<p><strong>ನೋಯ್ಡಾ:</strong> ಅಕ್ಟೋಬರ್ 30 ರಂದು ನೋಯ್ಡಾ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆಗೊಳ್ಳಲಿದ್ದು, ಅದಾಗಿ 45 ದಿನಗಳ ಬಳಿಕ ವಿಮಾನಗಳ ಕಾರ್ಯಾಚರಣೆ ಆರಂಭವಾಗಲಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕಿಂಜರಪು ರಾಮ್ ಮೋಹನ್ ನಾಯ್ಡು ಹೇಳಿದ್ದಾರೆ.</p>.ರಾಯಚೂರು | ವಿಮಾನ ನಿಲ್ದಾಣ ಕಾಮಗಾರಿ ತ್ವರಿತಗೊಳಿಸಿ: ಜಿಲ್ಲಾಧಿಕಾರಿ ನಿತೀಶ್.<p>ಹೊಸದಾಗಿ ನಿರ್ಮಿಸಲಾದ ಈ ವಿಮಾನ ನಿಲ್ದಾಣವು ಉತ್ತರ ಪ್ರದೇಶದ ಗೌತಮ ಬುದ್ಧ ನಗರದ ಜೆವಾರ್ ಪ್ರದೇಶದಲ್ಲಿದೆ. ದೆಹಲಿಗಿಂತ 75 ಕಿ.ಮೀ ದೂರದಲ್ಲಿದೆ. ದೆಹಲಿಯ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಬಳಿಕ ರಾಷ್ಟ್ರ ರಾಜಧಾನಿ ವಲಯದಲ್ಲಿ ನಿರ್ಮಾಣವಾದ ಎರಡನೇ ವಿಮಾನ ನಿಲ್ದಾಣ ಇದಾಗಿದೆ.</p><p>‘ನಾವು ಈಗ ಉದ್ಘಾಟನೆ ಮಾಡಲು ನಿರ್ಧರಿಸಿದ್ದೇವೆ. ಶೀಘ್ರವೇ ಆದು ನಡೆಯಲಿದೆ. ಸದ್ಯ ಅಕ್ಟೋಬರ್ 30ಕ್ಕೆ ಉದ್ಘಾಟನೆ ಮಾಡುವುದಾಗಿ ನಿಶ್ಚಯವಾಗಿದೆ. ಅದಾಗಿ 45 ದಿನಗಳ ಬಳಿಕ ಕಾರ್ಯಾಚರಣೆಯೂ ಆರಂಭವಾಗಲಿದೆ’ ಎಂದು ಪಕ್ಕದ ಗಾಜಿಯಾಬಾದ್ ಜಿಲ್ಲೆಯ ಹಿಂಡನ್ ವಿಮಾನ ನಿಲ್ದಾಣದಲ್ಲಿ ಅವರು ಮಾಹಿತಿ ನೀಡಿದರು.</p>.ಎರಡನೇ ವಿಮಾನ ನಿಲ್ದಾಣ ಸ್ಥಳ ಆಖೈರು: ಕೇಂದ್ರಕ್ಕೆ ಒತ್ತಡ.<p>‘ಜೆವಾರ್ ವಿಮಾನ ನಿಲ್ದಾಣದಿಂದ ಕಾರ್ಯಾಚರಣೆ ನಡೆಸಲು ವಿಮಾನಯಾನ ಕಂಪನಿಗಳು ಉತ್ಸಾಹ ತೋರಿವೆ. ಈ ಪ್ರದೇಶದಲ್ಲಿ ಅದ್ಭುತ ಸಾಮರ್ಥ್ಯ ಇದೆ ಎಂದು ಅವರಿಗೆ ತಿಳಿದಿದೆ. ವಿಮಾನಯಾನ ಕಂಪನಿಗಳಲ್ಲಿ ನಡೆಯುತ್ತಿರುವ ಮಾತುಕತೆಗಳು ಗಮನಿಸಿದರೆ ಮೊದಲ ಹಂತದಲ್ಲಿ ಜೆವಾರ್ ವಿಮಾನ ನಿಲ್ದಾಣದಿಂದ ಕನಿಷ್ಠ 10 ನಗರಗಳಿಗೆ ಸಂಪರ್ಕ ಸಾಧ್ಯವಾಗಬಹುದು’ ಎಂದು ಹೇಳಿದ್ದಾರೆ.</p><p> ಪ್ರತಾಣಿಕರಿಗಿಂತ ಕಾರ್ಗೊ ಕಾರ್ಯಾಚರಣೆಗೆ ಹೆಚ್ಚಿನ ಒತ್ತು ನೀಡುವುದರಿಂದ ಈ ಏರ್ಪೋರ್ಟ್ ಹೆಚ್ಚಿನ ಮಹತ್ವ ಹೊಂದಿದೆ ಎಂದು ಅವರು ಹೇಳಿದ್ದಾರೆ. ಈ ನಿಲ್ದಾಣವನ್ನು ಉತ್ತರ ಪ್ರದೇಶ ಸರ್ಕಾರ ಖಾಸಗಿ–ಸಾರ್ವಜನಿಕ ಸಹಭಾಗಿತ್ವದಡಿ ನಿರ್ಮಾಣ ಮಾಡಿದೆ.</p>.ಕೊಪ್ಪಳದಲ್ಲಿ ವಿಮಾನ ನಿಲ್ದಾಣ: ಗಗನಕುಸುಮವಾದ ಗಗನಯಾನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನೋಯ್ಡಾ:</strong> ಅಕ್ಟೋಬರ್ 30 ರಂದು ನೋಯ್ಡಾ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆಗೊಳ್ಳಲಿದ್ದು, ಅದಾಗಿ 45 ದಿನಗಳ ಬಳಿಕ ವಿಮಾನಗಳ ಕಾರ್ಯಾಚರಣೆ ಆರಂಭವಾಗಲಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕಿಂಜರಪು ರಾಮ್ ಮೋಹನ್ ನಾಯ್ಡು ಹೇಳಿದ್ದಾರೆ.</p>.ರಾಯಚೂರು | ವಿಮಾನ ನಿಲ್ದಾಣ ಕಾಮಗಾರಿ ತ್ವರಿತಗೊಳಿಸಿ: ಜಿಲ್ಲಾಧಿಕಾರಿ ನಿತೀಶ್.<p>ಹೊಸದಾಗಿ ನಿರ್ಮಿಸಲಾದ ಈ ವಿಮಾನ ನಿಲ್ದಾಣವು ಉತ್ತರ ಪ್ರದೇಶದ ಗೌತಮ ಬುದ್ಧ ನಗರದ ಜೆವಾರ್ ಪ್ರದೇಶದಲ್ಲಿದೆ. ದೆಹಲಿಗಿಂತ 75 ಕಿ.ಮೀ ದೂರದಲ್ಲಿದೆ. ದೆಹಲಿಯ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಬಳಿಕ ರಾಷ್ಟ್ರ ರಾಜಧಾನಿ ವಲಯದಲ್ಲಿ ನಿರ್ಮಾಣವಾದ ಎರಡನೇ ವಿಮಾನ ನಿಲ್ದಾಣ ಇದಾಗಿದೆ.</p><p>‘ನಾವು ಈಗ ಉದ್ಘಾಟನೆ ಮಾಡಲು ನಿರ್ಧರಿಸಿದ್ದೇವೆ. ಶೀಘ್ರವೇ ಆದು ನಡೆಯಲಿದೆ. ಸದ್ಯ ಅಕ್ಟೋಬರ್ 30ಕ್ಕೆ ಉದ್ಘಾಟನೆ ಮಾಡುವುದಾಗಿ ನಿಶ್ಚಯವಾಗಿದೆ. ಅದಾಗಿ 45 ದಿನಗಳ ಬಳಿಕ ಕಾರ್ಯಾಚರಣೆಯೂ ಆರಂಭವಾಗಲಿದೆ’ ಎಂದು ಪಕ್ಕದ ಗಾಜಿಯಾಬಾದ್ ಜಿಲ್ಲೆಯ ಹಿಂಡನ್ ವಿಮಾನ ನಿಲ್ದಾಣದಲ್ಲಿ ಅವರು ಮಾಹಿತಿ ನೀಡಿದರು.</p>.ಎರಡನೇ ವಿಮಾನ ನಿಲ್ದಾಣ ಸ್ಥಳ ಆಖೈರು: ಕೇಂದ್ರಕ್ಕೆ ಒತ್ತಡ.<p>‘ಜೆವಾರ್ ವಿಮಾನ ನಿಲ್ದಾಣದಿಂದ ಕಾರ್ಯಾಚರಣೆ ನಡೆಸಲು ವಿಮಾನಯಾನ ಕಂಪನಿಗಳು ಉತ್ಸಾಹ ತೋರಿವೆ. ಈ ಪ್ರದೇಶದಲ್ಲಿ ಅದ್ಭುತ ಸಾಮರ್ಥ್ಯ ಇದೆ ಎಂದು ಅವರಿಗೆ ತಿಳಿದಿದೆ. ವಿಮಾನಯಾನ ಕಂಪನಿಗಳಲ್ಲಿ ನಡೆಯುತ್ತಿರುವ ಮಾತುಕತೆಗಳು ಗಮನಿಸಿದರೆ ಮೊದಲ ಹಂತದಲ್ಲಿ ಜೆವಾರ್ ವಿಮಾನ ನಿಲ್ದಾಣದಿಂದ ಕನಿಷ್ಠ 10 ನಗರಗಳಿಗೆ ಸಂಪರ್ಕ ಸಾಧ್ಯವಾಗಬಹುದು’ ಎಂದು ಹೇಳಿದ್ದಾರೆ.</p><p> ಪ್ರತಾಣಿಕರಿಗಿಂತ ಕಾರ್ಗೊ ಕಾರ್ಯಾಚರಣೆಗೆ ಹೆಚ್ಚಿನ ಒತ್ತು ನೀಡುವುದರಿಂದ ಈ ಏರ್ಪೋರ್ಟ್ ಹೆಚ್ಚಿನ ಮಹತ್ವ ಹೊಂದಿದೆ ಎಂದು ಅವರು ಹೇಳಿದ್ದಾರೆ. ಈ ನಿಲ್ದಾಣವನ್ನು ಉತ್ತರ ಪ್ರದೇಶ ಸರ್ಕಾರ ಖಾಸಗಿ–ಸಾರ್ವಜನಿಕ ಸಹಭಾಗಿತ್ವದಡಿ ನಿರ್ಮಾಣ ಮಾಡಿದೆ.</p>.ಕೊಪ್ಪಳದಲ್ಲಿ ವಿಮಾನ ನಿಲ್ದಾಣ: ಗಗನಕುಸುಮವಾದ ಗಗನಯಾನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>