಂದ್ರ ಸರ್ಕಾರವು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಗೆ (ಎನ್ಜಿಟಿ) ತಿಳಿಸಿದೆ.</p>.<p>ಕಸಾಯಿಖಾನೆಗಳಿಂದ ಪರಿಸರಕ್ಕೆ ಆಗುವ ಹಾನಿಯನ್ನು ತಡೆಗಟ್ಟಲು ಬೇಕಾದ ಮಾರ್ಗಸೂಚಿಗಳು ಈಗಾಗಲೇ ಜಾರಿಯಲ್ಲಿವೆ ಎಂದು ಸರ್ಕಾರ ಹೇಳಿದೆ.</p>.<p>ಕಸಾಯಿಖಾನೆಗಳು ಹಾಗೂ ಮಾಂಸ ಸಂಸ್ಕರಣಾ ಘಟಕಗಳನ್ನು ಇಐಎ ವ್ಯಾಪ್ತಿಗೆ ತರಬೇಕೆಂದು ಒತ್ತಾಯಿಸಿ ಪ್ರಾಣಿ ಹಕ್ಕುಗಳ ಹೋರಾಟಗಾರ್ತಿ ಗೌರಿ ಮೌಲೇಖಿ ಎಂಬವರು ಕಳೆದ ವರ್ಷ ಹಸಿರು ನ್ಯಾಯಮಂಡಳಿ ಮೊರೆ ಹೋಗಿದ್ದರು.</p>.<p>ಕಸಾಯಿಖಾನೆಗಳಲ್ಲಿ ನೀರಿನ ಮಿತಿ ಮೀರಿದ ಬಳಕೆ, ಘನತ್ಯಾಜ್ಯಗಳ ಅಸಮರ್ಪಕ ವಿಲೇವಾರಿಯಿಂದ ಜಲಮೂಲಗಳು ಕಲುಷಿತಗೊಳ್ಳುವುದು ಮತ್ತು ಪ್ರಾಣಿಗಳಿಂದ ಮಾನವನಿಗೆ ಕಾಯಿಲೆಗಳು ಹರಡುವ ಸಾಧ್ಯತೆಯ ಬಗ್ಗೆ ಅವರು ಕಳವಳ ವ್ಯಕ್ತಪಡಿಸಿದ್ದರು. </p>.<p>ಕಳೆದ ವರ್ಷ ಆಗಸ್ಟ್ನಲ್ಲಿ ರಚಿಸಿದ್ದ ಎಂಟು ಸದಸ್ಯರ ಸಮಿತಿಯು ಸಿದ್ಧಪಡಿಸಿರುವ ವರದಿಯನ್ನು ಆಧರಿಸಿ, ಕೇಂದ್ರ ಪರಿಸರ ಸಚಿವಾಲಯವು ಈಚೆಗೆ ಎನ್ಜಿಟಿಗೆ ಪ್ರಮಾಣಪತ್ರ ಸಲ್ಲಿಸಿದೆ. </p>.<p>‘ಪರಿಸರ ಸಂರಕ್ಷಣೆಯ ದೃಷ್ಟಿಯಿಂದ ಕಸಾಯಿಖಾನೆ/ ಮಾಂಸ ಸಂಸ್ಕರಣಾ ಘಟಕಗಳನ್ನು ನಿಯಂತ್ರಿಸಲು ಬೇಕಾದ ಮಾರ್ಗಸೂಚಿಗಳು ಮತ್ತು ಸುರಕ್ಷತಾ ಕ್ರಮಗಳು ಈಗಾಗಲೇ ಜಾರಿಯಲ್ಲಿವೆ. ಆದ್ದರಿಂದ ಇವುಗಳನ್ನು ಇಐಎ ಅಡಿ ತರಬೇಕಾದ ಅವಶ್ಯಕತೆಯಿಲ್ಲ’ ಎಂದು ಸಚಿವಾಲಯ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>