<p><strong>ನವದೆಹಲಿ</strong>: ವಿಜೇತ ಅಭ್ಯರ್ಥಿಯು ಆಸ್ತಿ ವಿವರಗಳನ್ನು ಬಹಿರಂಗಪಡಿಸಿಲ್ಲ ಎಂಬ ಕಾರಣಕ್ಕಾಗಿ, ನ್ಯಾಯಾಲಯಗಳು ಅತ್ಯಂತ ನಿಷ್ಠುರ ಮತ್ತು ಅತಿಸೂಕ್ಷ್ಮ ವಿಧಾನವನ್ನು ಅಳವಡಿಸಿಕೊಂಡು ಚುನಾವಣೆಯ ಫಲಿತಾಂಶವನ್ನು ಅಸಿಂಧುಗೊಳಿಸಲು ಆತುರಪಡಬಾರದು ಎಂಬ ಮಹತ್ವದ ಅಭಿಪ್ರಾಯವನ್ನು ಸುಪ್ರೀಂ ಕೋರ್ಟ್ ಸೋಮವಾರ ವ್ಯಕ್ತಪಡಿಸಿದೆ.</p><p>ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಎನ್. ಕೋಟೀಶ್ವರ್ ಸಿಂಗ್ ಅವರ ಪೀಠವು, ನಿರ್ದಿಷ್ಟ ಅಭ್ಯರ್ಥಿಯು ಆಸ್ತಿ ವಿವರ ಬಹಿರಂಗಪಡಿಸದಿರುವುದು ಚುನಾವಣೆಯ ಫಲಿತಾಂಶದ ಮೇಲೆ ಪ್ರಭಾವ ಬೀರುವಷ್ಟು ಗಂಭೀರ ಸ್ವರೂಪದ್ದಾಗಿತ್ತೇ ಎಂಬುದನ್ನು ನ್ಯಾಯಾಲಯಗಳು ಖಚಿತಪಡಿಸಿಕೊಳ್ಳಬೇಕು ಎಂದು ಹೇಳಿದೆ.</p><p>2023ರ ಡಿಸೆಂಬರ್ 3ರಂದು ನಡೆದ ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಬಿಆರ್ಎಸ್ನ ಕೋವ ಲಕ್ಷ್ಮಿ ಅವರ ಆಯ್ಕೆಯನ್ನು ಪ್ರಶ್ನಿಸಿ ಕಾಂಗ್ರೆಸ್ ಅಭ್ಯರ್ಥಿ ಅಜ್ಮೇರಾ ಶ್ಯಾಮ್ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿತು. </p><p>ಗೆದ್ದ ಅಭ್ಯರ್ಥಿಯು ಕಳೆದ ಐದು ವರ್ಷಗಳಲ್ಲಿ ನಾಲ್ಕು ವರ್ಷಗಳ ಆದಾಯ ತೆರಿಗೆ ರಿಟರ್ನ್ಸ್ಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಪ್ರಮಾಣಪತ್ರದಲ್ಲಿ ಬಹಿರಂಗಪಡಿಸದಿರುವುದು ಗಂಭೀರ ಸ್ವರೂಪದ ದೋಷ ಅಲ್ಲ ಎಂದು ಪೀಠವು ಹೇಳಿದೆ. </p><p>ಅರ್ಜಿ ವಜಾ: 2024ರಲ್ಲಿ ನಡೆದ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ. </p><p>ಬಾಂಬೆ ಹೈಕೋರ್ಟ್ ನೀಡಿದ್ದ ತೀರ್ಪಿನ ವಿರುದ್ಧ ಚೇತನ್ ಚಂದ್ರಕಾಂತ್ ಎಂಬವರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲು ನ್ಯಾಯಮೂರ್ತಿಗಳಾದ ಎಂ.ಎಂ.ಸುಂದರೇಶ್ ಮತ್ತು ಎನ್.ಕೋಟೀಶ್ವರ್ ಸಿಂಗ್ ಅವರ ಪೀಠ ನಿರಾಕರಿಸಿತು.</p><p>ಮತದಾನದ ದಿನ ಸಂಜೆ 6 ಗಂಟೆಯ ನಂತರ ಮತದಾನ ಮುಗಿಯುವವರೆಗೆ 76 ಲಕ್ಷ ಮತಗಳು ಚಲಾವಣೆಯಾಗಿವೆ ಎಂಬ ಕಾರಣ ಮುಂದಿಟ್ಟು ಚೇತನ್ ಅವರು ಅರ್ಜಿ ಸಲ್ಲಿಸಿದ್ದರು. ಅವರ ಅರ್ಜಿಯನ್ನು ಬಾಂಬೆ ಹೈಕೋರ್ಟ್ ಇದೇ ಜೂನ್ 25ರಂದು ತಿರಸ್ಕರಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ವಿಜೇತ ಅಭ್ಯರ್ಥಿಯು ಆಸ್ತಿ ವಿವರಗಳನ್ನು ಬಹಿರಂಗಪಡಿಸಿಲ್ಲ ಎಂಬ ಕಾರಣಕ್ಕಾಗಿ, ನ್ಯಾಯಾಲಯಗಳು ಅತ್ಯಂತ ನಿಷ್ಠುರ ಮತ್ತು ಅತಿಸೂಕ್ಷ್ಮ ವಿಧಾನವನ್ನು ಅಳವಡಿಸಿಕೊಂಡು ಚುನಾವಣೆಯ ಫಲಿತಾಂಶವನ್ನು ಅಸಿಂಧುಗೊಳಿಸಲು ಆತುರಪಡಬಾರದು ಎಂಬ ಮಹತ್ವದ ಅಭಿಪ್ರಾಯವನ್ನು ಸುಪ್ರೀಂ ಕೋರ್ಟ್ ಸೋಮವಾರ ವ್ಯಕ್ತಪಡಿಸಿದೆ.</p><p>ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಎನ್. ಕೋಟೀಶ್ವರ್ ಸಿಂಗ್ ಅವರ ಪೀಠವು, ನಿರ್ದಿಷ್ಟ ಅಭ್ಯರ್ಥಿಯು ಆಸ್ತಿ ವಿವರ ಬಹಿರಂಗಪಡಿಸದಿರುವುದು ಚುನಾವಣೆಯ ಫಲಿತಾಂಶದ ಮೇಲೆ ಪ್ರಭಾವ ಬೀರುವಷ್ಟು ಗಂಭೀರ ಸ್ವರೂಪದ್ದಾಗಿತ್ತೇ ಎಂಬುದನ್ನು ನ್ಯಾಯಾಲಯಗಳು ಖಚಿತಪಡಿಸಿಕೊಳ್ಳಬೇಕು ಎಂದು ಹೇಳಿದೆ.</p><p>2023ರ ಡಿಸೆಂಬರ್ 3ರಂದು ನಡೆದ ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಬಿಆರ್ಎಸ್ನ ಕೋವ ಲಕ್ಷ್ಮಿ ಅವರ ಆಯ್ಕೆಯನ್ನು ಪ್ರಶ್ನಿಸಿ ಕಾಂಗ್ರೆಸ್ ಅಭ್ಯರ್ಥಿ ಅಜ್ಮೇರಾ ಶ್ಯಾಮ್ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿತು. </p><p>ಗೆದ್ದ ಅಭ್ಯರ್ಥಿಯು ಕಳೆದ ಐದು ವರ್ಷಗಳಲ್ಲಿ ನಾಲ್ಕು ವರ್ಷಗಳ ಆದಾಯ ತೆರಿಗೆ ರಿಟರ್ನ್ಸ್ಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಪ್ರಮಾಣಪತ್ರದಲ್ಲಿ ಬಹಿರಂಗಪಡಿಸದಿರುವುದು ಗಂಭೀರ ಸ್ವರೂಪದ ದೋಷ ಅಲ್ಲ ಎಂದು ಪೀಠವು ಹೇಳಿದೆ. </p><p>ಅರ್ಜಿ ವಜಾ: 2024ರಲ್ಲಿ ನಡೆದ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ. </p><p>ಬಾಂಬೆ ಹೈಕೋರ್ಟ್ ನೀಡಿದ್ದ ತೀರ್ಪಿನ ವಿರುದ್ಧ ಚೇತನ್ ಚಂದ್ರಕಾಂತ್ ಎಂಬವರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲು ನ್ಯಾಯಮೂರ್ತಿಗಳಾದ ಎಂ.ಎಂ.ಸುಂದರೇಶ್ ಮತ್ತು ಎನ್.ಕೋಟೀಶ್ವರ್ ಸಿಂಗ್ ಅವರ ಪೀಠ ನಿರಾಕರಿಸಿತು.</p><p>ಮತದಾನದ ದಿನ ಸಂಜೆ 6 ಗಂಟೆಯ ನಂತರ ಮತದಾನ ಮುಗಿಯುವವರೆಗೆ 76 ಲಕ್ಷ ಮತಗಳು ಚಲಾವಣೆಯಾಗಿವೆ ಎಂಬ ಕಾರಣ ಮುಂದಿಟ್ಟು ಚೇತನ್ ಅವರು ಅರ್ಜಿ ಸಲ್ಲಿಸಿದ್ದರು. ಅವರ ಅರ್ಜಿಯನ್ನು ಬಾಂಬೆ ಹೈಕೋರ್ಟ್ ಇದೇ ಜೂನ್ 25ರಂದು ತಿರಸ್ಕರಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>