<p><strong>ನವದೆಹಲಿ</strong>: ‘ನಾಗರಿಕ ಸೇವಾ ಪರೀಕ್ಷೆಯಿಂದ ಸಿವಿಲ್ ಸರ್ವಿಸಸ್ ಅಪ್ಟಿಟ್ಯೂಡ್ ಟೆಸ್ಟ್ (ಸಿಎಸ್ಎಟಿ) ಕೈಬಿಡುವ ಯೋಚನೆ ಇಲ್ಲ’ ಎಂದು ಕೇಂದ್ರ ಸರ್ಕಾರವು ಗುರುವಾರ ಸ್ಪಷ್ಟಪಡಿಸಿದೆ.</p>.<p>ಕೇಂದ್ರ ಲೋಕಸೇವಾ ಆಯೋಗವು (ಯುಪಿಎಸ್ಸಿ) ಐಎಎಸ್, ಐಎಫ್ಎಸ್ ಹಾಗೂ ಐಪಿಎಸ್ ಅಧಿಕಾರಿಗಳನ್ನು ಆಯ್ಕೆಮಾಡುವ ಸಲುವಾಗಿ ನಾಗರಿಕ ಸೇವಾ ಪರೀಕ್ಷೆ ಆಯೋಜಿಸುತ್ತದೆ. ಇದು ಮೂರು ಹಂತಗಳಲ್ಲಿ ನಡೆಯುತ್ತದೆ. ಸಿಎಸ್ಎಟಿ, ಪೂರ್ವಭಾವಿ ಪರೀಕ್ಷೆಯ ಭಾಗವಾಗಿದೆ.</p>.<p>‘ಸಿಎಸ್ಎಟಿ ಕೈಬಿಡುವ ಯೋಜನೆ ಇದೆಯೇ’ ಎಂದು ರಾಜ್ಯಸಭೆಯಲ್ಲಿ ಕೇಳಲಾದ ಪ್ರಶ್ನೆಗೆ ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆ ಮತ್ತು ಪಿಂಚಣಿ ಖಾತೆಯ ರಾಜ್ಯ ಸಚಿವ ಜಿತೇಂದರ್ ಸಿಂಗ್ ಅವರು‘ಇಲ್ಲ’ ಎಂದು ಲಿಖಿತ ಉತ್ತರ ನೀಡಿದ್ದಾರೆ.</p>.<p>ಸರ್ಕಾರವು ಯುಪಿಎಸ್ಸಿ ಪರೀಕ್ಷೆಯ ಮಾದರಿಯನ್ನು ಬದಲಿಸಲು ಮುಂದಾಗಲಿದೆಯೇ ಎಂಬ ಪ್ರಶ್ನೆಗೆ ಪ್ರತ್ಯೇಕವಾಗಿ ಉತ್ತರಿಸಿದ ಜಿತೇಂದರ್ ‘ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯು (ಎನ್ಟಿಎ)ಉನ್ನತ ಶಿಕ್ಷಣ ಸಂಸ್ಥೆಗಳ ದಾಖಲಾತಿ/ಫೆಲೋಶಿಪ್ಗೆ ಪ್ರವೇಶ ಪರೀಕ್ಷೆ ನಡೆಸುತ್ತದೆ. ಯುಪಿಎಸ್ಸಿಯಲ್ಲಿ ಈಗಿರುವ ಸಂದರ್ಶನ ಹಂತದ ಬದಲು ಮಾನಸಿಕ ಪರೀಕ್ಷೆಯನ್ನು ಸೇರ್ಪಡೆ ಮಾಡುವ ಆಲೋಚನೆ ಇಲ್ಲ ಎಂದು ಎನ್ಟಿಎ ಮಾಹಿತಿ ನೀಡಿದೆ’ ಎಂದರು.</p>.<p>‘ಕೋವಿಡ್–19 ಬಿಕ್ಕಟ್ಟಿನಿಂದಾಗಿ 2020ನೇ ಸಾಲಿನ ಯುಪಿಎಸ್ಸಿ ಪರೀಕ್ಷೆಗೆ ನಿಗದಿಯಂತೆ ಏಪ್ರಿಲ್ನಲ್ಲಿ ಅಧಿಸೂಚನೆ ಹೊರಡಿಸಲು ಆಗಲಿಲ್ಲ. ಕೋವಿಡ್ ಕಾರಣದಿಂದ ಕಂಬೈನ್ಡ್ ಗ್ರ್ಯಾಜುಯೇಟ್ ಲೆವಲ್ ಎಕ್ಸಾಮಿನೇಷನ್ –2018ರ ಟಯರ್–3 ಪರೀಕ್ಷಾ ಫಲಿತಾಂಶವೂ ವಿಳಂಬವಾಗಿದೆ. ಫಲಿತಾಂಶವನ್ನು ಆದಷ್ಟು ಬೇಗನೆ ಪ್ರಕಟಿಸಲು ಪ್ರಯತ್ನಿಸುತ್ತೇವೆ’ ಎಂದೂ ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ನಾಗರಿಕ ಸೇವಾ ಪರೀಕ್ಷೆಯಿಂದ ಸಿವಿಲ್ ಸರ್ವಿಸಸ್ ಅಪ್ಟಿಟ್ಯೂಡ್ ಟೆಸ್ಟ್ (ಸಿಎಸ್ಎಟಿ) ಕೈಬಿಡುವ ಯೋಚನೆ ಇಲ್ಲ’ ಎಂದು ಕೇಂದ್ರ ಸರ್ಕಾರವು ಗುರುವಾರ ಸ್ಪಷ್ಟಪಡಿಸಿದೆ.</p>.<p>ಕೇಂದ್ರ ಲೋಕಸೇವಾ ಆಯೋಗವು (ಯುಪಿಎಸ್ಸಿ) ಐಎಎಸ್, ಐಎಫ್ಎಸ್ ಹಾಗೂ ಐಪಿಎಸ್ ಅಧಿಕಾರಿಗಳನ್ನು ಆಯ್ಕೆಮಾಡುವ ಸಲುವಾಗಿ ನಾಗರಿಕ ಸೇವಾ ಪರೀಕ್ಷೆ ಆಯೋಜಿಸುತ್ತದೆ. ಇದು ಮೂರು ಹಂತಗಳಲ್ಲಿ ನಡೆಯುತ್ತದೆ. ಸಿಎಸ್ಎಟಿ, ಪೂರ್ವಭಾವಿ ಪರೀಕ್ಷೆಯ ಭಾಗವಾಗಿದೆ.</p>.<p>‘ಸಿಎಸ್ಎಟಿ ಕೈಬಿಡುವ ಯೋಜನೆ ಇದೆಯೇ’ ಎಂದು ರಾಜ್ಯಸಭೆಯಲ್ಲಿ ಕೇಳಲಾದ ಪ್ರಶ್ನೆಗೆ ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆ ಮತ್ತು ಪಿಂಚಣಿ ಖಾತೆಯ ರಾಜ್ಯ ಸಚಿವ ಜಿತೇಂದರ್ ಸಿಂಗ್ ಅವರು‘ಇಲ್ಲ’ ಎಂದು ಲಿಖಿತ ಉತ್ತರ ನೀಡಿದ್ದಾರೆ.</p>.<p>ಸರ್ಕಾರವು ಯುಪಿಎಸ್ಸಿ ಪರೀಕ್ಷೆಯ ಮಾದರಿಯನ್ನು ಬದಲಿಸಲು ಮುಂದಾಗಲಿದೆಯೇ ಎಂಬ ಪ್ರಶ್ನೆಗೆ ಪ್ರತ್ಯೇಕವಾಗಿ ಉತ್ತರಿಸಿದ ಜಿತೇಂದರ್ ‘ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯು (ಎನ್ಟಿಎ)ಉನ್ನತ ಶಿಕ್ಷಣ ಸಂಸ್ಥೆಗಳ ದಾಖಲಾತಿ/ಫೆಲೋಶಿಪ್ಗೆ ಪ್ರವೇಶ ಪರೀಕ್ಷೆ ನಡೆಸುತ್ತದೆ. ಯುಪಿಎಸ್ಸಿಯಲ್ಲಿ ಈಗಿರುವ ಸಂದರ್ಶನ ಹಂತದ ಬದಲು ಮಾನಸಿಕ ಪರೀಕ್ಷೆಯನ್ನು ಸೇರ್ಪಡೆ ಮಾಡುವ ಆಲೋಚನೆ ಇಲ್ಲ ಎಂದು ಎನ್ಟಿಎ ಮಾಹಿತಿ ನೀಡಿದೆ’ ಎಂದರು.</p>.<p>‘ಕೋವಿಡ್–19 ಬಿಕ್ಕಟ್ಟಿನಿಂದಾಗಿ 2020ನೇ ಸಾಲಿನ ಯುಪಿಎಸ್ಸಿ ಪರೀಕ್ಷೆಗೆ ನಿಗದಿಯಂತೆ ಏಪ್ರಿಲ್ನಲ್ಲಿ ಅಧಿಸೂಚನೆ ಹೊರಡಿಸಲು ಆಗಲಿಲ್ಲ. ಕೋವಿಡ್ ಕಾರಣದಿಂದ ಕಂಬೈನ್ಡ್ ಗ್ರ್ಯಾಜುಯೇಟ್ ಲೆವಲ್ ಎಕ್ಸಾಮಿನೇಷನ್ –2018ರ ಟಯರ್–3 ಪರೀಕ್ಷಾ ಫಲಿತಾಂಶವೂ ವಿಳಂಬವಾಗಿದೆ. ಫಲಿತಾಂಶವನ್ನು ಆದಷ್ಟು ಬೇಗನೆ ಪ್ರಕಟಿಸಲು ಪ್ರಯತ್ನಿಸುತ್ತೇವೆ’ ಎಂದೂ ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>