<p><strong>ನವದೆಹಲಿ</strong>: ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ನಾಯಕ ಅಜಿತ್ ಪವಾರ್ ಅವರು ಸರ್ಕಾರವನ್ನು ಕೂಡಿಕೊಂಡಿರುವುದಕ್ಕೆ ಸಂಬಂಧಿಸಿದಂತೆ ಪಕ್ಷದಲ್ಲಿ ಯಾರೊಬ್ಬರಿಗೂ ಅಸಮಾಧಾನ ಇಲ್ಲ ಎಂದು ಮುಖ್ಯಮಂತ್ರಿ ಏಕನಾಥ ಶಿಂದೆ ಗುರುವಾರ ಹೇಳಿದ್ದಾರೆ.</p><p>ಅಜಿತ್ ಪವಾರ್ ಹಾಗೂ ಎನ್ಸಿಪಿಯ ಇತರ 8 ಶಾಸಕರು ಸಚಿವ ಸಂಪುಟಕ್ಕೆ ಸೇರ್ಪಡೆಯಾಗಿರುವುದರಿಂದ ಏಕನಾಥ ಶಿಂದೆ ಅವರ ಮುಖ್ಯಮಂತ್ರಿ ಸ್ಥಾನಕ್ಕೆ ಕುತ್ತು ಬರಲಿದೆ ಎಂಬ ಸುದ್ದಿಗಳು ಹರಿದಾಡುತ್ತಿವೆ. ಈ ಬಗ್ಗೆ ಏಕನಾಥ ಶಿಂದೆ ಅವರು, 'ಇವು ವಿರೋಧ ಪಕ್ಷಗಳು ಹರಡುತ್ತಿರುವ ವದಂತಿ' ಎಂದು ಸ್ಪಷ್ಟ ಪಡಿಸಿದ್ದಾರೆ.</p><p>ಅಜಿತ್ ಪವಾರ್ ಅವರು ತಮ್ಮ ಬೆಂಬಲಿಗ ಶಾಸಕರೊಂದಿಗೆ ಸರ್ಕಾರಕ್ಕೆ ಸೇರ್ಪಡೆಯಾಗಿರುವ ಬಗ್ಗೆ ಶಿವಸೇನಾದ (ಏಕನಾಥ ಶಿಂದೆ ಬಣ) ಕೆಲವು ಶಾಸಕರು ಕಳವಳ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಶಿಂದೆ, ತಮ್ಮ ಪಕ್ಷದ ಶಾಸಕರು, ಸಂಸದರು ಮತ್ತು ಪರಿಷತ್ ಸದಸ್ಯರೊಂದಿಗೆ ಬುಧವಾರ ಸಭೆ ನಡೆಸಿದ್ದರು. ಇದರ ಬೆನ್ನಲ್ಲೇ ಅಜಿತ್ ಪವಾರ್ ಅವರು ಮಹಾರಾಷ್ಟ್ರ ಮುಖ್ಯಮಂತ್ರಿಯಾಗುವ ಬಯಕೆ ವ್ಯಕ್ತಪಡಿಸಿರುವುದು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.</p><p>ತಮ್ಮ ಶಾಸಕರ ಅನರ್ಹತೆಗೆ ಒತ್ತಾಯಿಸಿ ಸಲ್ಲಿಕೆಯಾಗಿರುವ ದೂರುಗಳ ಕುರಿತಂತೆ ವಿಧಾನಸಭೆ ಸ್ಪೀಕರ್ ಅವರ ಆದೇಶಕ್ಕೆ ಕಾಯುತ್ತಿರುವ ಶಿಂದೆ ಬಣದಲ್ಲಿ ಅಜಿತ್ ಹೇಳಿಕೆ ಇನ್ನಷ್ಟು ಆತಂಕ ಸೃಷ್ಟಿಸಿದೆ. </p><p>ಶಿಂದೆ ಬಣದ ನಾಯಕ ಹಾಗೂ ಮಹಾರಾಷ್ಟ್ರ ಸಚಿವ ಉದಯ್ ಸಮಂತ್ ಅವರು, ಶಿಂದೆ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂಬುದಾಗಿ ಪ್ರಕಟವಾಗಿರುವ ವರದಿಗಳು ಸುಳ್ಳು ಎಂದಿದ್ದಾರೆ.</p><p><strong>ಇವನ್ನೂ ಓದಿ<br></strong>* <a href="https://www.prajavani.net/news/india-news/you-are-82-83-already-ajit-pawar-asks-stubborn-uncle-sharad-pawar-to-retire-2371571">ನಿಮಗೆ ವಯಸ್ಸಾಯಿತು, ನಿವೃತ್ತಿ ಪಡೆಯಿರಿ: 'ಹಠಮಾರಿ' ಚಿಕ್ಕಪ್ಪನಿಗೆ ಅಜಿತ್ ಪವಾರ್ ಸಲಹೆ</a><br>* <a href="https://www.prajavani.net/news/india-news/maharashtra-political-crisis-speaker-must-decide-on-disqualification-of-16-mlas-at-the-earliest-says-uddhav-thackeray-2265693">ಶಾಸಕರ ಅನರ್ಹತೆ ಬಗ್ಗೆ ಶೀಘ್ರ ನಿರ್ಧಾರ ತೆಗೆದುಕೊಳ್ಳಿ: ಸ್ಪೀಕರ್ಗೆ ಉದ್ಧವ್ ಆಗ್ರಹ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ನಾಯಕ ಅಜಿತ್ ಪವಾರ್ ಅವರು ಸರ್ಕಾರವನ್ನು ಕೂಡಿಕೊಂಡಿರುವುದಕ್ಕೆ ಸಂಬಂಧಿಸಿದಂತೆ ಪಕ್ಷದಲ್ಲಿ ಯಾರೊಬ್ಬರಿಗೂ ಅಸಮಾಧಾನ ಇಲ್ಲ ಎಂದು ಮುಖ್ಯಮಂತ್ರಿ ಏಕನಾಥ ಶಿಂದೆ ಗುರುವಾರ ಹೇಳಿದ್ದಾರೆ.</p><p>ಅಜಿತ್ ಪವಾರ್ ಹಾಗೂ ಎನ್ಸಿಪಿಯ ಇತರ 8 ಶಾಸಕರು ಸಚಿವ ಸಂಪುಟಕ್ಕೆ ಸೇರ್ಪಡೆಯಾಗಿರುವುದರಿಂದ ಏಕನಾಥ ಶಿಂದೆ ಅವರ ಮುಖ್ಯಮಂತ್ರಿ ಸ್ಥಾನಕ್ಕೆ ಕುತ್ತು ಬರಲಿದೆ ಎಂಬ ಸುದ್ದಿಗಳು ಹರಿದಾಡುತ್ತಿವೆ. ಈ ಬಗ್ಗೆ ಏಕನಾಥ ಶಿಂದೆ ಅವರು, 'ಇವು ವಿರೋಧ ಪಕ್ಷಗಳು ಹರಡುತ್ತಿರುವ ವದಂತಿ' ಎಂದು ಸ್ಪಷ್ಟ ಪಡಿಸಿದ್ದಾರೆ.</p><p>ಅಜಿತ್ ಪವಾರ್ ಅವರು ತಮ್ಮ ಬೆಂಬಲಿಗ ಶಾಸಕರೊಂದಿಗೆ ಸರ್ಕಾರಕ್ಕೆ ಸೇರ್ಪಡೆಯಾಗಿರುವ ಬಗ್ಗೆ ಶಿವಸೇನಾದ (ಏಕನಾಥ ಶಿಂದೆ ಬಣ) ಕೆಲವು ಶಾಸಕರು ಕಳವಳ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಶಿಂದೆ, ತಮ್ಮ ಪಕ್ಷದ ಶಾಸಕರು, ಸಂಸದರು ಮತ್ತು ಪರಿಷತ್ ಸದಸ್ಯರೊಂದಿಗೆ ಬುಧವಾರ ಸಭೆ ನಡೆಸಿದ್ದರು. ಇದರ ಬೆನ್ನಲ್ಲೇ ಅಜಿತ್ ಪವಾರ್ ಅವರು ಮಹಾರಾಷ್ಟ್ರ ಮುಖ್ಯಮಂತ್ರಿಯಾಗುವ ಬಯಕೆ ವ್ಯಕ್ತಪಡಿಸಿರುವುದು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.</p><p>ತಮ್ಮ ಶಾಸಕರ ಅನರ್ಹತೆಗೆ ಒತ್ತಾಯಿಸಿ ಸಲ್ಲಿಕೆಯಾಗಿರುವ ದೂರುಗಳ ಕುರಿತಂತೆ ವಿಧಾನಸಭೆ ಸ್ಪೀಕರ್ ಅವರ ಆದೇಶಕ್ಕೆ ಕಾಯುತ್ತಿರುವ ಶಿಂದೆ ಬಣದಲ್ಲಿ ಅಜಿತ್ ಹೇಳಿಕೆ ಇನ್ನಷ್ಟು ಆತಂಕ ಸೃಷ್ಟಿಸಿದೆ. </p><p>ಶಿಂದೆ ಬಣದ ನಾಯಕ ಹಾಗೂ ಮಹಾರಾಷ್ಟ್ರ ಸಚಿವ ಉದಯ್ ಸಮಂತ್ ಅವರು, ಶಿಂದೆ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂಬುದಾಗಿ ಪ್ರಕಟವಾಗಿರುವ ವರದಿಗಳು ಸುಳ್ಳು ಎಂದಿದ್ದಾರೆ.</p><p><strong>ಇವನ್ನೂ ಓದಿ<br></strong>* <a href="https://www.prajavani.net/news/india-news/you-are-82-83-already-ajit-pawar-asks-stubborn-uncle-sharad-pawar-to-retire-2371571">ನಿಮಗೆ ವಯಸ್ಸಾಯಿತು, ನಿವೃತ್ತಿ ಪಡೆಯಿರಿ: 'ಹಠಮಾರಿ' ಚಿಕ್ಕಪ್ಪನಿಗೆ ಅಜಿತ್ ಪವಾರ್ ಸಲಹೆ</a><br>* <a href="https://www.prajavani.net/news/india-news/maharashtra-political-crisis-speaker-must-decide-on-disqualification-of-16-mlas-at-the-earliest-says-uddhav-thackeray-2265693">ಶಾಸಕರ ಅನರ್ಹತೆ ಬಗ್ಗೆ ಶೀಘ್ರ ನಿರ್ಧಾರ ತೆಗೆದುಕೊಳ್ಳಿ: ಸ್ಪೀಕರ್ಗೆ ಉದ್ಧವ್ ಆಗ್ರಹ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>