ಅಯೋಧ್ಯೆ ಭೂ ವಿವಾದಕ್ಕೆ ಸಂಬಂಧಿಸಿದ ವಿಚಾರಣೆಯನ್ನು ಈಚೆಗೆ ಸುಪ್ರೀಂ ಕೋರ್ಟ್ 2019ರ ಜನವರಿಗೆ ಮುಂದೂಡಿತ್ತು. ನಂತರರಾಮ ಮಂದಿರ ನಿರ್ಮಾಣಕ್ಕೆ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಬೇಕು ಎಂಬ ಆಗ್ರಹ ಹೆಚ್ಚಾಗಿದೆ. ಆರ್ಎಸ್ಎಸ್, ವಿಎಚ್ಪಿ ಸೇರಿ ಹಲವು ಬಲಪಂಥೀಯ ಸಂಘಟನೆಗಳು ಸುಗ್ರೀವಾಜ್ಞೆಗೆ ಆಗ್ರಹಿಸಿವೆ. ರಾಮ ಮಂದಿರದ ತ್ವರಿತ ನಿರ್ಮಾಣಕ್ಕೆ ಆಗ್ರಹಿಸಿ ಇದೇ 25ರಂದು ಅಯೋಧ್ಯೆಗೆ ಭೇಟಿ ನೀಡುವುದಾಗಿಆರ್ಎಸ್ಎಸ್, ವಿಎಚ್ಪಿ ಮತ್ತು ಶಿವಸೇನಾ ಘೋಷಿಸಿವೆ.