<p><strong>ನವದೆಹಲಿ:</strong> ಮಹಿಳೆಯರಿಗೆ ಕೆಲಸ ಮಾಡಲು ಮತ್ತು ಬೆಳವಣಿಗೆ ಹೊಂದಲು ಬಿಜೆಪಿಯಷ್ಟು ಬೇರೆ ಯಾವ ಪಕ್ಷವೂ ಅವಕಾಶ ನೀಡಿಲ್ಲ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದ್ದಾರೆ.</p>.<p>ಮಹಿಳೆಯರ ಸಬಲೀಕರಣಕ್ಕಾಗಿ ಮೋದಿ ಸರ್ಕಾರವು ಸಾಕಷ್ಟು ಕ್ರಮಗಳನ್ನು ಕೈಗೊಂಡಿದೆ ಎಂದು ಅವರು ಹೇಳಿದ್ದಾರೆ.</p>.<p>ಮೋದಿ ಸರ್ಕಾರದ ಸಚಿವೆಯರಿಗೆ ಅಭಿನಂದನೆ ಸಲ್ಲಿಸಲು ಬಿಜೆಪಿ ಮಹಿಳಾ ಮೋರ್ಚಾ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಕ್ಷವು ತನ್ನ ನೀತಿ, ಕಾರ್ಯಕ್ರಮ, ಆಡಳಿತದಲ್ಲಿ ಉಳಿದೆಲ್ಲ ಪಕ್ಷಗಳಿಗಿಂತ ಹೆಚ್ಚು ಅವಕಾಶವನ್ನು ಮಹಿಳೆಯರಿಗೆ ನೀಡಿದೆ ಎಂದು ಹೇಳಿದ್ದಾರೆ.</p>.<p><strong>ಓದಿ:</strong><a href="https://www.prajavani.net/karnataka-news/chief-minister-post-for-basavaraj-bommai-elders-who-made-the-decision-on-may-8-852393.html" itemprop="url">ಬಸವರಾಜ ಬೊಮ್ಮಾಯಿಗೆ ಸಿ.ಎಂ ಪಟ್ಟ: ಮೇ 8ರಂದೇ ನಿರ್ಧಾರ ಕೈಗೊಂಡಿದ್ದ ವರಿಷ್ಠರು?</a></p>.<p>ಭಾರತದ ಸಂಸ್ಕೃತಿಯು ಮಹಿಳೆಯರಿಗೆ ಮೊದಲ ಆದ್ಯತೆ ನೀಡಿದೆ ಎಂದೂ ಅವರು ಹೇಳಿದ್ದಾರೆ.</p>.<p>ಇತ್ತೀಚೆಗೆ ನಡೆದ ಕೇಂದ್ರ ಸಂಪುಟ ಪುನರ್ರಚನೆ ವೇಳೆ 7 ಮಂದಿ ಮಹಿಳೆಯರಿಗೆ ಸ್ಥಾನ ಕಲ್ಪಿಸಲಾಗಿತ್ತು. ಇದರೊಂದಿಗೆ ಕೇಂದ್ರ ಸಂಪುಟದಲ್ಲಿ ಮಹಿಳೆಯರ ಸಂಖ್ಯೆ 11ಕ್ಕೆ ಏರಿಕೆಯಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಮಹಿಳೆಯರಿಗೆ ಕೆಲಸ ಮಾಡಲು ಮತ್ತು ಬೆಳವಣಿಗೆ ಹೊಂದಲು ಬಿಜೆಪಿಯಷ್ಟು ಬೇರೆ ಯಾವ ಪಕ್ಷವೂ ಅವಕಾಶ ನೀಡಿಲ್ಲ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದ್ದಾರೆ.</p>.<p>ಮಹಿಳೆಯರ ಸಬಲೀಕರಣಕ್ಕಾಗಿ ಮೋದಿ ಸರ್ಕಾರವು ಸಾಕಷ್ಟು ಕ್ರಮಗಳನ್ನು ಕೈಗೊಂಡಿದೆ ಎಂದು ಅವರು ಹೇಳಿದ್ದಾರೆ.</p>.<p>ಮೋದಿ ಸರ್ಕಾರದ ಸಚಿವೆಯರಿಗೆ ಅಭಿನಂದನೆ ಸಲ್ಲಿಸಲು ಬಿಜೆಪಿ ಮಹಿಳಾ ಮೋರ್ಚಾ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಕ್ಷವು ತನ್ನ ನೀತಿ, ಕಾರ್ಯಕ್ರಮ, ಆಡಳಿತದಲ್ಲಿ ಉಳಿದೆಲ್ಲ ಪಕ್ಷಗಳಿಗಿಂತ ಹೆಚ್ಚು ಅವಕಾಶವನ್ನು ಮಹಿಳೆಯರಿಗೆ ನೀಡಿದೆ ಎಂದು ಹೇಳಿದ್ದಾರೆ.</p>.<p><strong>ಓದಿ:</strong><a href="https://www.prajavani.net/karnataka-news/chief-minister-post-for-basavaraj-bommai-elders-who-made-the-decision-on-may-8-852393.html" itemprop="url">ಬಸವರಾಜ ಬೊಮ್ಮಾಯಿಗೆ ಸಿ.ಎಂ ಪಟ್ಟ: ಮೇ 8ರಂದೇ ನಿರ್ಧಾರ ಕೈಗೊಂಡಿದ್ದ ವರಿಷ್ಠರು?</a></p>.<p>ಭಾರತದ ಸಂಸ್ಕೃತಿಯು ಮಹಿಳೆಯರಿಗೆ ಮೊದಲ ಆದ್ಯತೆ ನೀಡಿದೆ ಎಂದೂ ಅವರು ಹೇಳಿದ್ದಾರೆ.</p>.<p>ಇತ್ತೀಚೆಗೆ ನಡೆದ ಕೇಂದ್ರ ಸಂಪುಟ ಪುನರ್ರಚನೆ ವೇಳೆ 7 ಮಂದಿ ಮಹಿಳೆಯರಿಗೆ ಸ್ಥಾನ ಕಲ್ಪಿಸಲಾಗಿತ್ತು. ಇದರೊಂದಿಗೆ ಕೇಂದ್ರ ಸಂಪುಟದಲ್ಲಿ ಮಹಿಳೆಯರ ಸಂಖ್ಯೆ 11ಕ್ಕೆ ಏರಿಕೆಯಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>