<p><strong>ನೊಯಿಡಾ</strong>: ತನ್ನ ಮೇಲೆ ಪ್ರಕರಣ ದಾಖಲಿಸಿದ್ದ ಸ್ನೇಹಿತನ ವಿರುದ್ಧ ಸೇಡು ತೀರಿಸಿಕೊಳ್ಳಲು, ಆತನ ಹೆಸರನ್ನು ಬಳಸಿಕೊಂಡು ‘ಲಷ್ಕರ್ ಎ ಜಿಹಾದಿ’ ಸಂಘಟನೆಯ ಹೆಸರನ್ನು ನಮೂದಿಸಿ ಮುಂಬೈನ ಸಂಚಾರ ವಿಭಾಗದ ಪೊಲೀಸರಿಗೆ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದ ಅಶ್ವಿನಿ ಕುಮಾರ್ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ. </p>.<p>ಕುಮಾರ್ ಅವರು ತಮ್ಮನ್ನು ತಾವು ಜ್ಯೋತಿಷಿ ಮತ್ತು ವಾಸ್ತುಶಾಸ್ತ್ರಜ್ಞ ಎಂದು ಕರೆದುಕೊಳ್ಳುತ್ತಾರೆ. ಇವರು ಪಟ್ನಾದವರಾಗಿದ್ದು, 5 ವರ್ಷಗಳಿಂದ ನೊಯಿಡಾದಲ್ಲಿ ವಾಸಿಸುತ್ತಿದ್ದಾರೆ. ಇವರ ಸ್ನೇಹಿತ ಇವರ ವಿರುದ್ಧ 2023ರಲ್ಲಿ ಪ್ರಕರಣ ದಾಖಲಿಸಿದ್ದರು. ಈ ಸಂಬಂಧ ಕುಮಾರ್ ಅವರು 3 ತಿಂಗಳು ಜೈಲುವಾಸ ಅನುಭವಿಸಿದ್ದರು.</p>.<p>‘14 ಭಯೋತ್ಪಾದಕರು 34 ವಾಹನಗಳಲ್ಲಿ 400 ಕೆ.ಜಿ ಆರ್ಡಿಎಕ್ಸ್ ಇಟ್ಟುಕೊಂಡು ಮುಂಬೈ ಪ್ರವೇಶಿಸಿದ್ದಾರೆ’ ಎಂದು ಪೊಲೀಸರ ವಾಟ್ಸ್ಆ್ಯಪ್ ಸಂಖ್ಯೆಗೆ ಕುಮಾರ್ ಅವರು ಗುರುವಾರ ಸಂದೇಶ ಕಳುಹಿಸಿದ್ದಾರೆ. ಅನಂತ ಚತುದರ್ಶಿ ಸಂಭ್ರಮಾಚರಣೆಯ ಸನಿಹದಲ್ಲೇ ಈ ಸಂದೇಶ ಕಳುಹಿಸಲಾಗಿದೆ.</p>.<p>ಸಂದೇಶ ಬರುತ್ತಿದ್ದಂತೆಯೇ ಮುಂಬೈ ಪೊಲೀಸರು ಕಾರ್ಯಪ್ರವೃತ್ತರಾಗಿದ್ದಾರೆ. ಸಂದೇಶವು ನೊಯಿಡಾದಿಂದ ಬಂದಿದ್ದಾಗಿ ಪೊಲೀಸರಿಗೆ ತಿಳಿದುಬಂದಿದೆ. ಇದನ್ನು ಆಧರಿಸಿ ನೊಯಿಡಾ ಪೊಲೀಸರು ಕುಮಾರ್ ಅವರನ್ನು ಬಂಧಿಸಿದ್ದಾರೆ. ಬಳಿಕ ಇವರನ್ನು ಮುಂಬೈ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.</p>.<p>ಈ ಬಗ್ಗೆ ನೊಯಿಡಾದ ಹೆಚ್ಚುವರಿ ಡಿಸಿಪಿ ಸುಮಿತ್ ಶುಕ್ಲಾ ಮಾಹಿತಿ ನೀಡಿದರು. ವೈಯಕ್ತಿಕ ದ್ವೇಷದಿಂದಲೇ ಈ ಕೃತ್ಯ ಎಸಗಿದ್ದಾಗಿ ತನಿಖೆ ವೇಳೆ ಕುಮಾರ್ ಅವರು ತಪ್ಪೊಪ್ಪಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನೊಯಿಡಾ</strong>: ತನ್ನ ಮೇಲೆ ಪ್ರಕರಣ ದಾಖಲಿಸಿದ್ದ ಸ್ನೇಹಿತನ ವಿರುದ್ಧ ಸೇಡು ತೀರಿಸಿಕೊಳ್ಳಲು, ಆತನ ಹೆಸರನ್ನು ಬಳಸಿಕೊಂಡು ‘ಲಷ್ಕರ್ ಎ ಜಿಹಾದಿ’ ಸಂಘಟನೆಯ ಹೆಸರನ್ನು ನಮೂದಿಸಿ ಮುಂಬೈನ ಸಂಚಾರ ವಿಭಾಗದ ಪೊಲೀಸರಿಗೆ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದ ಅಶ್ವಿನಿ ಕುಮಾರ್ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ. </p>.<p>ಕುಮಾರ್ ಅವರು ತಮ್ಮನ್ನು ತಾವು ಜ್ಯೋತಿಷಿ ಮತ್ತು ವಾಸ್ತುಶಾಸ್ತ್ರಜ್ಞ ಎಂದು ಕರೆದುಕೊಳ್ಳುತ್ತಾರೆ. ಇವರು ಪಟ್ನಾದವರಾಗಿದ್ದು, 5 ವರ್ಷಗಳಿಂದ ನೊಯಿಡಾದಲ್ಲಿ ವಾಸಿಸುತ್ತಿದ್ದಾರೆ. ಇವರ ಸ್ನೇಹಿತ ಇವರ ವಿರುದ್ಧ 2023ರಲ್ಲಿ ಪ್ರಕರಣ ದಾಖಲಿಸಿದ್ದರು. ಈ ಸಂಬಂಧ ಕುಮಾರ್ ಅವರು 3 ತಿಂಗಳು ಜೈಲುವಾಸ ಅನುಭವಿಸಿದ್ದರು.</p>.<p>‘14 ಭಯೋತ್ಪಾದಕರು 34 ವಾಹನಗಳಲ್ಲಿ 400 ಕೆ.ಜಿ ಆರ್ಡಿಎಕ್ಸ್ ಇಟ್ಟುಕೊಂಡು ಮುಂಬೈ ಪ್ರವೇಶಿಸಿದ್ದಾರೆ’ ಎಂದು ಪೊಲೀಸರ ವಾಟ್ಸ್ಆ್ಯಪ್ ಸಂಖ್ಯೆಗೆ ಕುಮಾರ್ ಅವರು ಗುರುವಾರ ಸಂದೇಶ ಕಳುಹಿಸಿದ್ದಾರೆ. ಅನಂತ ಚತುದರ್ಶಿ ಸಂಭ್ರಮಾಚರಣೆಯ ಸನಿಹದಲ್ಲೇ ಈ ಸಂದೇಶ ಕಳುಹಿಸಲಾಗಿದೆ.</p>.<p>ಸಂದೇಶ ಬರುತ್ತಿದ್ದಂತೆಯೇ ಮುಂಬೈ ಪೊಲೀಸರು ಕಾರ್ಯಪ್ರವೃತ್ತರಾಗಿದ್ದಾರೆ. ಸಂದೇಶವು ನೊಯಿಡಾದಿಂದ ಬಂದಿದ್ದಾಗಿ ಪೊಲೀಸರಿಗೆ ತಿಳಿದುಬಂದಿದೆ. ಇದನ್ನು ಆಧರಿಸಿ ನೊಯಿಡಾ ಪೊಲೀಸರು ಕುಮಾರ್ ಅವರನ್ನು ಬಂಧಿಸಿದ್ದಾರೆ. ಬಳಿಕ ಇವರನ್ನು ಮುಂಬೈ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.</p>.<p>ಈ ಬಗ್ಗೆ ನೊಯಿಡಾದ ಹೆಚ್ಚುವರಿ ಡಿಸಿಪಿ ಸುಮಿತ್ ಶುಕ್ಲಾ ಮಾಹಿತಿ ನೀಡಿದರು. ವೈಯಕ್ತಿಕ ದ್ವೇಷದಿಂದಲೇ ಈ ಕೃತ್ಯ ಎಸಗಿದ್ದಾಗಿ ತನಿಖೆ ವೇಳೆ ಕುಮಾರ್ ಅವರು ತಪ್ಪೊಪ್ಪಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>