‘ಸರ್ಕಾರವು ದೇಶದಾದ್ಯಂತ ಬೃಹತ್ ಹೆದ್ದಾರಿ ಯೋಜನೆಗಳನ್ನು ಅನುಷ್ಠಾನಕ್ಕೆ ತರಲು ಸಿದ್ಧತೆ ನಡೆಸಿದೆ. ಅದಕ್ಕೆಲ್ಲಾ ಭಾರಿ ಪ್ರಮಾಣದ ಬಂಡವಾಳ ಬೇಕಾಗುತ್ತದೆ. ಹೀಗಾಗಿ ಹೆದ್ದಾರಿ ಬಳಕೆ ಶುಲ್ಕವನ್ನು ರದ್ದುಪಡಿಸುವುದು ಹೆಚ್ಚು ಸೂಕ್ತವಾದ ಕ್ರಮವಲ್ಲ. ಆದರೆ, ಆ ಯೋಜನೆಗಳಿಂದ ಸಾರ್ವಜನಿಕರಿಗೂ ತುಂಬಾ ಅನುಕೂಲವಾಗಲಿದೆ’ ಎಂದುಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಕಾರ್ಯದರ್ಶಿ ಯದುವೀರ್ ಸಿಂಗ್ ಮಲಿಕ್ ಮಾಹಿತಿ ನೀಡಿದ್ದಾರೆ.