<p><strong>ನವದೆಹಲಿ</strong>: ‘ಮುಂಬರುವ ಹಬ್ಬಗಳನ್ನು ಸರಳವಾಗಿ ಆಚರಿಸಬೇಕು. ಹಬ್ಬಗಳನ್ನು ಆಡಂಬರ, ಅಬ್ಬರದೊಂದಿಗೆ ಆಚರಿಸುವಂತೆ ಯಾವ ಧರ್ಮವೂ ಬೋಧಿಸುವುದಿಲ್ಲ’ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಭಾನುವಾರ ಹೇಳಿದರು.</p>.<p>ಸಾಮಾಜಿಕ ಮಾಧ್ಯಮಗಳಲ್ಲಿನ ತಮ್ಮ ಹಿಂಬಾಲಕರೊಂದಿಗೆ ನಡೆಸಿದ ‘ಸಂಡೆ ಸಂವಾದ’ನಲ್ಲಿ ಮಾತನಾಡಿದ ಅವರು, ‘ಹಬ್ಬಗಳ ನೆಪದಲ್ಲಿ ಭಾರಿ ಸಂಖ್ಯೆಯಲ್ಲಿ ಒಂದೆಡೆ ಸೇರಬಾರದು. ಪ್ರತಿಯೊಬ್ಬರೂ ಕೋವಿಡ್–19 ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು’ ಎಂದು ಪ್ರತಿಪಾದಿಸಿದರು.</p>.<p>‘ಈಗ ಜಗತ್ತೇ ಅಸಾಧಾರಣ ಪರಿಸ್ಥಿತಿ ಎದುರಿಸುತ್ತಿದೆ. ಇದಕ್ಕೆ ಅಸಾಮಾನ್ಯ ರೀತಿಯ ಸ್ಪಂದನೆಯೇ ಅಗತ್ಯ. ದೇವಸ್ಥಾನ, ಪೆಂಡಾಲ್ಗಳಿಗೇ ತೆರಳಿ ಪೂಜೆ ನೆರವೇರಿಸಬೇಕು, ಪ್ರಾರ್ಥನೆ ಸಲ್ಲಿಸಲು ಮಸೀದಿಗಳಿಗೇ ತೆರಳಬೇಕು ಎಂದು ಯಾವ ಧರ್ಮ, ದೇವರು ಸಹ ಹೇಳುವುದಿಲ್ಲ‘ ಎಂದರು.</p>.<p>‘ಭಾರಿ ಸಂಖ್ಯೆಯಲ್ಲಿ ಒಂದೆಡೆ ಸೇರುವುದು, ಪೆಂಡಾಲ್ ಅಳವಡಿಸುವುದು ಬೇಡ. ಮನೆಯಲ್ಲಿಯೇ ಇದ್ದು, ನಿಮ್ಮ ಕುಟುಂಬದ ಸದಸ್ಯರು, ಆತ್ಮೀಯರೊಂದಿಗೆ ಹಬ್ಬಗಳನ್ನು ಆಚರಿಸಿ. ಕೊರೊನಾ ವೈರಸ್ ವಿರುದ್ಧ ಹೋರಾಡುವುದೇ ಪ್ರತಿಯೊಬ್ಬರ ಧರ್ಮವಾಗಬೇಕು. ಕೋವಿಡ್ನಿಂದ ಸಾವು ಸಂಭವಿಸುವುದನ್ನು ನಿಯಂತ್ರಿಸುವುದು ಆರೋಗ್ಯ ಸಚಿವನಾಗಿ ನನ್ನ ಧರ್ಮವಾಗಿದೆ’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ಮುಂಬರುವ ಹಬ್ಬಗಳನ್ನು ಸರಳವಾಗಿ ಆಚರಿಸಬೇಕು. ಹಬ್ಬಗಳನ್ನು ಆಡಂಬರ, ಅಬ್ಬರದೊಂದಿಗೆ ಆಚರಿಸುವಂತೆ ಯಾವ ಧರ್ಮವೂ ಬೋಧಿಸುವುದಿಲ್ಲ’ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಭಾನುವಾರ ಹೇಳಿದರು.</p>.<p>ಸಾಮಾಜಿಕ ಮಾಧ್ಯಮಗಳಲ್ಲಿನ ತಮ್ಮ ಹಿಂಬಾಲಕರೊಂದಿಗೆ ನಡೆಸಿದ ‘ಸಂಡೆ ಸಂವಾದ’ನಲ್ಲಿ ಮಾತನಾಡಿದ ಅವರು, ‘ಹಬ್ಬಗಳ ನೆಪದಲ್ಲಿ ಭಾರಿ ಸಂಖ್ಯೆಯಲ್ಲಿ ಒಂದೆಡೆ ಸೇರಬಾರದು. ಪ್ರತಿಯೊಬ್ಬರೂ ಕೋವಿಡ್–19 ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು’ ಎಂದು ಪ್ರತಿಪಾದಿಸಿದರು.</p>.<p>‘ಈಗ ಜಗತ್ತೇ ಅಸಾಧಾರಣ ಪರಿಸ್ಥಿತಿ ಎದುರಿಸುತ್ತಿದೆ. ಇದಕ್ಕೆ ಅಸಾಮಾನ್ಯ ರೀತಿಯ ಸ್ಪಂದನೆಯೇ ಅಗತ್ಯ. ದೇವಸ್ಥಾನ, ಪೆಂಡಾಲ್ಗಳಿಗೇ ತೆರಳಿ ಪೂಜೆ ನೆರವೇರಿಸಬೇಕು, ಪ್ರಾರ್ಥನೆ ಸಲ್ಲಿಸಲು ಮಸೀದಿಗಳಿಗೇ ತೆರಳಬೇಕು ಎಂದು ಯಾವ ಧರ್ಮ, ದೇವರು ಸಹ ಹೇಳುವುದಿಲ್ಲ‘ ಎಂದರು.</p>.<p>‘ಭಾರಿ ಸಂಖ್ಯೆಯಲ್ಲಿ ಒಂದೆಡೆ ಸೇರುವುದು, ಪೆಂಡಾಲ್ ಅಳವಡಿಸುವುದು ಬೇಡ. ಮನೆಯಲ್ಲಿಯೇ ಇದ್ದು, ನಿಮ್ಮ ಕುಟುಂಬದ ಸದಸ್ಯರು, ಆತ್ಮೀಯರೊಂದಿಗೆ ಹಬ್ಬಗಳನ್ನು ಆಚರಿಸಿ. ಕೊರೊನಾ ವೈರಸ್ ವಿರುದ್ಧ ಹೋರಾಡುವುದೇ ಪ್ರತಿಯೊಬ್ಬರ ಧರ್ಮವಾಗಬೇಕು. ಕೋವಿಡ್ನಿಂದ ಸಾವು ಸಂಭವಿಸುವುದನ್ನು ನಿಯಂತ್ರಿಸುವುದು ಆರೋಗ್ಯ ಸಚಿವನಾಗಿ ನನ್ನ ಧರ್ಮವಾಗಿದೆ’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>