‘ಎಲ್ಲಾ ದಾಖಲೆಗಳನ್ನೂ ನಾವು ಪರಿಶೀಲಿಸಿದ್ದೇವೆ. ನನ್ನ ಕಚೇರಿಯಲ್ಲಿಯೇ ಕೆಲವು ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಅವುಗಳನ್ನು ಪರಿಶೀಲಿಸಲಾಗಿದೆ. ಆದರೆ, ತಿವಾರಿ ವಿರುದ್ಧ ಆರೋಪ ಮಾಡಿ ಮಿಶ್ರಾ ಅವರು ಬರೆದಿದ್ದಾರೆ ಎನ್ನಲಾದ ಪತ್ರದ ಬಗ್ಗೆ ಯಾವುದೇ ದಾಖಲೆ ಲಭ್ಯವಾಗಿಲ್ಲ. ಆದರೂ ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ’ ಎಂದು ಎಸ್ಪಿ ದಿನೇಶ್ ಕುಮಾರ್ ಪ್ರಭು ಹೇಳಿದ್ದಾರೆ.