<p><strong>ತಿರುವನಂತಪುರ</strong>: ಸಂಸದ ಶಶಿ ತರೂರ್ ಸೇರಿದಂತೆ ಪಕ್ಷದ ಯಾವ ಸದಸ್ಯರು ವೀರ ಸಾವರ್ಕರ್ ಅವರ ಹೆಸರಿನಲ್ಲಿ ನೀಡುವ ಯಾವುದೇ ಪ್ರಶಸ್ತಿಯನ್ನು ಸ್ವೀಕರಿಸಬಾರದು ಎಂದು ಕಾಂಗ್ರೆಸ್ ಮುಖಂಡ ಕೆ. ಮುರಳೀಧರನ್ ಬುಧವಾರ ಹೇಳಿದ್ದಾರೆ.</p><p>‘ಬ್ರಿಟಿಷರ ಮುಂದೆ ತಲೆಬಾಗಿದವರ ಹೆಸರಿನಲ್ಲಿ ನೀಡುವ ಪ್ರಶಸ್ತಿ ಸ್ವೀಕರಿಸುವುದು ಸರಿಯಲ್ಲ’ ಎಂದಿದ್ದಾರೆ.</p><p>‘ತರೂರ್ ಅವರು ಸಾವರ್ಕರ್ ಹೆಸರಿನ ಪ್ರಶಸ್ತಿಯನ್ನು ಸ್ವೀಕರಿಸುತ್ತಾರೆ ಎಂದು ನಾನು ನಂಬುವುದಿಲ್ಲ. ಅವರು ಪ್ರಶಸ್ತಿ ಸ್ವೀಕರಿಸಿದರೆ ಅದರಿಂದ ಕಾಂಗ್ರೆಸ್ ಮುಜುಗರ ಅನುಭವಿಸುತ್ತದೆ’ ಎಂದು ಹೇಳಿದ್ದಾರೆ.</p><p>ಎಚ್ಆರ್ಡಿಎಸ್ ಇಂಡಿಯಾ, 2025ರ ವೀರ್ ಸಾವರ್ಕರ್ ಅಂತರರಾಷ್ಟ್ರೀಯ ಇಂಪ್ಯಾಕ್ಟ್ ಪ್ರಶಸ್ತಿಗೆ ಶಶಿ ತರೂರ್ ಅವರನ್ನು ಆಯ್ಕೆ ಮಾಡಿತ್ತು. ಇಂದು(ಬುಧವಾರ) ಅವರು ಪ್ರಶಸ್ತಿ ಸ್ವೀಕರಿಸಲಿದ್ದಾರೆ ಎನ್ನಲಾಗಿತ್ತು.</p><p><strong>ಪ್ರಶಸ್ತಿ ಸ್ವೀಕರಿಸಲ್ಲ ಎಂದ ತರೂರ್</strong></p><p>ದೆಹಲಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಶಶಿ ತರೂರ್, ‘ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಹೋಗುತ್ತಿಲ್ಲ’ ಎಂದಿದ್ದಾರೆ.</p><p>‘ಮಾಧ್ಯಮಗಳ ಮೂಲಕ ನನಗೆ ಈ ವಿಷಯ ತಿಳಿದಿದೆ. ಆ ಪ್ರಶಸ್ತಿಯನ್ನು ಕೊಡುತ್ತಿರುವವರು ಯಾರು ಎಂದು ನನಗೆ ಗೊತ್ತಿಲ್ಲ. ಪ್ರಶಸ್ತಿಗೆ ಸಂಬಂಧಿಸಿದ ಯಾವುದೇ ವಿಷಯವೂ ತಿಳಿದಿಲ್ಲ. ಅಲ್ಲದೇ ಆ ವೇಳೆ ನಾನು ಇಲ್ಲಿ ಇರುವುದಿಲ್ಲ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ</strong>: ಸಂಸದ ಶಶಿ ತರೂರ್ ಸೇರಿದಂತೆ ಪಕ್ಷದ ಯಾವ ಸದಸ್ಯರು ವೀರ ಸಾವರ್ಕರ್ ಅವರ ಹೆಸರಿನಲ್ಲಿ ನೀಡುವ ಯಾವುದೇ ಪ್ರಶಸ್ತಿಯನ್ನು ಸ್ವೀಕರಿಸಬಾರದು ಎಂದು ಕಾಂಗ್ರೆಸ್ ಮುಖಂಡ ಕೆ. ಮುರಳೀಧರನ್ ಬುಧವಾರ ಹೇಳಿದ್ದಾರೆ.</p><p>‘ಬ್ರಿಟಿಷರ ಮುಂದೆ ತಲೆಬಾಗಿದವರ ಹೆಸರಿನಲ್ಲಿ ನೀಡುವ ಪ್ರಶಸ್ತಿ ಸ್ವೀಕರಿಸುವುದು ಸರಿಯಲ್ಲ’ ಎಂದಿದ್ದಾರೆ.</p><p>‘ತರೂರ್ ಅವರು ಸಾವರ್ಕರ್ ಹೆಸರಿನ ಪ್ರಶಸ್ತಿಯನ್ನು ಸ್ವೀಕರಿಸುತ್ತಾರೆ ಎಂದು ನಾನು ನಂಬುವುದಿಲ್ಲ. ಅವರು ಪ್ರಶಸ್ತಿ ಸ್ವೀಕರಿಸಿದರೆ ಅದರಿಂದ ಕಾಂಗ್ರೆಸ್ ಮುಜುಗರ ಅನುಭವಿಸುತ್ತದೆ’ ಎಂದು ಹೇಳಿದ್ದಾರೆ.</p><p>ಎಚ್ಆರ್ಡಿಎಸ್ ಇಂಡಿಯಾ, 2025ರ ವೀರ್ ಸಾವರ್ಕರ್ ಅಂತರರಾಷ್ಟ್ರೀಯ ಇಂಪ್ಯಾಕ್ಟ್ ಪ್ರಶಸ್ತಿಗೆ ಶಶಿ ತರೂರ್ ಅವರನ್ನು ಆಯ್ಕೆ ಮಾಡಿತ್ತು. ಇಂದು(ಬುಧವಾರ) ಅವರು ಪ್ರಶಸ್ತಿ ಸ್ವೀಕರಿಸಲಿದ್ದಾರೆ ಎನ್ನಲಾಗಿತ್ತು.</p><p><strong>ಪ್ರಶಸ್ತಿ ಸ್ವೀಕರಿಸಲ್ಲ ಎಂದ ತರೂರ್</strong></p><p>ದೆಹಲಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಶಶಿ ತರೂರ್, ‘ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಹೋಗುತ್ತಿಲ್ಲ’ ಎಂದಿದ್ದಾರೆ.</p><p>‘ಮಾಧ್ಯಮಗಳ ಮೂಲಕ ನನಗೆ ಈ ವಿಷಯ ತಿಳಿದಿದೆ. ಆ ಪ್ರಶಸ್ತಿಯನ್ನು ಕೊಡುತ್ತಿರುವವರು ಯಾರು ಎಂದು ನನಗೆ ಗೊತ್ತಿಲ್ಲ. ಪ್ರಶಸ್ತಿಗೆ ಸಂಬಂಧಿಸಿದ ಯಾವುದೇ ವಿಷಯವೂ ತಿಳಿದಿಲ್ಲ. ಅಲ್ಲದೇ ಆ ವೇಳೆ ನಾನು ಇಲ್ಲಿ ಇರುವುದಿಲ್ಲ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>