<p><strong>ನವದೆಹಲಿ:</strong> ‘ಕೋವಿಡ್ ಪ್ರಕರಣಗಳು ಹೆಚ್ಚುತ್ತಿದ್ದರೂ, ಯಾವುದೇ ರಾಜ್ಯ ಸರ್ಕಾರ ರೈಲು ಸೇವೆಯನ್ನು ಸ್ಥಗಿತಗೊಳಿಸುವಂತೆ ಕೇಳಿಲ್ಲ ಎಂದು ಹೇಳಿದ ರೈಲ್ವೆ ಮಂಡಳಿ ಅಧ್ಯಕ್ಷ ಸುನೀತ್ ಶರ್ಮಾ ತಿಳಿಸಿದರು.</p>.<p>ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಐಆರ್ಸಿಟಿಸಿಯ ಇ– ಟಿಕೆಟಿಂಗ್ ವೆಬ್ಸೈಟ್ ನಲ್ಲಿ ‘ಕೋವಿಡ್ 19‘ಗೆ ಸಂಬಂಧಿಸಿದ ಎಲ್ಲ ರೀತಿಯ ಶಿಷ್ಟಾಚಾರಗಳನ್ನು ಹೈಲೈಟ್ ಮಾಡಲಾಗಿದೆ. ಇದರ ಜತೆಗೆ, ಪ್ರಯಾಣಿಕರು ಆರ್ಟಿ-ಪಿಸಿಆರ್ ಪರೀಕ್ಷೆಗೆ ಒಳಗಾಗಬೇಕು ಅಥವಾ ಕೆಲವು ಪ್ರದೇಶಗಳಿಗೆ ತೆರಳುವವರು ಕೊರೊನಾ ಸೋಂಕಿನ ನೆಗೆಟಿವ್ ಪ್ರಮಾಣಪತ್ರಗಳನ್ನು ಕೊಂಡೊಯ್ಯಬೇಕೆಂದು ಸಲಹೆ ನೀಡಲಾಗಿದೆ‘ ಎಂದು ಹೇಳಿದರು.</p>.<p>ಇಲ್ಲಿವರೆಗೂ ಯಾವುದೇ ರಾಜ್ಯ ಸರ್ಕಾರಗಳು ರೈಲ್ವೆ ಸೇವೆಯನ್ನು ಸ್ಥಗಿತಗೊಳಿಸುವಂತೆ ಕೇಳಿಲ್ಲ. ಆದಾಗ್ಯೂ ಸಮಸ್ಯೆಗಳಿದ್ದಾಗ ರಾಜ್ಯ ಸರ್ಕಾರಗಳು ನಮ್ಮೊಂದಿಗೆ ಚರ್ಚಿಸಿವೆ. ಕಂಟೈನ್ಮೆಂಟ್ ವಲಯಗಳು ಹೆಚ್ಚಿರುವ ರಾಜ್ಯಗಳಲ್ಲಿ ಪ್ರಯಾಣಿಕರನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ ಎಂದು ಹೇಳಿದರು.</p>.<p>ರೈಲ್ವೆ ಇಲಾಖೆ ಎಲ್ಲಾ ನಿಲ್ದಾಣಗಳಲ್ಲೂ ಪ್ರಯಾಣಿಕರಿಗೆ ಥರ್ಮಲ್ ಸ್ಕ್ಯಾನಿಂಗ್ ಮಾಡುತ್ತಿದೆ. ಕೋವಿಡ್ ನಿಯಮಗಳನ್ನು ಪಾಲಿಸದ ಪ್ರಯಾಣಿಕರಿಗೆ ದಂಡವನ್ನು ವಿಧಿಸುತ್ತಿದೆ ಎಂದು ಶರ್ಮಾ ಹೇಳಿದರು. ‘</p>.<p>ಶ್ರಮಿಕ್ ವಿಶೇಷ ರೈಲುಗಳ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಸದ್ಯಕ್ಕೆ ಶ್ರಮಿಕ್ ರೈಲು ಸಂಚರಿಸುತ್ತಿಲ್ಲ. ಬೇಡಿಕೆ ಇದ್ದರೆ ಮಾತ್ರ ವಿಶೇಷ ರೈಲುಗಳನ್ನು ಓಡಿಸಲಾಗುತ್ತದೆ‘ ಎಂದು ಅವರು ಸ್ಪಷ್ಟಪಡಿಸಿದರು.</p>.<p>ರೈಲ್ವೆ ಬೋಗಿಗಳನ್ನು ಕೋವಿಡ್ ಕೇರ್ ಕೇಂದ್ರಗಳಾಗಿ ಪರಿವರ್ತಿಸಿರುವುದರ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ದೇಶದಾದ್ಯಂತ ವಿವಿಧ ಪ್ರದೇಶಗಳಲ್ಲಿ ಕೋವಿಡ್ 19 ರೋಗಿಗಳಿಗಾಗಿ 4 ಸಾವಿರ ರೈಲು ಬೋಗಿಗಳನ್ನು ಐಸೋಲೇಷನ್ ಕೋಚ್ಗಳಾಗಿಸಲಾಗಿದೆ. ಈಗ ಮಹಾರಾಷ್ಟ್ರದ ನಂದುರ್ಬಾರ್ ನಿಂದ 100 ಐಸೊಲೇಷನ್ ಕೋಚ್ಗಳಿಗೆ ಬೇಡಿಕೆ ಇದೆ. ಈಗಾಗಲೇ 20 ಕೋಚ್ಗಳನ್ನು ಪೂರೈಸಿದ್ದೇವೆ‘ ಎಂದು ವಿವರಿಸಿದರು.</p>.<p>ಮುಂಬೈ, ಗುಜರಾತ್, ಕರ್ನಾಟಕ ಸೇರಿದಂತೆ ದೇಶದ ಎಲ್ಲಾ ನಿಲ್ದಾಣಗಳ ಬಗ್ಗೆ ರೈಲ್ವೆ ನಿಗಾವಹಿಸುತ್ತಿದೆ ಎಲ್ಲೆಲ್ಲಿ ಬೇಡಿಕೆ ಹೆಚ್ಚಿದೆಯೋ ಅಲ್ಲಿಗೆ ಹೆಚ್ಚಿನ ರೈಲುಗಳನ್ನು ಓಡಿಸಲು ವಲಯ ಪ್ರಧಾನ ವ್ಯವಸ್ಥಾಪಕರಿಗೆ ಅಧಿಕಾರ ನೀಡಲಾಗಿದೆ ಎಂದು ಶರ್ಮಾ ಹೇಳಿದರು.</p>.<p>‘ರೈಲು ಸೇವೆಯಲ್ಲಿ ಯಾವುದೇ ಕೊರತೆಯಿಲ್ಲ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ. ಎಲ್ಲ ಕಡೆ ಪರಿಸ್ಥಿತಿ ಸಾಮಾನ್ಯವಾಗಿದೆ. ಅದರಲ್ಲೂ ಮುಂಬೈ, ಸೂರತ್ ಮತ್ತು ಬೆಂಗಳೂರಿನಲ್ಲಿ ಯಾವುದೇ ತೊಂದರೆ ಇಲ್ಲ‘ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಕೋವಿಡ್ ಪ್ರಕರಣಗಳು ಹೆಚ್ಚುತ್ತಿದ್ದರೂ, ಯಾವುದೇ ರಾಜ್ಯ ಸರ್ಕಾರ ರೈಲು ಸೇವೆಯನ್ನು ಸ್ಥಗಿತಗೊಳಿಸುವಂತೆ ಕೇಳಿಲ್ಲ ಎಂದು ಹೇಳಿದ ರೈಲ್ವೆ ಮಂಡಳಿ ಅಧ್ಯಕ್ಷ ಸುನೀತ್ ಶರ್ಮಾ ತಿಳಿಸಿದರು.</p>.<p>ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಐಆರ್ಸಿಟಿಸಿಯ ಇ– ಟಿಕೆಟಿಂಗ್ ವೆಬ್ಸೈಟ್ ನಲ್ಲಿ ‘ಕೋವಿಡ್ 19‘ಗೆ ಸಂಬಂಧಿಸಿದ ಎಲ್ಲ ರೀತಿಯ ಶಿಷ್ಟಾಚಾರಗಳನ್ನು ಹೈಲೈಟ್ ಮಾಡಲಾಗಿದೆ. ಇದರ ಜತೆಗೆ, ಪ್ರಯಾಣಿಕರು ಆರ್ಟಿ-ಪಿಸಿಆರ್ ಪರೀಕ್ಷೆಗೆ ಒಳಗಾಗಬೇಕು ಅಥವಾ ಕೆಲವು ಪ್ರದೇಶಗಳಿಗೆ ತೆರಳುವವರು ಕೊರೊನಾ ಸೋಂಕಿನ ನೆಗೆಟಿವ್ ಪ್ರಮಾಣಪತ್ರಗಳನ್ನು ಕೊಂಡೊಯ್ಯಬೇಕೆಂದು ಸಲಹೆ ನೀಡಲಾಗಿದೆ‘ ಎಂದು ಹೇಳಿದರು.</p>.<p>ಇಲ್ಲಿವರೆಗೂ ಯಾವುದೇ ರಾಜ್ಯ ಸರ್ಕಾರಗಳು ರೈಲ್ವೆ ಸೇವೆಯನ್ನು ಸ್ಥಗಿತಗೊಳಿಸುವಂತೆ ಕೇಳಿಲ್ಲ. ಆದಾಗ್ಯೂ ಸಮಸ್ಯೆಗಳಿದ್ದಾಗ ರಾಜ್ಯ ಸರ್ಕಾರಗಳು ನಮ್ಮೊಂದಿಗೆ ಚರ್ಚಿಸಿವೆ. ಕಂಟೈನ್ಮೆಂಟ್ ವಲಯಗಳು ಹೆಚ್ಚಿರುವ ರಾಜ್ಯಗಳಲ್ಲಿ ಪ್ರಯಾಣಿಕರನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ ಎಂದು ಹೇಳಿದರು.</p>.<p>ರೈಲ್ವೆ ಇಲಾಖೆ ಎಲ್ಲಾ ನಿಲ್ದಾಣಗಳಲ್ಲೂ ಪ್ರಯಾಣಿಕರಿಗೆ ಥರ್ಮಲ್ ಸ್ಕ್ಯಾನಿಂಗ್ ಮಾಡುತ್ತಿದೆ. ಕೋವಿಡ್ ನಿಯಮಗಳನ್ನು ಪಾಲಿಸದ ಪ್ರಯಾಣಿಕರಿಗೆ ದಂಡವನ್ನು ವಿಧಿಸುತ್ತಿದೆ ಎಂದು ಶರ್ಮಾ ಹೇಳಿದರು. ‘</p>.<p>ಶ್ರಮಿಕ್ ವಿಶೇಷ ರೈಲುಗಳ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಸದ್ಯಕ್ಕೆ ಶ್ರಮಿಕ್ ರೈಲು ಸಂಚರಿಸುತ್ತಿಲ್ಲ. ಬೇಡಿಕೆ ಇದ್ದರೆ ಮಾತ್ರ ವಿಶೇಷ ರೈಲುಗಳನ್ನು ಓಡಿಸಲಾಗುತ್ತದೆ‘ ಎಂದು ಅವರು ಸ್ಪಷ್ಟಪಡಿಸಿದರು.</p>.<p>ರೈಲ್ವೆ ಬೋಗಿಗಳನ್ನು ಕೋವಿಡ್ ಕೇರ್ ಕೇಂದ್ರಗಳಾಗಿ ಪರಿವರ್ತಿಸಿರುವುದರ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ದೇಶದಾದ್ಯಂತ ವಿವಿಧ ಪ್ರದೇಶಗಳಲ್ಲಿ ಕೋವಿಡ್ 19 ರೋಗಿಗಳಿಗಾಗಿ 4 ಸಾವಿರ ರೈಲು ಬೋಗಿಗಳನ್ನು ಐಸೋಲೇಷನ್ ಕೋಚ್ಗಳಾಗಿಸಲಾಗಿದೆ. ಈಗ ಮಹಾರಾಷ್ಟ್ರದ ನಂದುರ್ಬಾರ್ ನಿಂದ 100 ಐಸೊಲೇಷನ್ ಕೋಚ್ಗಳಿಗೆ ಬೇಡಿಕೆ ಇದೆ. ಈಗಾಗಲೇ 20 ಕೋಚ್ಗಳನ್ನು ಪೂರೈಸಿದ್ದೇವೆ‘ ಎಂದು ವಿವರಿಸಿದರು.</p>.<p>ಮುಂಬೈ, ಗುಜರಾತ್, ಕರ್ನಾಟಕ ಸೇರಿದಂತೆ ದೇಶದ ಎಲ್ಲಾ ನಿಲ್ದಾಣಗಳ ಬಗ್ಗೆ ರೈಲ್ವೆ ನಿಗಾವಹಿಸುತ್ತಿದೆ ಎಲ್ಲೆಲ್ಲಿ ಬೇಡಿಕೆ ಹೆಚ್ಚಿದೆಯೋ ಅಲ್ಲಿಗೆ ಹೆಚ್ಚಿನ ರೈಲುಗಳನ್ನು ಓಡಿಸಲು ವಲಯ ಪ್ರಧಾನ ವ್ಯವಸ್ಥಾಪಕರಿಗೆ ಅಧಿಕಾರ ನೀಡಲಾಗಿದೆ ಎಂದು ಶರ್ಮಾ ಹೇಳಿದರು.</p>.<p>‘ರೈಲು ಸೇವೆಯಲ್ಲಿ ಯಾವುದೇ ಕೊರತೆಯಿಲ್ಲ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ. ಎಲ್ಲ ಕಡೆ ಪರಿಸ್ಥಿತಿ ಸಾಮಾನ್ಯವಾಗಿದೆ. ಅದರಲ್ಲೂ ಮುಂಬೈ, ಸೂರತ್ ಮತ್ತು ಬೆಂಗಳೂರಿನಲ್ಲಿ ಯಾವುದೇ ತೊಂದರೆ ಇಲ್ಲ‘ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>