<p><strong>ತಿರುವನಂತಪುರ:</strong> ‘ಭಾರತ ಮಾತೆಯ ಭಾವಚಿತ್ರಕ್ಕೆ ಸಂಬಂಧಿಸಿದಂತೆ ಯಾವುದೇ ಅಧಿಕೃತ ಮಾನದಂಡ ಇಲ್ಲದ ಕಾರಣ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅದನ್ನು ಬಳಸಲು ಅನುಮತಿ ನೀಡಲಾಗದು’ ಎಂದು ಕೇರಳದ ಎಡಪಂಥೀಯ ಸರ್ಕಾರ ಶುಕ್ರವಾರ ಸ್ಪಷ್ಟಪಡಿಸಿದೆ.</p>.<p>ರಾಜಭವನದಲ್ಲಿ ಗುರುವಾರ ಆಯೋಜಿಸಿದ್ದ ವಿಶ್ವ ಪರಿಸರ ದಿನ ಕಾರ್ಯಕ್ರಮದಲ್ಲಿ ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವುದನ್ನು ಕಾರ್ಯಕ್ರಮ ಪಟ್ಟಿಗೆ ಸೇರಿಸಲು ರಾಜಭವನ ಒತ್ತಾಯಿಸಿತ್ತು. ಆದರೆ ಅದನ್ನು ನಿರಾಕರಿಸಿ, ಕಾರ್ಯಕ್ರಮವನ್ನು ರಾಜ್ಯ ಕೃಷಿ ಇಲಾಖೆ ಬೇರೆಡೆಗೆ ಸ್ಥಳಾಂತರಿಸಿತ್ತು.</p>.<p>ಇದರ ಬೆನ್ನಲ್ಲೇ ಸರ್ಕಾರ ಈ ಕುರಿತು ಸ್ಪಷ್ಟನೆ ನೀಡಿದ್ದು, ಭಾರತ ಮಾತೆಯ ಭಾವಚಿತ್ರ ಹಾಗೂ ಅದಕ್ಕೆ ಸಂಬಂಧಿಸಿದ ಮಾನದಂಡಗಳ ಬಗ್ಗೆ ಸಂವಿಧಾನವಾಗಲಿ, ಭಾರತ ಸರ್ಕಾರವಾಗಲಿ ಅಧಿಕೃತವಾಗಿ ತಿಳಿಸಿಲ್ಲ ಎಂದು ಹೇಳಿದೆ.</p>.<p><strong>ರಾಜೀ ಇಲ್ಲ– ರಾಜ್ಯಪಾಲ:</strong> </p>.<p>ವಿವಾದ ಕುರಿತು ಪ್ರತಿಕ್ರಿಯಿಸಿರುವ ರಾಜ್ಯಪಾಲ ರಾಜೇಂದ್ರ ವಿಶ್ವನಾಥ ಅರ್ಲೇಕರ್, ‘ಭಾರತ ಮಾತೆಯ ವಿಚಾರದಲ್ಲಿ ಯಾವುದೇ ರಾಜೀ ಇಲ್ಲ’ ಎಂದು ಹೇಳಿದ್ದಾರೆ. </p>.<p><strong>ಕೃಷಿ ಸಚಿವ ಕಿಡಿ:</strong></p>.<p>‘ಸಾಂವಿಧಾನಿಕ ಹುದ್ದೆಗಳಲ್ಲಿ ಇರುವವರು ಸರ್ಕಾರಿ ಕಾರ್ಯಕ್ರಮಗಳನ್ನು ರಾಜಕೀಯ ಕಾರ್ಯಕ್ರಮಗಳಾಗಿ ಪರಿವರ್ತಿಸಬಾರದು’ ಎಂದು ಕೇರಳ ಕೃಷಿ ಸಚಿವ ಪಿ. ಪ್ರಸಾದ್ ಅವರು ರಾಜ್ಯಪಾಲರ ವಿರುದ್ಧ ಕಿಡಿಕಾರಿದ್ದಾರೆ. ರಾಜ್ಯದ ಶಿಕ್ಷಣ ಸಚಿವ ವಿ. ಶಿವನ್ಕುಟ್ಟಿ ಅವರೂ ಇದೇ ರೀತಿಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. </p>.<p>‘ರಾಜಭವನದಲ್ಲಿ ಆಯೋಜನೆಗೊಂಡಿದ್ದ ಕಾರ್ಯಕ್ರಮದಲ್ಲಿ, ಆರ್ಎಸ್ಎಸ್ ಬಳಸುವ ಭಾರತ ಮಾತೆಯ ಭಾವಚಿತ್ರ ಬಳಸಲಾಗಿತ್ತು. ಅದರಲ್ಲಿ ಭಾರತದ ಧ್ವಜ ಇರಲಿಲ್ಲ. ರಾಜಕೀಯ ಸಂಘಟನೆಯ ಧ್ವಜವನ್ನು ಅದು ಹೊಂದಿತ್ತು. ಹೀಗಾಗಿ ಪುಷ್ಪನಮನ ಸಲ್ಲಿಸಲಿಲ್ಲ’ ಎಂದು ಸಚಿವ ಪ್ರಸಾದ್ ಪ್ರತಿಕ್ರಿಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ:</strong> ‘ಭಾರತ ಮಾತೆಯ ಭಾವಚಿತ್ರಕ್ಕೆ ಸಂಬಂಧಿಸಿದಂತೆ ಯಾವುದೇ ಅಧಿಕೃತ ಮಾನದಂಡ ಇಲ್ಲದ ಕಾರಣ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅದನ್ನು ಬಳಸಲು ಅನುಮತಿ ನೀಡಲಾಗದು’ ಎಂದು ಕೇರಳದ ಎಡಪಂಥೀಯ ಸರ್ಕಾರ ಶುಕ್ರವಾರ ಸ್ಪಷ್ಟಪಡಿಸಿದೆ.</p>.<p>ರಾಜಭವನದಲ್ಲಿ ಗುರುವಾರ ಆಯೋಜಿಸಿದ್ದ ವಿಶ್ವ ಪರಿಸರ ದಿನ ಕಾರ್ಯಕ್ರಮದಲ್ಲಿ ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವುದನ್ನು ಕಾರ್ಯಕ್ರಮ ಪಟ್ಟಿಗೆ ಸೇರಿಸಲು ರಾಜಭವನ ಒತ್ತಾಯಿಸಿತ್ತು. ಆದರೆ ಅದನ್ನು ನಿರಾಕರಿಸಿ, ಕಾರ್ಯಕ್ರಮವನ್ನು ರಾಜ್ಯ ಕೃಷಿ ಇಲಾಖೆ ಬೇರೆಡೆಗೆ ಸ್ಥಳಾಂತರಿಸಿತ್ತು.</p>.<p>ಇದರ ಬೆನ್ನಲ್ಲೇ ಸರ್ಕಾರ ಈ ಕುರಿತು ಸ್ಪಷ್ಟನೆ ನೀಡಿದ್ದು, ಭಾರತ ಮಾತೆಯ ಭಾವಚಿತ್ರ ಹಾಗೂ ಅದಕ್ಕೆ ಸಂಬಂಧಿಸಿದ ಮಾನದಂಡಗಳ ಬಗ್ಗೆ ಸಂವಿಧಾನವಾಗಲಿ, ಭಾರತ ಸರ್ಕಾರವಾಗಲಿ ಅಧಿಕೃತವಾಗಿ ತಿಳಿಸಿಲ್ಲ ಎಂದು ಹೇಳಿದೆ.</p>.<p><strong>ರಾಜೀ ಇಲ್ಲ– ರಾಜ್ಯಪಾಲ:</strong> </p>.<p>ವಿವಾದ ಕುರಿತು ಪ್ರತಿಕ್ರಿಯಿಸಿರುವ ರಾಜ್ಯಪಾಲ ರಾಜೇಂದ್ರ ವಿಶ್ವನಾಥ ಅರ್ಲೇಕರ್, ‘ಭಾರತ ಮಾತೆಯ ವಿಚಾರದಲ್ಲಿ ಯಾವುದೇ ರಾಜೀ ಇಲ್ಲ’ ಎಂದು ಹೇಳಿದ್ದಾರೆ. </p>.<p><strong>ಕೃಷಿ ಸಚಿವ ಕಿಡಿ:</strong></p>.<p>‘ಸಾಂವಿಧಾನಿಕ ಹುದ್ದೆಗಳಲ್ಲಿ ಇರುವವರು ಸರ್ಕಾರಿ ಕಾರ್ಯಕ್ರಮಗಳನ್ನು ರಾಜಕೀಯ ಕಾರ್ಯಕ್ರಮಗಳಾಗಿ ಪರಿವರ್ತಿಸಬಾರದು’ ಎಂದು ಕೇರಳ ಕೃಷಿ ಸಚಿವ ಪಿ. ಪ್ರಸಾದ್ ಅವರು ರಾಜ್ಯಪಾಲರ ವಿರುದ್ಧ ಕಿಡಿಕಾರಿದ್ದಾರೆ. ರಾಜ್ಯದ ಶಿಕ್ಷಣ ಸಚಿವ ವಿ. ಶಿವನ್ಕುಟ್ಟಿ ಅವರೂ ಇದೇ ರೀತಿಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. </p>.<p>‘ರಾಜಭವನದಲ್ಲಿ ಆಯೋಜನೆಗೊಂಡಿದ್ದ ಕಾರ್ಯಕ್ರಮದಲ್ಲಿ, ಆರ್ಎಸ್ಎಸ್ ಬಳಸುವ ಭಾರತ ಮಾತೆಯ ಭಾವಚಿತ್ರ ಬಳಸಲಾಗಿತ್ತು. ಅದರಲ್ಲಿ ಭಾರತದ ಧ್ವಜ ಇರಲಿಲ್ಲ. ರಾಜಕೀಯ ಸಂಘಟನೆಯ ಧ್ವಜವನ್ನು ಅದು ಹೊಂದಿತ್ತು. ಹೀಗಾಗಿ ಪುಷ್ಪನಮನ ಸಲ್ಲಿಸಲಿಲ್ಲ’ ಎಂದು ಸಚಿವ ಪ್ರಸಾದ್ ಪ್ರತಿಕ್ರಿಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>