<p><strong>ಹೋಶಿಯಾರ್ಪುರ:</strong> ರಾಜ್ಯದಲ್ಲಿ ಗ್ಯಾಂಗ್ಸ್ಟರ್, ಕ್ರಿಮಿನಲ್ಗಳು ಮತ್ತು ಇತರೆ ಸಮಾಜವಿರೋಧಿಗಳಿಗೆ ಯಾವುದೇ ಜಾಗವಿಲ್ಲ. ಅಂತವರನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲಾಗುವುದು ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಇಂದು (ಭಾನುವಾರ) ತಿಳಿಸಿದ್ದಾರೆ. </p><p>2,490 ಪೊಲೀಸರ ನಿರ್ಗಮನ ಪಥ ಸಂಚಲನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದುರದೃಷ್ಟವಶಾತ್ ಹಿಂದಿನ ಸರ್ಕಾರಗಳ ಬೆಂಬಲದೊಂದಿಗೆ ದರೋಡೆಕೋರರು, ಅಪರಾಧಿಗಳು ನಮ್ಮ ರಾಜ್ಯದಲ್ಲಿ ಬೀಡು ಬಿಟ್ಟಿದ್ದಾರೆ ಎಂದು ಹೇಳಿದ್ದಾರೆ. </p><p>ಇಂತಹ ಸಮಾಜ ಘಾತುಕ ಶಕ್ತಿಗಳ ವಿರುದ್ಧ ಕಾರ್ಯಾಚರಣೆ ಆರಂಭಿಸಿರುವ ರಾಜ್ಯ ಸರ್ಕಾರವು, ಶೀಘ್ರದಲ್ಲೇ ಅಪರಾಧಿಗಳನ್ನು ಜೈಲಿಗೆ ಅಟ್ಟಲಿದೆ ಎಂದು ಅವರು ಹೇಳಿದ್ದಾರೆ. </p><p>ರಾಜ್ಯದಲ್ಲಿ ಡ್ರಗ್ಸ್ ವಿರುದ್ಧ ಹೋರಾಟ ಮುಂದುವರಿಯಲಿದೆ. ಡ್ರಗ್ಸ್ ವಿರುದ್ಧ ಶೂನ್ಯ ಸಹಿಷ್ಣುತೆ ನೀತಿ ಪಾಲಿಸಲಾಗುತ್ತಿದ್ದು, ಸಾರ್ವಜನಿಕರ ಬೆಂಬಲದೊಂದಿಗೆ ಡ್ರಗ್ಸ್ ಮುಕ್ತ ರಾಜ್ಯವನ್ನಾಗಿ ಮಾಡಲಿದ್ದೇವೆ ಎಂದು ಭರವಸೆ ನೀಡಿದ್ದಾರೆ. </p><p>ತನಿಖೆ, ತಂತ್ರಜ್ಞಾನ ಮತ್ತು ವಿಜ್ಞಾನ ಕ್ಷೇತ್ರಗಳಲ್ಲಿ ಅಗತ್ಯತೆಗಳಿಗೆ ಅನುಗುಣವಾಗಿ ಪೊಲೀಸ್ ಪಡೆಯಲ್ಲಿ ಸುಧಾರಣೆ ತರುವುದು ಅಗತ್ಯವಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ. </p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೋಶಿಯಾರ್ಪುರ:</strong> ರಾಜ್ಯದಲ್ಲಿ ಗ್ಯಾಂಗ್ಸ್ಟರ್, ಕ್ರಿಮಿನಲ್ಗಳು ಮತ್ತು ಇತರೆ ಸಮಾಜವಿರೋಧಿಗಳಿಗೆ ಯಾವುದೇ ಜಾಗವಿಲ್ಲ. ಅಂತವರನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲಾಗುವುದು ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಇಂದು (ಭಾನುವಾರ) ತಿಳಿಸಿದ್ದಾರೆ. </p><p>2,490 ಪೊಲೀಸರ ನಿರ್ಗಮನ ಪಥ ಸಂಚಲನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದುರದೃಷ್ಟವಶಾತ್ ಹಿಂದಿನ ಸರ್ಕಾರಗಳ ಬೆಂಬಲದೊಂದಿಗೆ ದರೋಡೆಕೋರರು, ಅಪರಾಧಿಗಳು ನಮ್ಮ ರಾಜ್ಯದಲ್ಲಿ ಬೀಡು ಬಿಟ್ಟಿದ್ದಾರೆ ಎಂದು ಹೇಳಿದ್ದಾರೆ. </p><p>ಇಂತಹ ಸಮಾಜ ಘಾತುಕ ಶಕ್ತಿಗಳ ವಿರುದ್ಧ ಕಾರ್ಯಾಚರಣೆ ಆರಂಭಿಸಿರುವ ರಾಜ್ಯ ಸರ್ಕಾರವು, ಶೀಘ್ರದಲ್ಲೇ ಅಪರಾಧಿಗಳನ್ನು ಜೈಲಿಗೆ ಅಟ್ಟಲಿದೆ ಎಂದು ಅವರು ಹೇಳಿದ್ದಾರೆ. </p><p>ರಾಜ್ಯದಲ್ಲಿ ಡ್ರಗ್ಸ್ ವಿರುದ್ಧ ಹೋರಾಟ ಮುಂದುವರಿಯಲಿದೆ. ಡ್ರಗ್ಸ್ ವಿರುದ್ಧ ಶೂನ್ಯ ಸಹಿಷ್ಣುತೆ ನೀತಿ ಪಾಲಿಸಲಾಗುತ್ತಿದ್ದು, ಸಾರ್ವಜನಿಕರ ಬೆಂಬಲದೊಂದಿಗೆ ಡ್ರಗ್ಸ್ ಮುಕ್ತ ರಾಜ್ಯವನ್ನಾಗಿ ಮಾಡಲಿದ್ದೇವೆ ಎಂದು ಭರವಸೆ ನೀಡಿದ್ದಾರೆ. </p><p>ತನಿಖೆ, ತಂತ್ರಜ್ಞಾನ ಮತ್ತು ವಿಜ್ಞಾನ ಕ್ಷೇತ್ರಗಳಲ್ಲಿ ಅಗತ್ಯತೆಗಳಿಗೆ ಅನುಗುಣವಾಗಿ ಪೊಲೀಸ್ ಪಡೆಯಲ್ಲಿ ಸುಧಾರಣೆ ತರುವುದು ಅಗತ್ಯವಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ. </p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>