<p><strong>ನವದೆಹಲಿ</strong>: ಈಶಾನ್ಯ ರಾಜ್ಯಗಳಲ್ಲಿ ಭಾರಿ ಮಳೆಯಾಗಿದ್ದು ಪ್ರವಾಹ ಪರಿಸ್ಥಿತಿ ಎದುರಾಗಿದೆ. ಈ ನಡುವೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.</p><p>ಈಶಾನ್ಯ ರಾಜ್ಯಗಳಲ್ಲಿ ಪ್ರವಾಹ, ಭೂಕುಸಿತ ಮತ್ತು ಭಾರಿ ಮಳೆಯಿಂದ ತತ್ತರಿಸಿದ್ದು, ಈ ಸಂಬಂಧ ಸಾಮಾಜಿಕ ಜಾಲತಾಣ 'ಎಕ್ಸ್'ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಖರ್ಗೆ, ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲಿ ಈಶಾನ್ಯ ರಾಜ್ಯಗಳಿಗೆ ನೆರವು ಘೋಷಿಸಬೇಕೆಂದು ಮೋದಿಯನ್ನು ಒತ್ತಾಯಿಸಿದ್ದಾರೆ.</p><p>2016ರಲ್ಲಿ ಅಸ್ಸಾಂ ರಾಜ್ಯವನ್ನು ಪ್ರವಾಹ ಮುಕ್ತಗೊಳಿಸುವುದಾಗಿ ಮೋದಿ ಭರವಸೆ ನೀಡಿದ್ದರು. ಸ್ಮಾರ್ಟ್ ಸಿಟಿ ಎಂದು ಕರೆಯಲ್ಪಡುವ ಗುವಾಹಟಿಯ ದೃಶ್ಯಗಳನ್ನು ನೋಡಿದಾಗ, ಡಬಲ್ ಎಂಜಿನ್ ಸರ್ಕಾರಗಳು ಅಸ್ಸಾಂಗೆ ಹೇಗೆ ದ್ರೋಹ ಬಗೆದಿವೆ ಎಂಬುದನ್ನು ನೆನಪಿಸುತ್ತದೆ ಎಂದು ಖರ್ಗೆ ಟೀಕಿಸಿದ್ದಾರೆ.</p>.ಅಣ್ಣಾ ವಿವಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಜ್ಞಾನಶೇಖರನ್ಗೆ 30 ವರ್ಷ ಜೈಲು!.ವಿರಾಟ್ ಕೊಹ್ಲಿ ಸಹ ಮಾಲೀಕತ್ವದ ಬೆಂಗಳೂರಿನ 'ಒನ್8 ಕಮ್ಯೂನ್' ವಿರುದ್ಧ ಪ್ರಕರಣ. <p>ಅಸ್ಸಾಂ, ಅರುಣಾಚಲ, ಮಣಿಪುರ, ಸಿಕ್ಕಿಂ ಮತ್ತು ಮೇಘಾಲಯ ಅತಿ ಹೆಚ್ಚು ಹಾನಿಗೊಳಗಾದ ರಾಜ್ಯಗಳಾಗಿವೆ. ಮಳೆ ಸಂಬಂಧಿತ ಅವಘಡಗಳಲ್ಲಿ ಅನೇಕ ಮಂದಿ ಮೃತಪಟ್ಟಿದ್ದರೆ, ಲಕ್ಷಾಂತರ ಜನರು ತೊಂದರೆಗೀಡಾಗಿದ್ದಾರೆ ಎಂದು ಖರ್ಗೆ ತಿಳಿಸಿದ್ದಾರೆ.</p><p>ಅಭಿವೃದ್ಧಿ ವಿಷಯಗಳಿಂದ ಭಾವನಾತ್ಮಕ ವಿಷಯಗಳತ್ತ ಗಮನ ಸೆಳೆಯುವುದು ಹಾಗೂ ವಿಚಲಿತಗೊಳಿಸುವುದು ಬಿಜೆಪಿಯ ರಾಜಕೀಯದ ವಿಶಿಷ್ಟ ಲಕ್ಷಣವಾಗಿದೆ. ಈ ಸಂದರ್ಭದಲ್ಲಿ ಮೋದಿ ಸರ್ಕಾರ, ಯಾವುದೇ ಲೆಕ್ಕಪರಿಶೋಧನೆಯಿಲ್ಲದೆಯೇ ಕೋಟ್ಯಂತರ ರೂಪಾಯಿ ಮೌಲ್ಯದ ಪಿಎಂ ಕೇರ್ಸ್ ನಿಧಿಯ ಬಾಗಿಲು ತೆರೆಯಬಹುದು ಎಂದು ಖರ್ಗೆ ಆರೋಪಿಸಿದ್ದಾರೆ.</p>.Manipur Flood | ಮಣಿಪುರದಲ್ಲಿ ಪ್ರವಾಹ ಪರಿಸ್ಥಿತಿ; 19 ಸಾವಿರ ಜನರಿಗೆ ಸಂಕಷ್ಟ.ವಿಡಿಯೊ: ಧುಮ್ಮಿಕ್ಕಿ ಹರಿಯುತ್ತಿದ್ದ ಹಳ್ಳದಲ್ಲಿ ತೂಗು ಸೇತುವೆ ದಾಟಿದ ಭೂಪ!.ಪಾಕ್ ಭಯೋತ್ಪಾದನೆ: ಈಜಿಪ್ಟ್ ತಲುಪಿದ ಸುಪ್ರಿಯಾ ಸುಳೆ ನೇತೃತ್ವದ ನಿಯೋಗ.ಅಮೆರಿಕದಲ್ಲಿ ಇಸ್ರೇಲಿಗರ ಮೇಲೆ ಪೆಟ್ರೋಲ್ ಬಾಂಬ್ ದಾಳಿ: ಏಳು ಜನರಿಗೆ ಗಾಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಈಶಾನ್ಯ ರಾಜ್ಯಗಳಲ್ಲಿ ಭಾರಿ ಮಳೆಯಾಗಿದ್ದು ಪ್ರವಾಹ ಪರಿಸ್ಥಿತಿ ಎದುರಾಗಿದೆ. ಈ ನಡುವೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.</p><p>ಈಶಾನ್ಯ ರಾಜ್ಯಗಳಲ್ಲಿ ಪ್ರವಾಹ, ಭೂಕುಸಿತ ಮತ್ತು ಭಾರಿ ಮಳೆಯಿಂದ ತತ್ತರಿಸಿದ್ದು, ಈ ಸಂಬಂಧ ಸಾಮಾಜಿಕ ಜಾಲತಾಣ 'ಎಕ್ಸ್'ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಖರ್ಗೆ, ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲಿ ಈಶಾನ್ಯ ರಾಜ್ಯಗಳಿಗೆ ನೆರವು ಘೋಷಿಸಬೇಕೆಂದು ಮೋದಿಯನ್ನು ಒತ್ತಾಯಿಸಿದ್ದಾರೆ.</p><p>2016ರಲ್ಲಿ ಅಸ್ಸಾಂ ರಾಜ್ಯವನ್ನು ಪ್ರವಾಹ ಮುಕ್ತಗೊಳಿಸುವುದಾಗಿ ಮೋದಿ ಭರವಸೆ ನೀಡಿದ್ದರು. ಸ್ಮಾರ್ಟ್ ಸಿಟಿ ಎಂದು ಕರೆಯಲ್ಪಡುವ ಗುವಾಹಟಿಯ ದೃಶ್ಯಗಳನ್ನು ನೋಡಿದಾಗ, ಡಬಲ್ ಎಂಜಿನ್ ಸರ್ಕಾರಗಳು ಅಸ್ಸಾಂಗೆ ಹೇಗೆ ದ್ರೋಹ ಬಗೆದಿವೆ ಎಂಬುದನ್ನು ನೆನಪಿಸುತ್ತದೆ ಎಂದು ಖರ್ಗೆ ಟೀಕಿಸಿದ್ದಾರೆ.</p>.ಅಣ್ಣಾ ವಿವಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಜ್ಞಾನಶೇಖರನ್ಗೆ 30 ವರ್ಷ ಜೈಲು!.ವಿರಾಟ್ ಕೊಹ್ಲಿ ಸಹ ಮಾಲೀಕತ್ವದ ಬೆಂಗಳೂರಿನ 'ಒನ್8 ಕಮ್ಯೂನ್' ವಿರುದ್ಧ ಪ್ರಕರಣ. <p>ಅಸ್ಸಾಂ, ಅರುಣಾಚಲ, ಮಣಿಪುರ, ಸಿಕ್ಕಿಂ ಮತ್ತು ಮೇಘಾಲಯ ಅತಿ ಹೆಚ್ಚು ಹಾನಿಗೊಳಗಾದ ರಾಜ್ಯಗಳಾಗಿವೆ. ಮಳೆ ಸಂಬಂಧಿತ ಅವಘಡಗಳಲ್ಲಿ ಅನೇಕ ಮಂದಿ ಮೃತಪಟ್ಟಿದ್ದರೆ, ಲಕ್ಷಾಂತರ ಜನರು ತೊಂದರೆಗೀಡಾಗಿದ್ದಾರೆ ಎಂದು ಖರ್ಗೆ ತಿಳಿಸಿದ್ದಾರೆ.</p><p>ಅಭಿವೃದ್ಧಿ ವಿಷಯಗಳಿಂದ ಭಾವನಾತ್ಮಕ ವಿಷಯಗಳತ್ತ ಗಮನ ಸೆಳೆಯುವುದು ಹಾಗೂ ವಿಚಲಿತಗೊಳಿಸುವುದು ಬಿಜೆಪಿಯ ರಾಜಕೀಯದ ವಿಶಿಷ್ಟ ಲಕ್ಷಣವಾಗಿದೆ. ಈ ಸಂದರ್ಭದಲ್ಲಿ ಮೋದಿ ಸರ್ಕಾರ, ಯಾವುದೇ ಲೆಕ್ಕಪರಿಶೋಧನೆಯಿಲ್ಲದೆಯೇ ಕೋಟ್ಯಂತರ ರೂಪಾಯಿ ಮೌಲ್ಯದ ಪಿಎಂ ಕೇರ್ಸ್ ನಿಧಿಯ ಬಾಗಿಲು ತೆರೆಯಬಹುದು ಎಂದು ಖರ್ಗೆ ಆರೋಪಿಸಿದ್ದಾರೆ.</p>.Manipur Flood | ಮಣಿಪುರದಲ್ಲಿ ಪ್ರವಾಹ ಪರಿಸ್ಥಿತಿ; 19 ಸಾವಿರ ಜನರಿಗೆ ಸಂಕಷ್ಟ.ವಿಡಿಯೊ: ಧುಮ್ಮಿಕ್ಕಿ ಹರಿಯುತ್ತಿದ್ದ ಹಳ್ಳದಲ್ಲಿ ತೂಗು ಸೇತುವೆ ದಾಟಿದ ಭೂಪ!.ಪಾಕ್ ಭಯೋತ್ಪಾದನೆ: ಈಜಿಪ್ಟ್ ತಲುಪಿದ ಸುಪ್ರಿಯಾ ಸುಳೆ ನೇತೃತ್ವದ ನಿಯೋಗ.ಅಮೆರಿಕದಲ್ಲಿ ಇಸ್ರೇಲಿಗರ ಮೇಲೆ ಪೆಟ್ರೋಲ್ ಬಾಂಬ್ ದಾಳಿ: ಏಳು ಜನರಿಗೆ ಗಾಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>