‘ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಭಯೋತ್ಪಾದನೆಯನ್ನು ಸಹಿಸುವುದಿಲ್ಲ. ಬದಲಾಗಿ ಭಯೋತ್ಪಾದನೆ ಕೊನೆಗೊಳಿಸಲು, ಅಳಿಸಿಹಾಕಲು ಬಯಸುತ್ತದೆ. ನಾವು (ಬಿಜೆಪಿ) ಜಮ್ಮು ಮತ್ತು ಕಾಶ್ಮೀರವನ್ನು ದೇಶದ ಅತ್ಯಂತ ಶಾಂತಿಯುತ ಸ್ಥಳವನ್ನಾಗಿ ಮಾಡಲು ಬಯಸುತ್ತೇವೆ’ ಎಂದು ಶಾ ಭರವಸೆ ನೀಡಿದ್ದಾರೆ.
1990ರ ದಶಕದಿಂದ ಈವರೆಗೆ ಜಮ್ಮು –ಕಾಶ್ಮೀರದಲ್ಲಿ ಭಯೋತ್ಪಾದನೆಯಿಂದಾಗಿ 42,000 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಭಯೋತ್ಪಾದನೆಯಿಂದ ಯಾರಿಗಾದರೂ ಪ್ರಯೋಜನವಾಗಿದೆಯೇ ಎಂದು ಶಾ ಪ್ರಶ್ನಿಸಿದ್ದಾರೆ.