<p><strong>ನವದೆಹಲಿ:</strong> ‘ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆ (ಪಿಎಂಜಿಕೆಎವೈ)’ ಅಡಿಯಲ್ಲಿ ವಿತರಿಸಲಾಗುತ್ತಿರುವ ಉಚಿತ ಪಡಿತರವನ್ನು ನವೆಂಬರ್ 30ರ ಬಳಿಕ ವಿಸ್ತರಿಸುವ ಪ್ರಸ್ತಾವ ಸರ್ಕಾರದ ಮುಂದಿಲ್ಲ ಎಂದು ಕೇಂದ್ರ ಆಹಾರ ಕಾರ್ಯದರ್ಶಿ ಸುಧಾಂಶು ಪಾಂಡೆ ಶುಕ್ರವಾರ ಹೇಳಿದ್ದಾರೆ.</p>.<p>ಆರ್ಥಿಕತೆಯಲ್ಲಿ ಚೇತರಿಕೆ ಮತ್ತು ಮುಕ್ತ ಮಾರುಕಟ್ಟೆ ನೀತಿ (ಒಎಂಎಸ್ಎಸ್) ಅಡಿಯಲ್ಲಿ ಆಹಾರ ಧಾನ್ಯಗಳ ಉತ್ತಮ ವಿತರಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಉಚಿತ ಪಡಿತರ ವಿತರಣೆ ಮುಂದುವರಿಸದಿರಲು ತೀರ್ಮಾನಿಸಲಾಗಿದೆ ಎಂದು ಅವರು ಹೇಳಿದ್ದಾರೆ.</p>.<p><strong>ಓದಿ:</strong><a href="https://www.prajavani.net/business/commerce-news/centre-excise-duty-cut-on-petrol-diesel-to-cost-rs-45000-crore-to-exchequer-report-881327.html" itemprop="url">ಎಕ್ಸೈಸ್ ಸುಂಕ ಇಳಿಕೆಯಿಂದ ಬೊಕ್ಕಸಕ್ಕೆ ₹45 ಸಾವಿರ ಕೋಟಿ ನಷ್ಟ</a></p>.<p>ಕೋವಿಡ್ ಸಾಂಕ್ರಾಮಿಕದ ಕಾರಣ 2020ರ ಮಾರ್ಚ್ನಲ್ಲಿ ಉಚಿತ ಪಡಿತರ ವಿತರಣೆ ಘೋಷಿಸಲಾಗಿತ್ತು. ಆರಂಭದಲ್ಲಿ 2020ರ ಏಪ್ರಿಲ್ನಿಂದ ಜೂನ್ವರೆಗೆ ನಿಗದಿಪಡಿಸಿದ್ದ ಯೋಜನೆಯನ್ನು ಬಳಿಕ ವಿಸ್ತರಿಸಲಾಗಿತ್ತು.</p>.<p>ಪಿಎಂಜಿಕೆಎವೈ ಅಡಿಯಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ವ್ಯಾಪ್ತಿಯಲ್ಲಿ ಬರುವ 80 ಕೋಟಿ ಪಡಿತರ ಕಾರ್ಡ್ದಾರರಿಗೆ ಸರ್ಕಾರವು ಉಚಿತವಾಗಿ ಪಡಿತರ ವಿತರಿಸುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆ (ಪಿಎಂಜಿಕೆಎವೈ)’ ಅಡಿಯಲ್ಲಿ ವಿತರಿಸಲಾಗುತ್ತಿರುವ ಉಚಿತ ಪಡಿತರವನ್ನು ನವೆಂಬರ್ 30ರ ಬಳಿಕ ವಿಸ್ತರಿಸುವ ಪ್ರಸ್ತಾವ ಸರ್ಕಾರದ ಮುಂದಿಲ್ಲ ಎಂದು ಕೇಂದ್ರ ಆಹಾರ ಕಾರ್ಯದರ್ಶಿ ಸುಧಾಂಶು ಪಾಂಡೆ ಶುಕ್ರವಾರ ಹೇಳಿದ್ದಾರೆ.</p>.<p>ಆರ್ಥಿಕತೆಯಲ್ಲಿ ಚೇತರಿಕೆ ಮತ್ತು ಮುಕ್ತ ಮಾರುಕಟ್ಟೆ ನೀತಿ (ಒಎಂಎಸ್ಎಸ್) ಅಡಿಯಲ್ಲಿ ಆಹಾರ ಧಾನ್ಯಗಳ ಉತ್ತಮ ವಿತರಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಉಚಿತ ಪಡಿತರ ವಿತರಣೆ ಮುಂದುವರಿಸದಿರಲು ತೀರ್ಮಾನಿಸಲಾಗಿದೆ ಎಂದು ಅವರು ಹೇಳಿದ್ದಾರೆ.</p>.<p><strong>ಓದಿ:</strong><a href="https://www.prajavani.net/business/commerce-news/centre-excise-duty-cut-on-petrol-diesel-to-cost-rs-45000-crore-to-exchequer-report-881327.html" itemprop="url">ಎಕ್ಸೈಸ್ ಸುಂಕ ಇಳಿಕೆಯಿಂದ ಬೊಕ್ಕಸಕ್ಕೆ ₹45 ಸಾವಿರ ಕೋಟಿ ನಷ್ಟ</a></p>.<p>ಕೋವಿಡ್ ಸಾಂಕ್ರಾಮಿಕದ ಕಾರಣ 2020ರ ಮಾರ್ಚ್ನಲ್ಲಿ ಉಚಿತ ಪಡಿತರ ವಿತರಣೆ ಘೋಷಿಸಲಾಗಿತ್ತು. ಆರಂಭದಲ್ಲಿ 2020ರ ಏಪ್ರಿಲ್ನಿಂದ ಜೂನ್ವರೆಗೆ ನಿಗದಿಪಡಿಸಿದ್ದ ಯೋಜನೆಯನ್ನು ಬಳಿಕ ವಿಸ್ತರಿಸಲಾಗಿತ್ತು.</p>.<p>ಪಿಎಂಜಿಕೆಎವೈ ಅಡಿಯಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ವ್ಯಾಪ್ತಿಯಲ್ಲಿ ಬರುವ 80 ಕೋಟಿ ಪಡಿತರ ಕಾರ್ಡ್ದಾರರಿಗೆ ಸರ್ಕಾರವು ಉಚಿತವಾಗಿ ಪಡಿತರ ವಿತರಿಸುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>