<p><strong>ನವದೆಹಲಿ</strong>: ಎರಡನೆಯ ರಾಷ್ಟ್ರೀಯ ನ್ಯಾಯಾಂಗ ವೇತನ ಆಯೋಗದ (ಎಸ್ಎನ್ಜೆಪಿಸಿ) ಶಿಫಾರಸುಗಳನ್ನು ಜಾರಿಗೊಳಿಸದೆ ಇರುವ ಆರೋಪಕ್ಕೆ ಸಂಬಂಧಿಸಿದಂತೆ 18 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳು ಸುಪ್ರೀಂ ಕೋರ್ಟ್ನಲ್ಲಿ ಮಂಗಳವಾರ ನಡೆದ ವಿಚಾರಣೆಯಲ್ಲಿ ಖುದ್ದು ಹಾಜರಾಗಿದ್ದರು.</p>.<p>ನ್ಯಾಯಾಂಗದ ಅಧಿಕಾರಿಗಳಿಗೆ ಪಿಂಚಣಿ ಹಿಂಬಾಕಿ ಮತ್ತು ನಿವೃತ್ತಿ ಪ್ರಯೋಜನಗಳ ಪಾವತಿಗೆ ಸಂಬಂಧಿಸಿದಂತೆ ಆಯೋಗ ಮಾಡಿದ ಶಿಫಾರಸುಗಳನ್ನು ಜಾರಿಗೊಳಿಸಿಲ್ಲ ಎಂಬ ಆರೋಪ ಇದೆ.</p>.<p>ಮಧ್ಯಪ್ರದೇಶ, ತಮಿಳುನಾಡು, ಮೇಘಾಲಯ, ಹಿಮಾಚಲ ಪ್ರದೇಶ, ಪಶ್ಚಿಮ ಬಂಗಾಳ, ಬಿಹಾರ, ಒಡಿಶಾ, ಕೇರಳ ಮತ್ತು ದೆಹಲಿಯ ಮುಖ್ಯ ಕಾರ್ಯದರ್ಶಿಗಳು ಶಿಫಾರಸಿನ ಅನುಷ್ಠಾನಕ್ಕೆ ಕೈಗೊಂಡಿರುವ ಕ್ರಮಗಳ ಕುರಿತು ಪ್ರಮಾಣಪತ್ರ ಸಲ್ಲಿಸಿದರು.</p>.<p>ಈ ಮುಖ್ಯ ಕಾರ್ಯದರ್ಶಿಗಳ ವಿರುದ್ಧ ಕ್ರಮ ಜರುಗಿಸಬಾರದು ಎಂದು ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ. ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠವು ಆದೇಶಿಸಿತು. ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದೀವಾಲಾ ಮತ್ತು ಮನೋಜ್ ಮಿಶ್ರಾ ಅವರೂ ಈ ಪೀಠದಲ್ಲಿ ಇದ್ದಾರೆ.</p>.<p>ಶಿಫಾರಸುಗಳನ್ನು ಅನುಷ್ಠಾನಕ್ಕೆ ತಂದಿರುವ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳು ಮತ್ತು ಹಣಕಾಸು ಇಲಾಖೆಯ ಕಾರ್ಯದರ್ಶಿಗಳು ಕೋರ್ಟ್ ವಿಚಾರಣೆಗೆ ಹಾಜರಾಗಬೇಕಿಲ್ಲ ಎಂದು ಪೀಠ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಎರಡನೆಯ ರಾಷ್ಟ್ರೀಯ ನ್ಯಾಯಾಂಗ ವೇತನ ಆಯೋಗದ (ಎಸ್ಎನ್ಜೆಪಿಸಿ) ಶಿಫಾರಸುಗಳನ್ನು ಜಾರಿಗೊಳಿಸದೆ ಇರುವ ಆರೋಪಕ್ಕೆ ಸಂಬಂಧಿಸಿದಂತೆ 18 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳು ಸುಪ್ರೀಂ ಕೋರ್ಟ್ನಲ್ಲಿ ಮಂಗಳವಾರ ನಡೆದ ವಿಚಾರಣೆಯಲ್ಲಿ ಖುದ್ದು ಹಾಜರಾಗಿದ್ದರು.</p>.<p>ನ್ಯಾಯಾಂಗದ ಅಧಿಕಾರಿಗಳಿಗೆ ಪಿಂಚಣಿ ಹಿಂಬಾಕಿ ಮತ್ತು ನಿವೃತ್ತಿ ಪ್ರಯೋಜನಗಳ ಪಾವತಿಗೆ ಸಂಬಂಧಿಸಿದಂತೆ ಆಯೋಗ ಮಾಡಿದ ಶಿಫಾರಸುಗಳನ್ನು ಜಾರಿಗೊಳಿಸಿಲ್ಲ ಎಂಬ ಆರೋಪ ಇದೆ.</p>.<p>ಮಧ್ಯಪ್ರದೇಶ, ತಮಿಳುನಾಡು, ಮೇಘಾಲಯ, ಹಿಮಾಚಲ ಪ್ರದೇಶ, ಪಶ್ಚಿಮ ಬಂಗಾಳ, ಬಿಹಾರ, ಒಡಿಶಾ, ಕೇರಳ ಮತ್ತು ದೆಹಲಿಯ ಮುಖ್ಯ ಕಾರ್ಯದರ್ಶಿಗಳು ಶಿಫಾರಸಿನ ಅನುಷ್ಠಾನಕ್ಕೆ ಕೈಗೊಂಡಿರುವ ಕ್ರಮಗಳ ಕುರಿತು ಪ್ರಮಾಣಪತ್ರ ಸಲ್ಲಿಸಿದರು.</p>.<p>ಈ ಮುಖ್ಯ ಕಾರ್ಯದರ್ಶಿಗಳ ವಿರುದ್ಧ ಕ್ರಮ ಜರುಗಿಸಬಾರದು ಎಂದು ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ. ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠವು ಆದೇಶಿಸಿತು. ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದೀವಾಲಾ ಮತ್ತು ಮನೋಜ್ ಮಿಶ್ರಾ ಅವರೂ ಈ ಪೀಠದಲ್ಲಿ ಇದ್ದಾರೆ.</p>.<p>ಶಿಫಾರಸುಗಳನ್ನು ಅನುಷ್ಠಾನಕ್ಕೆ ತಂದಿರುವ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳು ಮತ್ತು ಹಣಕಾಸು ಇಲಾಖೆಯ ಕಾರ್ಯದರ್ಶಿಗಳು ಕೋರ್ಟ್ ವಿಚಾರಣೆಗೆ ಹಾಜರಾಗಬೇಕಿಲ್ಲ ಎಂದು ಪೀಠ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>