<p><strong>ಮುಂಬೈ:</strong> ‘ಮಹಾರಾಷ್ಟ್ರ ಸರ್ಕಾರದಲ್ಲಿ ಏಕನಾಥ ಶಿಂದೆ ಅವರು ಉಪ ಮುಖ್ಯಮಂತ್ರಿ ಆಗದಿದ್ದರೆ ಪಕ್ಷದ ಯಾವ ಶಾಸಕರೂ ಸರ್ಕಾರದ ಭಾಗವಾಗಿರುವುದಿಲ್ಲ’ ಎಂದು ಶಿವಸೇನಾ ಮುಖಂಡ ಉದಯ ಸಮಂತ್ ಗುರುವಾರ ಹೇಳಿದ್ದಾರೆ.</p><p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪಕ್ಷದ ಯಾವುದೇ ಶಾಸಕರಿಗೆ ಉಪಮುಖ್ಯಮಂತ್ರಿ ಆಗಬೇಕೆಂಬ ಆಸೆಯಿಲ್ಲ. ಆ ಹುದ್ದೆ ಏನಿದ್ದರೂ ಶಿಂದೆ ಅವರದ್ದೇ. ಅವರು ಉಪಮುಖ್ಯಮಂತ್ರಿ ಸ್ಥಾನವನ್ನು ಸ್ವೀಕರಿಸಬೇಕು. ನಮ್ಮ ಬೇಡಿಕೆ ಈಡೇರಿಸುತ್ತಾರೆ ಎಂಬ ಭರವಸೆ ಇದೆ’ ಎಂದಿದ್ದಾರೆ. </p><p>ಬಿಜೆಪಿಯ ದೇವೇಂದ್ರ ಫಡಣವೀಸ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಇಂದು ಸಂಜೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಹಿಂದಿನ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಏಕನಾಥ ಶಿಂದೆ ಅವರು, ಪ್ರಸಕ್ತ ಸರ್ಕಾರದಲ್ಲಿ ಉಪಮುಖ್ಯಮಂತ್ರಿ ಆಗಲು ಹಿಂದೇಟು ಹಾಕಿದ್ದಾರೆ. </p><p>ಫಡಣವೀಸ್ ಅವರು ಇಬ್ಬರು ಉಪಮುಖ್ಯಮಂತ್ರಿ ಅವರೊಂದಿಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಬಿಜೆಪಿ ಮುಖಂಡ ಸುಧೀರ್ ಮುಂಗಂಟಿವಾರ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ‘ಮಹಾರಾಷ್ಟ್ರ ಸರ್ಕಾರದಲ್ಲಿ ಏಕನಾಥ ಶಿಂದೆ ಅವರು ಉಪ ಮುಖ್ಯಮಂತ್ರಿ ಆಗದಿದ್ದರೆ ಪಕ್ಷದ ಯಾವ ಶಾಸಕರೂ ಸರ್ಕಾರದ ಭಾಗವಾಗಿರುವುದಿಲ್ಲ’ ಎಂದು ಶಿವಸೇನಾ ಮುಖಂಡ ಉದಯ ಸಮಂತ್ ಗುರುವಾರ ಹೇಳಿದ್ದಾರೆ.</p><p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪಕ್ಷದ ಯಾವುದೇ ಶಾಸಕರಿಗೆ ಉಪಮುಖ್ಯಮಂತ್ರಿ ಆಗಬೇಕೆಂಬ ಆಸೆಯಿಲ್ಲ. ಆ ಹುದ್ದೆ ಏನಿದ್ದರೂ ಶಿಂದೆ ಅವರದ್ದೇ. ಅವರು ಉಪಮುಖ್ಯಮಂತ್ರಿ ಸ್ಥಾನವನ್ನು ಸ್ವೀಕರಿಸಬೇಕು. ನಮ್ಮ ಬೇಡಿಕೆ ಈಡೇರಿಸುತ್ತಾರೆ ಎಂಬ ಭರವಸೆ ಇದೆ’ ಎಂದಿದ್ದಾರೆ. </p><p>ಬಿಜೆಪಿಯ ದೇವೇಂದ್ರ ಫಡಣವೀಸ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಇಂದು ಸಂಜೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಹಿಂದಿನ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಏಕನಾಥ ಶಿಂದೆ ಅವರು, ಪ್ರಸಕ್ತ ಸರ್ಕಾರದಲ್ಲಿ ಉಪಮುಖ್ಯಮಂತ್ರಿ ಆಗಲು ಹಿಂದೇಟು ಹಾಕಿದ್ದಾರೆ. </p><p>ಫಡಣವೀಸ್ ಅವರು ಇಬ್ಬರು ಉಪಮುಖ್ಯಮಂತ್ರಿ ಅವರೊಂದಿಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಬಿಜೆಪಿ ಮುಖಂಡ ಸುಧೀರ್ ಮುಂಗಂಟಿವಾರ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>