<p><strong>ನೊಯ್ಡಾ:</strong> ಕಾರ್ಮಿಕ ಪ್ರತಿಭಟನೆಯ ವೇಳೆ ಪಾಕಿಸ್ತಾನದಿಂದ ಕಾರ್ಯನಿರ್ವಹಿಸುತ್ತಿದೆ ಎನ್ನಲಾದ ಸಾಮಾಜಿಕ ಜಾಲತಾಣಗಳ ಖಾತೆಗಳನ್ನು ಬಳಸಿಕೊಂಡು ದಾರಿತಪ್ಪಿಸುವ, ಅಶಾಂತಿಗೆ ಕಾರಣವಾಗುವ ಸುಳ್ಳು ಸುದ್ದಿಗಳನ್ನು ಹರಡಲಾಗುತ್ತಿತ್ತು ಎಂದು ಪೊಲೀಸ್ ಆಯುಕ್ತೆ ಲಕ್ಷ್ಮಿ ಸಿಂಗ್ ಹೇಳಿದ್ದಾರೆ. </p><p>ಗಲಭೆಗೆ ಕಾರಣರಾದ 13 ಜನರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ. </p><p>@Proudindiannavi ಮತ್ತು @Mir_Ilyas_INC ಎನ್ನುವ ಖಾತೆಗಳ ಮೂಲಕ ಸುಳ್ಳುಸುದ್ದಿಗಳನ್ನು ಹರಡಲಾಗುತ್ತಿತ್ತು. ತನಿಖೆಯ ವೇಳೆ ಈ ಎರಡೂ ಖಾತೆಗಳು ವಿಪಿಎನ್ ಮೂಲಕ ಪಾಕಿಸ್ತಾನದಿಂದ ಕಾರ್ಯನಿರ್ವಹಿಸುತ್ತಿವೆ. ಇದರ ಕುರಿತು ಹೆಚ್ಚಿನ ತನಿಖೆಯಾಗುತ್ತಿದೆ ಎಂದು ಹೇಳಿದ್ದಾರೆ.</p><p>ಏ.13ರಂದು ಈ ಖಾತೆಗಳ ಮೂಲಕ ಪ್ರಚೋದನಾಕಾರಿ ಮತ್ತು ಸುಳ್ಳುಸುದ್ದಿಗಳ ಪೋಸ್ಟ್ಗಳನ್ನು ಹಾಕಲಾಗಿತ್ತು. ಇದರಿಂದ ಕಾನೂನು ಸುವ್ಯವಸ್ಥೆಗೆ ದಕ್ಕೆಯುಂಟಾಗಿತ್ತು ಎಂದು ಹೇಳಿದ್ದಾರೆ. </p><p>ವೇತನ ಹೆಚ್ಚಳಕ್ಕೆ ಆಗ್ರಹಿಸಿ ನೊಯ್ಡಾದ ಹಲವು ಕಾರ್ಖಾನೆಗಳ ಕಾರ್ಮಿಕರು ಪ್ರತಿಭಟನೆ ಕೈಗೊಂಡಿದ್ದರು. ಈ ವೇಳೆ ಅದು ಹಿಂಸಾಚಾರಕ್ಕೆ ತಿರುಗಿತ್ತು. ಆನಂತರ ಉತ್ತರ ಪ್ರದೇಶ ಸರ್ಕಾರವು ವೇತನ ಹೆಚ್ಚಳ ಮಾಡಿತ್ತು ಹಾಗೂ ವೇತನ ಸಲಹಾ ಮಂಡಳಿಯನ್ನು ರಚಿಸುವುದಾಗಿ ಘೋಷಿಸಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನೊಯ್ಡಾ:</strong> ಕಾರ್ಮಿಕ ಪ್ರತಿಭಟನೆಯ ವೇಳೆ ಪಾಕಿಸ್ತಾನದಿಂದ ಕಾರ್ಯನಿರ್ವಹಿಸುತ್ತಿದೆ ಎನ್ನಲಾದ ಸಾಮಾಜಿಕ ಜಾಲತಾಣಗಳ ಖಾತೆಗಳನ್ನು ಬಳಸಿಕೊಂಡು ದಾರಿತಪ್ಪಿಸುವ, ಅಶಾಂತಿಗೆ ಕಾರಣವಾಗುವ ಸುಳ್ಳು ಸುದ್ದಿಗಳನ್ನು ಹರಡಲಾಗುತ್ತಿತ್ತು ಎಂದು ಪೊಲೀಸ್ ಆಯುಕ್ತೆ ಲಕ್ಷ್ಮಿ ಸಿಂಗ್ ಹೇಳಿದ್ದಾರೆ. </p><p>ಗಲಭೆಗೆ ಕಾರಣರಾದ 13 ಜನರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ. </p><p>@Proudindiannavi ಮತ್ತು @Mir_Ilyas_INC ಎನ್ನುವ ಖಾತೆಗಳ ಮೂಲಕ ಸುಳ್ಳುಸುದ್ದಿಗಳನ್ನು ಹರಡಲಾಗುತ್ತಿತ್ತು. ತನಿಖೆಯ ವೇಳೆ ಈ ಎರಡೂ ಖಾತೆಗಳು ವಿಪಿಎನ್ ಮೂಲಕ ಪಾಕಿಸ್ತಾನದಿಂದ ಕಾರ್ಯನಿರ್ವಹಿಸುತ್ತಿವೆ. ಇದರ ಕುರಿತು ಹೆಚ್ಚಿನ ತನಿಖೆಯಾಗುತ್ತಿದೆ ಎಂದು ಹೇಳಿದ್ದಾರೆ.</p><p>ಏ.13ರಂದು ಈ ಖಾತೆಗಳ ಮೂಲಕ ಪ್ರಚೋದನಾಕಾರಿ ಮತ್ತು ಸುಳ್ಳುಸುದ್ದಿಗಳ ಪೋಸ್ಟ್ಗಳನ್ನು ಹಾಕಲಾಗಿತ್ತು. ಇದರಿಂದ ಕಾನೂನು ಸುವ್ಯವಸ್ಥೆಗೆ ದಕ್ಕೆಯುಂಟಾಗಿತ್ತು ಎಂದು ಹೇಳಿದ್ದಾರೆ. </p><p>ವೇತನ ಹೆಚ್ಚಳಕ್ಕೆ ಆಗ್ರಹಿಸಿ ನೊಯ್ಡಾದ ಹಲವು ಕಾರ್ಖಾನೆಗಳ ಕಾರ್ಮಿಕರು ಪ್ರತಿಭಟನೆ ಕೈಗೊಂಡಿದ್ದರು. ಈ ವೇಳೆ ಅದು ಹಿಂಸಾಚಾರಕ್ಕೆ ತಿರುಗಿತ್ತು. ಆನಂತರ ಉತ್ತರ ಪ್ರದೇಶ ಸರ್ಕಾರವು ವೇತನ ಹೆಚ್ಚಳ ಮಾಡಿತ್ತು ಹಾಗೂ ವೇತನ ಸಲಹಾ ಮಂಡಳಿಯನ್ನು ರಚಿಸುವುದಾಗಿ ಘೋಷಿಸಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>