<p>ನವದೆಹಲಿ: ಕೇಂದ್ರ ಸರ್ಕಾರದ ಮೂರು ನೂತನ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಗಣರಾಜ್ಯೋತ್ಸವ ದಿನದಂದು ರೈತರು ರಾಷ್ಟ್ರ ರಾಜಧಾನಿಯಲ್ಲಿ ನಡೆಸಿದ ಟ್ರ್ಯಾಕ್ಟರ್ ಪೆರೇಡ್ ಭಾರಿ ಹಿಂಸಾಚಾರಕ್ಕೆ ತಿರುಗಿತ್ತು. ಈ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಕಾಂಗ್ರೆಸ್ ಪಕ್ಷವು ಪ್ರಜಾಪ್ರಭುತ್ವದಲ್ಲಿ ಇಂತಹ ಹಿಂಸಾಚಾರ ಘಟನೆಗಳಿಗೆ ಸ್ಥಾನವಿಲ್ಲ ಎಂದು ಹೇಳಿದೆ.</p>.<p>ಅದೇ ವೇಳೆಗೆ ಪ್ರಧಾನಿ ನರೇಂದ್ರ ಮೋದಿ ಅವರು ದುರಹಂಕಾರದಿಂದ ಬಿಟ್ಟು ವಿವಾದಿತ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿದೆ.</p>.<p>ಮಂಗಳವಾರದ ಘಟನೆಗೆ ಕೇಂದ್ರ ಸರ್ಕಾರವೇ ಸಂಪೂರ್ಣ ಹೊಣೆಯಾಗಿದೆ. ರೈತರ ಬೇಡಿಕೆಗಳನ್ನು ಈಡೇರಿಸಲು ಅಥವಾ ಯಾವುದೇ ಸಮಸ್ಯೆ ಬಗೆಹರಿಸಲು ಯಾವುದೇ ಪ್ರಸ್ತಾಪವನ್ನು ಮುಂದಿರಿಸಿಲ್ಲ ಎಂದು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ವಕ್ತಾರ ರಣದೀಪ್ ಸುರ್ಜೇವಾಲಾ ಹೇಳಿಕೆ ನೀಡಿದರು.</p>.<p>ಇದನ್ನೂ ಓದಿ:<a href="https://www.prajavani.net/india-news/paramilitary-deployed-in-delhi-farmers-protest-tractor-rally-farm-bills-799916.html" itemprop="url">ರೈತ ಹೋರಾಟ| ಮುತ್ತಿಗೆ ಬಳಿಕ ರಾಜಧಾನಿಗೆ ಸರ್ಪಗಾವಲು </a></p>.<p>ಸರ್ಕಾರ ಹಾಗೂ ಪ್ರಜೆಗಳ ನಡುವೆ 61 ದಿನಗಳ ಮುಖಾಮುಖಿ ಪ್ರಜಾಪ್ರಭುತ್ವಕ್ಕೆ ಒಳ್ಳೆಯದಲ್ಲ. ಸರ್ಕಾರದಿಂದಾಗಿ ಜನರು ಸಂಕಟಕ್ಕೊಳಗಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರವು ದುರಹಂಕಾರವನ್ನು ಬಿಟ್ಟು ರೈತರ ಮನವಿಗೆ ಸ್ಪಂದಿಸಬೇಕು ಎಂದು ಹೇಳಿದರು.</p>.<p>ಪ್ರಧಾನ ಮಂತ್ರಿ ನರೇಂದ್ರ ಮೋದಿ ದುರಹಂಕಾರವನ್ನು ಬಿಟ್ಟು ರಾಜಧರ್ಮದ ಮಾರ್ಗದಲ್ಲಿ ಸಾಗಬೇಕು. ಇದುವೇ 72ನೇ ಗಣರಾಜ್ಯೋತ್ಸವದಲ್ಲಿ ನೀಡಬಹುದಾದ ನಿಜವಾದ ಸಂದೇಶವಾಗಿದೆ. ಯಾವುದೇ ವಿಳಂಬ ಮಾಡದೆ ರೈತ ವಿರೋಧಿ ಕಾಯ್ದೆಗಳನ್ನು ಹಂತೆಗೆದುಕೊಳ್ಳಬೇಕು. ಇದು ದೇಶದ 62 ಕೋಟಿ ಅನ್ನದಾತರ ಕರೆ ಕೂಡಾ ಆಗಿದೆ ಎಂದವರು ತಿಳಿಸಿದರು.</p>.<p>ದೆಹಲಿಯ ಹಿಂಸಾಚಾರ ಘಟನೆಗಳಿಂದ ಕಾಂಗ್ರೆಸ್ ಪಕ್ಷ ಹಾಗೂ ಇಡೀ ದೇಶವೇ ನೋವಿಗೊಳಗಾಗಿದೆ. ಪ್ರಜಾಪ್ರಭುತ್ವದಲ್ಲಿ ಇಂತಹ ಘಟನೆಗಳಿಗೆ ಸ್ಥಾನವಿಲ್ಲ. ಚಳವಳಿಗಾರರು ತಮ್ಮ ಗುರಿಯನ್ನು ಮನಸ್ಸಿನಲ್ಲಿಟ್ಟುಕೊಳ್ಳಬೇಕು. ಅಹಿಂಸೆ ಹಾಗೂ ಶಾಂತಿ ರೈತ ಆಂದೋಲನದ ಬಹುದೊಡ್ಡ ಶಕ್ತಿಯಾಗಿ ಉಳಿದಿದೆ. ಮೂರು ಕೃಷಿ ಕಾಯ್ದೆಗಳನ್ನುರದ್ದುಗೊಳಿಸುವ ವರೆಗೂ ರೈತರು ಶಾಂತಿಯುತ ಹೋರಾಟಕ್ಕೆ ಬದ್ಧರಾಗಿರುತ್ತಾರೆ ಎಂದು ನಾವು ಪ್ರಮಾಣಿಕವಾಗಿ ಭಾವಿಸುತ್ತೇವೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ: ಕೇಂದ್ರ ಸರ್ಕಾರದ ಮೂರು ನೂತನ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಗಣರಾಜ್ಯೋತ್ಸವ ದಿನದಂದು ರೈತರು ರಾಷ್ಟ್ರ ರಾಜಧಾನಿಯಲ್ಲಿ ನಡೆಸಿದ ಟ್ರ್ಯಾಕ್ಟರ್ ಪೆರೇಡ್ ಭಾರಿ ಹಿಂಸಾಚಾರಕ್ಕೆ ತಿರುಗಿತ್ತು. ಈ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಕಾಂಗ್ರೆಸ್ ಪಕ್ಷವು ಪ್ರಜಾಪ್ರಭುತ್ವದಲ್ಲಿ ಇಂತಹ ಹಿಂಸಾಚಾರ ಘಟನೆಗಳಿಗೆ ಸ್ಥಾನವಿಲ್ಲ ಎಂದು ಹೇಳಿದೆ.</p>.<p>ಅದೇ ವೇಳೆಗೆ ಪ್ರಧಾನಿ ನರೇಂದ್ರ ಮೋದಿ ಅವರು ದುರಹಂಕಾರದಿಂದ ಬಿಟ್ಟು ವಿವಾದಿತ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿದೆ.</p>.<p>ಮಂಗಳವಾರದ ಘಟನೆಗೆ ಕೇಂದ್ರ ಸರ್ಕಾರವೇ ಸಂಪೂರ್ಣ ಹೊಣೆಯಾಗಿದೆ. ರೈತರ ಬೇಡಿಕೆಗಳನ್ನು ಈಡೇರಿಸಲು ಅಥವಾ ಯಾವುದೇ ಸಮಸ್ಯೆ ಬಗೆಹರಿಸಲು ಯಾವುದೇ ಪ್ರಸ್ತಾಪವನ್ನು ಮುಂದಿರಿಸಿಲ್ಲ ಎಂದು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ವಕ್ತಾರ ರಣದೀಪ್ ಸುರ್ಜೇವಾಲಾ ಹೇಳಿಕೆ ನೀಡಿದರು.</p>.<p>ಇದನ್ನೂ ಓದಿ:<a href="https://www.prajavani.net/india-news/paramilitary-deployed-in-delhi-farmers-protest-tractor-rally-farm-bills-799916.html" itemprop="url">ರೈತ ಹೋರಾಟ| ಮುತ್ತಿಗೆ ಬಳಿಕ ರಾಜಧಾನಿಗೆ ಸರ್ಪಗಾವಲು </a></p>.<p>ಸರ್ಕಾರ ಹಾಗೂ ಪ್ರಜೆಗಳ ನಡುವೆ 61 ದಿನಗಳ ಮುಖಾಮುಖಿ ಪ್ರಜಾಪ್ರಭುತ್ವಕ್ಕೆ ಒಳ್ಳೆಯದಲ್ಲ. ಸರ್ಕಾರದಿಂದಾಗಿ ಜನರು ಸಂಕಟಕ್ಕೊಳಗಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರವು ದುರಹಂಕಾರವನ್ನು ಬಿಟ್ಟು ರೈತರ ಮನವಿಗೆ ಸ್ಪಂದಿಸಬೇಕು ಎಂದು ಹೇಳಿದರು.</p>.<p>ಪ್ರಧಾನ ಮಂತ್ರಿ ನರೇಂದ್ರ ಮೋದಿ ದುರಹಂಕಾರವನ್ನು ಬಿಟ್ಟು ರಾಜಧರ್ಮದ ಮಾರ್ಗದಲ್ಲಿ ಸಾಗಬೇಕು. ಇದುವೇ 72ನೇ ಗಣರಾಜ್ಯೋತ್ಸವದಲ್ಲಿ ನೀಡಬಹುದಾದ ನಿಜವಾದ ಸಂದೇಶವಾಗಿದೆ. ಯಾವುದೇ ವಿಳಂಬ ಮಾಡದೆ ರೈತ ವಿರೋಧಿ ಕಾಯ್ದೆಗಳನ್ನು ಹಂತೆಗೆದುಕೊಳ್ಳಬೇಕು. ಇದು ದೇಶದ 62 ಕೋಟಿ ಅನ್ನದಾತರ ಕರೆ ಕೂಡಾ ಆಗಿದೆ ಎಂದವರು ತಿಳಿಸಿದರು.</p>.<p>ದೆಹಲಿಯ ಹಿಂಸಾಚಾರ ಘಟನೆಗಳಿಂದ ಕಾಂಗ್ರೆಸ್ ಪಕ್ಷ ಹಾಗೂ ಇಡೀ ದೇಶವೇ ನೋವಿಗೊಳಗಾಗಿದೆ. ಪ್ರಜಾಪ್ರಭುತ್ವದಲ್ಲಿ ಇಂತಹ ಘಟನೆಗಳಿಗೆ ಸ್ಥಾನವಿಲ್ಲ. ಚಳವಳಿಗಾರರು ತಮ್ಮ ಗುರಿಯನ್ನು ಮನಸ್ಸಿನಲ್ಲಿಟ್ಟುಕೊಳ್ಳಬೇಕು. ಅಹಿಂಸೆ ಹಾಗೂ ಶಾಂತಿ ರೈತ ಆಂದೋಲನದ ಬಹುದೊಡ್ಡ ಶಕ್ತಿಯಾಗಿ ಉಳಿದಿದೆ. ಮೂರು ಕೃಷಿ ಕಾಯ್ದೆಗಳನ್ನುರದ್ದುಗೊಳಿಸುವ ವರೆಗೂ ರೈತರು ಶಾಂತಿಯುತ ಹೋರಾಟಕ್ಕೆ ಬದ್ಧರಾಗಿರುತ್ತಾರೆ ಎಂದು ನಾವು ಪ್ರಮಾಣಿಕವಾಗಿ ಭಾವಿಸುತ್ತೇವೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>