<p><strong>ನವದೆಹಲಿ:</strong> ಪೂರ್ವ ಲಡಾಖ್ನ ವಾಸ್ತವ ನಿಯಂತ್ರಣ ರೇಖೆಯಾದ್ಯಂತ (ಎಲ್ಎಸಿ) ಪರಿಸ್ಥಿತಿ ಸಹಜವಾಗಿದೆ ಎಂದು ಸೇನೆಯ ಉತ್ತರ ಕಮಾಂಡ್ನ ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ ತಿಳಿಸಿದ್ದಾರೆ.</p>.<p>ಭಾರತ–ಚೀನಾ ಗಡಿಯುದ್ದಕ್ಕೂ ಕಟ್ಟೆಚ್ಚರ ವಹಿಸಲಾಗಿದೆ. ಕಾರ್ಯಾಚರಣೆ ಸನ್ನದ್ಧತೆ ಮತ್ತು ಸಿದ್ಧತೆಯಲ್ಲಿ ಯಾವುದೇ ರೀತಿಯ ಭದ್ರತಾ ಲೋಪವಾಗಿಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ.</p>.<p><a href="https://www.prajavani.net/india-news/kerala-has-become-a-breeding-centre-for-islamic-terrorism-under-left-rule-alleges-nadda-934634.html" itemprop="url">ಎಡರಂಗದ ಆಡಳಿತದಲ್ಲಿ ಇಸ್ಲಾಮ್ ಉಗ್ರರ ಉತ್ಪಾದನಾ ಕೇಂದ್ರವಾದ ಕೇರಳ: ನಡ್ಡಾ ಆರೋಪ </a></p>.<p>‘ಎಲ್ಎಸಿಯಾದ್ಯಂತ ಕಾರ್ಯಾಚರಣೆ ಸನ್ನದ್ಧತೆ ವಿಚಾರದಲ್ಲಿ ಯಾವುದೇ ರೀತಿಯ ಲೋಪವಾಗಿಲ್ಲ. ಈ ವಿಚಾರವಾಗಿ ನಾನು ನಿಮಗೆ ಖಾತರಿ ನೀಡಬಲ್ಲೆ’ ಎಂದು ಸೇನೆ ಆಯೋಜಿಸಿರುವ ‘ನಾರ್ತ್ ಟೆಕ್ ಸಿಂಪೋಸಿಯಂ 2022’ ಸಂದರ್ಭದಲ್ಲಿ ವರದಿಗಾರರಿಗೆ ತಿಳಿಸಿದ್ದಾರೆ.</p>.<p>‘ಗಡಿಯುದ್ದಕ್ಕೂ ಕಟ್ಟೆಚ್ಚರ ವಹಿಸಲಾಗಿದೆ. 2020ರ ಏಪ್ರಿಲ್ನಲ್ಲಿ ನಡೆದಂಥ ಘಟನೆ ಮರುಕಳಿಸದಂತೆ ಎಲ್ಲ ರೀತಿಯಲ್ಲಿಯೂ ಎಚ್ಚರ ವಹಿಸಲಾಗುತ್ತಿದೆ. ಎದುರಾಳಿಯು ಅಂಥ ದುಸ್ಸಾಹಸಕ್ಕೆ ಮತ್ತೆ ಕೈಹಾಕದಂತೆ ನೋಡಿಕೊಳ್ಳಲು ಬೇಕಾದ ರೀತಿಯಲ್ಲಿ ನಿಯೋಜನೆಗಳನ್ನು ಮಾಡಲಾಗುತ್ತಿದೆ’ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಪೂರ್ವ ಲಡಾಖ್ನ ವಾಸ್ತವ ನಿಯಂತ್ರಣ ರೇಖೆಯಾದ್ಯಂತ (ಎಲ್ಎಸಿ) ಪರಿಸ್ಥಿತಿ ಸಹಜವಾಗಿದೆ ಎಂದು ಸೇನೆಯ ಉತ್ತರ ಕಮಾಂಡ್ನ ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ ತಿಳಿಸಿದ್ದಾರೆ.</p>.<p>ಭಾರತ–ಚೀನಾ ಗಡಿಯುದ್ದಕ್ಕೂ ಕಟ್ಟೆಚ್ಚರ ವಹಿಸಲಾಗಿದೆ. ಕಾರ್ಯಾಚರಣೆ ಸನ್ನದ್ಧತೆ ಮತ್ತು ಸಿದ್ಧತೆಯಲ್ಲಿ ಯಾವುದೇ ರೀತಿಯ ಭದ್ರತಾ ಲೋಪವಾಗಿಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ.</p>.<p><a href="https://www.prajavani.net/india-news/kerala-has-become-a-breeding-centre-for-islamic-terrorism-under-left-rule-alleges-nadda-934634.html" itemprop="url">ಎಡರಂಗದ ಆಡಳಿತದಲ್ಲಿ ಇಸ್ಲಾಮ್ ಉಗ್ರರ ಉತ್ಪಾದನಾ ಕೇಂದ್ರವಾದ ಕೇರಳ: ನಡ್ಡಾ ಆರೋಪ </a></p>.<p>‘ಎಲ್ಎಸಿಯಾದ್ಯಂತ ಕಾರ್ಯಾಚರಣೆ ಸನ್ನದ್ಧತೆ ವಿಚಾರದಲ್ಲಿ ಯಾವುದೇ ರೀತಿಯ ಲೋಪವಾಗಿಲ್ಲ. ಈ ವಿಚಾರವಾಗಿ ನಾನು ನಿಮಗೆ ಖಾತರಿ ನೀಡಬಲ್ಲೆ’ ಎಂದು ಸೇನೆ ಆಯೋಜಿಸಿರುವ ‘ನಾರ್ತ್ ಟೆಕ್ ಸಿಂಪೋಸಿಯಂ 2022’ ಸಂದರ್ಭದಲ್ಲಿ ವರದಿಗಾರರಿಗೆ ತಿಳಿಸಿದ್ದಾರೆ.</p>.<p>‘ಗಡಿಯುದ್ದಕ್ಕೂ ಕಟ್ಟೆಚ್ಚರ ವಹಿಸಲಾಗಿದೆ. 2020ರ ಏಪ್ರಿಲ್ನಲ್ಲಿ ನಡೆದಂಥ ಘಟನೆ ಮರುಕಳಿಸದಂತೆ ಎಲ್ಲ ರೀತಿಯಲ್ಲಿಯೂ ಎಚ್ಚರ ವಹಿಸಲಾಗುತ್ತಿದೆ. ಎದುರಾಳಿಯು ಅಂಥ ದುಸ್ಸಾಹಸಕ್ಕೆ ಮತ್ತೆ ಕೈಹಾಕದಂತೆ ನೋಡಿಕೊಳ್ಳಲು ಬೇಕಾದ ರೀತಿಯಲ್ಲಿ ನಿಯೋಜನೆಗಳನ್ನು ಮಾಡಲಾಗುತ್ತಿದೆ’ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>