<p><strong>ಮುಂಬೈ</strong>: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಅವರ ತಾಯಿಯ ಒಡೆತನದಲ್ಲಿರುವ ಭೂಮಿಯ ಹರಾಜು ಪ್ರಕ್ರಿಯೆ ಇತ್ತೀಚೆಗೆ ನಡೆದಿದ್ದು, ಖರೀದಿಸಲು ಯಾರೊಬ್ಬರೂ ಮುಂದೆ ಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯ ಖೇಡ್ ಪ್ರದೇಶದಲ್ಲಿ ನಾಲ್ಕು ಕಡೆ ಇರುವ ₹ 20 ಲಕ್ಷ ಮೌಲ್ಯದ ಆಸ್ತಿಗಳ ಮಾರಾಟಕ್ಕೆ 'ಕಳ್ಳಸಾಗಣೆ ಮತ್ತು ವಿದೇಶಿ ವಿನಿಮಯ ದುರುಪಯೋಗ ತಡೆ (ಆಸ್ತಿ ಮುಟ್ಟುಗೋಲು) ಕಾಯ್ದೆ'ಗೆ ಸಂಬಂಧಿಸಿದ ಪ್ರಾಧಿಕಾರ (ಎಸ್ಎಫ್ಇಎಂಎ) ನಡೆಸಿದ ಐದನೇ ಪ್ರಯತ್ನ ಇದಾಗಿದೆ ಎಂದು ಮಾಹಿತಿ ನೀಡಿದ್ದಾರೆ.</p><p>ನವೆಂಬರ್ 4ರಂದು ನಡೆದ ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಯಾರೊಬ್ಬರೂ ಆಸಕ್ತಿ ತೋರಿಲ್ಲ ಎಂದಿರುವ ಅವರು, ಪ್ರಾಧಿಕಾರವು ಮತ್ತೊಮ್ಮೆ ಹರಾಜು ನಡೆಸಲಿದೆ ಎಂದು ಹೇಳಿದ್ದಾರೆ.</p><p>ಕಳೆದ ಹರಾಜಿನಲ್ಲಿ, ವ್ಯಕ್ತಿಯೊಬ್ಬ ಒಂದು ಆಸ್ತಿಯನ್ನು ₹ 2 ಕೋಟಿಗೆ ಖರೀದಿಸಲು ಮುಂದಾಗಿದ್ದ. ಆದರೆ, ವ್ಯವಹಾರವನ್ನು ಪೂರ್ಣಗೊಳಿಸಿರಲಿಲ್ಲ. ಹೀಗಾಗಿ, ಆತನನ್ನು ಕಪ್ಪುಪಟ್ಟಿಗೆ ಸೇರಿಸಲಾಗಿದೆ ಎಂದೂ ತಿಳಿಸಿದ್ದಾರೆ.</p><p>ಮುಂಬೈನಲ್ಲಿ 1993ರಲ್ಲಿ ನಡೆದ ಸರಣಿ ಸ್ಫೋಟದ ಸೂತ್ರಧಾರಿಗಳಲ್ಲಿ ಒಬ್ಬನಾಗಿರುವ ದಾವೂದ್, ಸದ್ಯ ಪಾಕಿಸ್ತಾನದಲ್ಲಿ ಅಡಗಿದ್ದಾನೆ ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಅವರ ತಾಯಿಯ ಒಡೆತನದಲ್ಲಿರುವ ಭೂಮಿಯ ಹರಾಜು ಪ್ರಕ್ರಿಯೆ ಇತ್ತೀಚೆಗೆ ನಡೆದಿದ್ದು, ಖರೀದಿಸಲು ಯಾರೊಬ್ಬರೂ ಮುಂದೆ ಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯ ಖೇಡ್ ಪ್ರದೇಶದಲ್ಲಿ ನಾಲ್ಕು ಕಡೆ ಇರುವ ₹ 20 ಲಕ್ಷ ಮೌಲ್ಯದ ಆಸ್ತಿಗಳ ಮಾರಾಟಕ್ಕೆ 'ಕಳ್ಳಸಾಗಣೆ ಮತ್ತು ವಿದೇಶಿ ವಿನಿಮಯ ದುರುಪಯೋಗ ತಡೆ (ಆಸ್ತಿ ಮುಟ್ಟುಗೋಲು) ಕಾಯ್ದೆ'ಗೆ ಸಂಬಂಧಿಸಿದ ಪ್ರಾಧಿಕಾರ (ಎಸ್ಎಫ್ಇಎಂಎ) ನಡೆಸಿದ ಐದನೇ ಪ್ರಯತ್ನ ಇದಾಗಿದೆ ಎಂದು ಮಾಹಿತಿ ನೀಡಿದ್ದಾರೆ.</p><p>ನವೆಂಬರ್ 4ರಂದು ನಡೆದ ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಯಾರೊಬ್ಬರೂ ಆಸಕ್ತಿ ತೋರಿಲ್ಲ ಎಂದಿರುವ ಅವರು, ಪ್ರಾಧಿಕಾರವು ಮತ್ತೊಮ್ಮೆ ಹರಾಜು ನಡೆಸಲಿದೆ ಎಂದು ಹೇಳಿದ್ದಾರೆ.</p><p>ಕಳೆದ ಹರಾಜಿನಲ್ಲಿ, ವ್ಯಕ್ತಿಯೊಬ್ಬ ಒಂದು ಆಸ್ತಿಯನ್ನು ₹ 2 ಕೋಟಿಗೆ ಖರೀದಿಸಲು ಮುಂದಾಗಿದ್ದ. ಆದರೆ, ವ್ಯವಹಾರವನ್ನು ಪೂರ್ಣಗೊಳಿಸಿರಲಿಲ್ಲ. ಹೀಗಾಗಿ, ಆತನನ್ನು ಕಪ್ಪುಪಟ್ಟಿಗೆ ಸೇರಿಸಲಾಗಿದೆ ಎಂದೂ ತಿಳಿಸಿದ್ದಾರೆ.</p><p>ಮುಂಬೈನಲ್ಲಿ 1993ರಲ್ಲಿ ನಡೆದ ಸರಣಿ ಸ್ಫೋಟದ ಸೂತ್ರಧಾರಿಗಳಲ್ಲಿ ಒಬ್ಬನಾಗಿರುವ ದಾವೂದ್, ಸದ್ಯ ಪಾಕಿಸ್ತಾನದಲ್ಲಿ ಅಡಗಿದ್ದಾನೆ ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>