<p><strong>ಸೇಲಂ (ತಮಿಳುನಾಡು):</strong> ‘ಇಂಡಿಯಾ’ ಮೈತ್ರಿಕೂಟದಲ್ಲಿ ಒಗ್ಗಟ್ಟಿನ ಕೊರತೆ ಇದ್ದು, ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಅದರ ಕಳಪೆ ಸಾಧನೆ ಆ ಮೈತ್ರಿಕೂಟ ಅಸ್ತಿತ್ವದಲ್ಲಿಯೇ ಎಂದು ಆಶ್ಚರ್ಯಪಡುವಂತೆ ಮಾಡಿದೆ ಎಂದು ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಹೇಳಿದ್ದಾರೆ.</p><p>ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಇಂಡಿಯಾ’ ಮೈತ್ರಿಕೂಟವಿದೆಯೇ? ಮೈತ್ರಿಕೂಟದಲ್ಲಿ ಯಾವುದೇ ಒಗ್ಗಟ್ಟು ಇಲ್ಲ. ಆ ಮೈತ್ರಿಕೂಟ ಅಸ್ತಿತ್ವದಲ್ಲಿದೆಯೇ ಎಂಬ ಬಗ್ಗೆ ಸಂದೇಹವಿದೆ. ದೆಹಲಿಯ ಜನರು ಆಡಳಿತ ಬದಲಾವಣೆ ಬಯಸಿದ್ದರಿಂದ ಬಿಜೆಪಿ ರಾಷ್ಟ್ರ ರಾಜಧಾನಿಯಲ್ಲಿ ಗೆದ್ದಿದೆ ಎಂದು ತಿಳಿಸಿದ್ದಾರೆ.</p><p>70 ಸದಸ್ಯ ಬಲದ ದೆಹಲಿ ವಿಧಾನಸಭೆ ಚುನಾವಣೆಯ ಫಲಿತಾಂಶ ಫೆಬ್ರುವರಿ 8ರಂದು (ಶನಿವಾರ) ಪ್ರಕಟಗೊಂಡಿದೆ. ಬಿಜೆಪಿ 48 ಸ್ಥಾನಗಳನ್ನು ಗೆದ್ದು 26 ವರ್ಷಗಳ ಬಳಿಕ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಮತ್ತೊಂದೆಡೆ ಆಡಳಿತಾರೂಢ ಎಎಪಿಗೆ ಅಧಿಕಾರ ನಷ್ಟವಾಗಿದ್ದು, 22 ಸ್ಥಾನಗಳಿಗೆ ಸೀಮಿತಗೊಂಡಿದೆ. </p><p>ಈರೋಡ್ ಉಪಚುನಾವಣೆಯಲ್ಲಿ ಆಡಳಿತಾರೂಢ ಡಿಎಂಕೆ ಗೆಲುವಿನ ಕುರಿತು ಮಾತನಾಡಿದ ಪಳನಿಸ್ವಾಮಿ, ‘ಗೆಲುವು ನಿಜವಾದದ್ದಲ್ಲ. ಬದಲಾಗಿ ಮೋಸದ ಮೂಲಕ ಗೆಲುವು ಸಾಧಿಸಿದೆ. 2026ರ ವಿಧಾನಸಭಾ ಚುನಾವಣೆಗೆ ಎಐಎಡಿಎಂಕೆ ಬಲವಾದ ಮೈತ್ರಿಕೂಟ ರೂಪಿಸಲಿದೆ ಎಂದು ಹೇಳಿದ್ದಾರೆ.</p>.Delhi | ಆಡಳಿತ ವಿರೋಧಿ ಅಲೆ ಸೃಷ್ಟಿಸಿದ್ದೆವು, ಆದರೂ ಜನಾದೇಶ ಸಿಗಲಿಲ್ಲ: ಖರ್ಗೆ.Delhi Result ಬಿಜೆಪಿ ಮತ ಪ್ರಮಾಣ ಜಿಗಿತ; ಎಎಪಿ ಇಳಿಕೆ, ಕಾಂಗ್ರೆಸ್ಗೂ ಅಲ್ಪ ಲಾಭ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೇಲಂ (ತಮಿಳುನಾಡು):</strong> ‘ಇಂಡಿಯಾ’ ಮೈತ್ರಿಕೂಟದಲ್ಲಿ ಒಗ್ಗಟ್ಟಿನ ಕೊರತೆ ಇದ್ದು, ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಅದರ ಕಳಪೆ ಸಾಧನೆ ಆ ಮೈತ್ರಿಕೂಟ ಅಸ್ತಿತ್ವದಲ್ಲಿಯೇ ಎಂದು ಆಶ್ಚರ್ಯಪಡುವಂತೆ ಮಾಡಿದೆ ಎಂದು ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಹೇಳಿದ್ದಾರೆ.</p><p>ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಇಂಡಿಯಾ’ ಮೈತ್ರಿಕೂಟವಿದೆಯೇ? ಮೈತ್ರಿಕೂಟದಲ್ಲಿ ಯಾವುದೇ ಒಗ್ಗಟ್ಟು ಇಲ್ಲ. ಆ ಮೈತ್ರಿಕೂಟ ಅಸ್ತಿತ್ವದಲ್ಲಿದೆಯೇ ಎಂಬ ಬಗ್ಗೆ ಸಂದೇಹವಿದೆ. ದೆಹಲಿಯ ಜನರು ಆಡಳಿತ ಬದಲಾವಣೆ ಬಯಸಿದ್ದರಿಂದ ಬಿಜೆಪಿ ರಾಷ್ಟ್ರ ರಾಜಧಾನಿಯಲ್ಲಿ ಗೆದ್ದಿದೆ ಎಂದು ತಿಳಿಸಿದ್ದಾರೆ.</p><p>70 ಸದಸ್ಯ ಬಲದ ದೆಹಲಿ ವಿಧಾನಸಭೆ ಚುನಾವಣೆಯ ಫಲಿತಾಂಶ ಫೆಬ್ರುವರಿ 8ರಂದು (ಶನಿವಾರ) ಪ್ರಕಟಗೊಂಡಿದೆ. ಬಿಜೆಪಿ 48 ಸ್ಥಾನಗಳನ್ನು ಗೆದ್ದು 26 ವರ್ಷಗಳ ಬಳಿಕ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಮತ್ತೊಂದೆಡೆ ಆಡಳಿತಾರೂಢ ಎಎಪಿಗೆ ಅಧಿಕಾರ ನಷ್ಟವಾಗಿದ್ದು, 22 ಸ್ಥಾನಗಳಿಗೆ ಸೀಮಿತಗೊಂಡಿದೆ. </p><p>ಈರೋಡ್ ಉಪಚುನಾವಣೆಯಲ್ಲಿ ಆಡಳಿತಾರೂಢ ಡಿಎಂಕೆ ಗೆಲುವಿನ ಕುರಿತು ಮಾತನಾಡಿದ ಪಳನಿಸ್ವಾಮಿ, ‘ಗೆಲುವು ನಿಜವಾದದ್ದಲ್ಲ. ಬದಲಾಗಿ ಮೋಸದ ಮೂಲಕ ಗೆಲುವು ಸಾಧಿಸಿದೆ. 2026ರ ವಿಧಾನಸಭಾ ಚುನಾವಣೆಗೆ ಎಐಎಡಿಎಂಕೆ ಬಲವಾದ ಮೈತ್ರಿಕೂಟ ರೂಪಿಸಲಿದೆ ಎಂದು ಹೇಳಿದ್ದಾರೆ.</p>.Delhi | ಆಡಳಿತ ವಿರೋಧಿ ಅಲೆ ಸೃಷ್ಟಿಸಿದ್ದೆವು, ಆದರೂ ಜನಾದೇಶ ಸಿಗಲಿಲ್ಲ: ಖರ್ಗೆ.Delhi Result ಬಿಜೆಪಿ ಮತ ಪ್ರಮಾಣ ಜಿಗಿತ; ಎಎಪಿ ಇಳಿಕೆ, ಕಾಂಗ್ರೆಸ್ಗೂ ಅಲ್ಪ ಲಾಭ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>