<p><strong>ನವದೆಹಲಿ: ‘</strong>ಭಾರತದ ಆಂತರಿಕ ವಿಚಾರಗಳಲ್ಲಿ ಹೊರಗಿನ ವಕ್ತಿ ಹಸ್ತಕ್ಷೇಪ ಮಾಡಲು ಅವಕಾಶವಿಲ್ಲ‘ ಎಂದು ಮಧ್ಯಪ್ರದೇಶ ಮೂಲದ ರೈತ ಸಂಘಟನೆಯ ಮುಖಂಡ ಶಿವಕುಮಾರ್ ಕಕ್ಕಾಜಿ ಹೇಳಿದ್ದಾರೆ.</p>.<p>ನೂತನ ಕೃಷಿ ಕಾಯ್ದೆಗಳ ರದ್ದುಗೊಳಿಸುವಂತೆ ಒತ್ತಾಯಿಸಿ ರೈತ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆಯನ್ನು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಬೆಂಬಲಿಸಿರುವ ವಿಚಾರ ಕುರಿತು ಶಿವಕುಮಾರ್ ಈ ಹೇಳಿಕೆ ನೀಡಿದ್ದಾರೆ.</p>.<p>ದೆಹಲಿ ಸಮೀಪದ ಶಿಂಘು ಗಡಿಯಲ್ಲಿ ವಿವಿಧ ರೈತ ಸಂಘಟನೆಗಳೊಂದಿಗೆ ಪ್ರತಿಭಟನೆಯಲ್ಲಿ ಪಾಲ್ಗೊಂಡಿರುವ ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದಾರೆ.</p>.<p>ಜಸ್ಟಿನ್ ಟ್ರುಡೊ ಅವರು ‘ನಾವು ಭಾರತದಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಬೆಂಬಲಿಸುತ್ತಿದ್ದೇವೆ. ಹಕ್ಕುಗಳಿಗಾಗಿ ನಡೆಯುವ ಶಾಂತಿಯುತ ಹೋರಾಟವನ್ನು ಕೆನಡಾ ಸದಾ ಬೆಂಬಲಿಸುತ್ತದೆ‘ ಎಂದು ಹೇಳಿಕೆ ನೀಡಿದ್ದರು.</p>.<p>'ಕೆನಡಾ ಪ್ರಧಾನಿಯವರ ಬೆಂಬಲವನ್ನು ಸ್ವಾಗತಿಸುತ್ತೇವೆ. ನಮ್ಮ ರೈತರ ಬಗ್ಗೆ ಅವರು ತೋರುವ ಕಾಳಜಿಯನ್ನು ಗೌರವಿಸುತ್ತೇವೆ. ಆದರೆ, ಹೊರಗಿನ ವ್ಯಕ್ತಿಗಳು ಭಾರತದ ಆಂತರಿಕ ವಿಚಾರದಲ್ಲಿ ಹಸ್ತಕ್ಷೇಪ ಮಾಡಲು ಅವಕಾಶವಿಲ್ಲ‘ ಎಂದು ಶಿವಕುಮಾರ್ ಹೇಳಿದ್ದಾರೆ.</p>.<p>ಟ್ರುಡೊ ಹೇಳಿಕೆಗೆ ಕೇಂದ್ರ ಸರ್ಕಾರ ತೀವ್ರವಾಗಿ ಪ್ರತಿಕ್ರಿಯಿಸಿತ್ತು. ದೇಶದ ಆಂತರಿಕ ವಿಚಾರವಾಗಿ ಕೆನಡಾ ಪ್ರಧಾನಿಯವರ ಹೇಳಿಕೆ, ಅನಗತ್ಯ ಹಾಗೂ ಅನಪೇಕ್ಷಿತ ಎಂದು ಇಲ್ಲಿನ ನಾಯಕರು ಪ್ರತಿಕ್ರಿಯಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: ‘</strong>ಭಾರತದ ಆಂತರಿಕ ವಿಚಾರಗಳಲ್ಲಿ ಹೊರಗಿನ ವಕ್ತಿ ಹಸ್ತಕ್ಷೇಪ ಮಾಡಲು ಅವಕಾಶವಿಲ್ಲ‘ ಎಂದು ಮಧ್ಯಪ್ರದೇಶ ಮೂಲದ ರೈತ ಸಂಘಟನೆಯ ಮುಖಂಡ ಶಿವಕುಮಾರ್ ಕಕ್ಕಾಜಿ ಹೇಳಿದ್ದಾರೆ.</p>.<p>ನೂತನ ಕೃಷಿ ಕಾಯ್ದೆಗಳ ರದ್ದುಗೊಳಿಸುವಂತೆ ಒತ್ತಾಯಿಸಿ ರೈತ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆಯನ್ನು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಬೆಂಬಲಿಸಿರುವ ವಿಚಾರ ಕುರಿತು ಶಿವಕುಮಾರ್ ಈ ಹೇಳಿಕೆ ನೀಡಿದ್ದಾರೆ.</p>.<p>ದೆಹಲಿ ಸಮೀಪದ ಶಿಂಘು ಗಡಿಯಲ್ಲಿ ವಿವಿಧ ರೈತ ಸಂಘಟನೆಗಳೊಂದಿಗೆ ಪ್ರತಿಭಟನೆಯಲ್ಲಿ ಪಾಲ್ಗೊಂಡಿರುವ ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದಾರೆ.</p>.<p>ಜಸ್ಟಿನ್ ಟ್ರುಡೊ ಅವರು ‘ನಾವು ಭಾರತದಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಬೆಂಬಲಿಸುತ್ತಿದ್ದೇವೆ. ಹಕ್ಕುಗಳಿಗಾಗಿ ನಡೆಯುವ ಶಾಂತಿಯುತ ಹೋರಾಟವನ್ನು ಕೆನಡಾ ಸದಾ ಬೆಂಬಲಿಸುತ್ತದೆ‘ ಎಂದು ಹೇಳಿಕೆ ನೀಡಿದ್ದರು.</p>.<p>'ಕೆನಡಾ ಪ್ರಧಾನಿಯವರ ಬೆಂಬಲವನ್ನು ಸ್ವಾಗತಿಸುತ್ತೇವೆ. ನಮ್ಮ ರೈತರ ಬಗ್ಗೆ ಅವರು ತೋರುವ ಕಾಳಜಿಯನ್ನು ಗೌರವಿಸುತ್ತೇವೆ. ಆದರೆ, ಹೊರಗಿನ ವ್ಯಕ್ತಿಗಳು ಭಾರತದ ಆಂತರಿಕ ವಿಚಾರದಲ್ಲಿ ಹಸ್ತಕ್ಷೇಪ ಮಾಡಲು ಅವಕಾಶವಿಲ್ಲ‘ ಎಂದು ಶಿವಕುಮಾರ್ ಹೇಳಿದ್ದಾರೆ.</p>.<p>ಟ್ರುಡೊ ಹೇಳಿಕೆಗೆ ಕೇಂದ್ರ ಸರ್ಕಾರ ತೀವ್ರವಾಗಿ ಪ್ರತಿಕ್ರಿಯಿಸಿತ್ತು. ದೇಶದ ಆಂತರಿಕ ವಿಚಾರವಾಗಿ ಕೆನಡಾ ಪ್ರಧಾನಿಯವರ ಹೇಳಿಕೆ, ಅನಗತ್ಯ ಹಾಗೂ ಅನಪೇಕ್ಷಿತ ಎಂದು ಇಲ್ಲಿನ ನಾಯಕರು ಪ್ರತಿಕ್ರಿಯಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>